ನಿಧನ

ಚಂದ್ರಯಾನ -3 ಉಡಾವಣೆ ಕೌಂಟ್‌ಡೌನ್ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ನಿಧನ

ಆಂಧ್ರಪ್ರದೇಶ : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆ ಕ್ಷಣಗಣನೆ ಸಂದರ್ಭ ಧ್ವನಿ ನೀಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯ ಸ್ತಂಭನದಿಂದ ನಿಧನರಾದರು. ಅವರಿಗೆ ಐವತ್ತು ವರ್ಷ ವಯಸ್ಸಾಗಿತ್ತು.

Advertisement
Advertisement
Advertisement

ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಅನ್ನು ಉಡಾವಣೆ ಮಾಡಲಾಯಿತು. ಈ ವೇಳೆ ವಿಜ್ಞಾನಿ ವಲಮರ್ತಿ ಅವರು ಚಂದ್ರಯಾನ-3 ಉಡಾವಣೆಯ ಸಂದರ್ಭದಲ್ಲಿ ಧ್ವನಿ ನೀಡಿದ್ದರು.

ಇಸ್ರೋದಲ್ಲಿ, ರಾಕೆಟ್ ಉಡಾವಣೆ ಸಮಯದಲ್ಲಿ ಕೌಂಟ್‌ಡೌನ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಕೌಂಟ್ ಡೌನ್ ಕರ್ತವ್ಯವನ್ನು ತಮ್ಮ ಗಂಭೀರ ಧ್ವನಿಯಿಂದ ನಿರ್ವಹಿಸಿದ ಉದ್ಯೋಗಿ ವಲರ್ಮತಿ ಅವರು ಶನಿವಾರ ರಾತ್ರಿ ಚೆನ್ನೈನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ವಲರ್ಮತಿ ಅವರು ಚಂದ್ರಯಾನ-3 ಸೇರಿದಂತೆ ಇಸ್ರೋ ಕೈಗೊಂಡ ಅನೇಕ ಪ್ರಯೋಗಗಳ ಉಸ್ತುವಾರಿ ವಹಿಸಿದ್ದರು. ಆದಾಗ್ಯೂ, ಜುಲೈ 14 ರಂದು ಅತ್ಯಂತ ಯಶಸ್ವಿಯಾದ ಚಂದ್ರಯಾನ-3 ಉಡಾವಣೆಯು ಅವರ ಕೊನೆಯ ಧ್ವನಿಯಾಗಿತ್ತು.ವಲರ್ಮತಿ ಅವರ ನಿಧಾನಕ್ಕೆ ಇಸ್ರೋ ವಿಜ್ಞಾನಿಗಳು ಕಂಬನಿ ಮಿಡಿದಿದ್ದಾರೆ.

ತಮಿಳುನಾಡಿನ ಅರಿಯಲೂರಿನಲ್ಲಿ 1959 ರಲ್ಲಿ ಜನಿಸಿದ ವಲರ್ಮತಿ ,1984 ರಿಂದ ಇಸ್ರೋ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.

ಇಸ್ರೋದಲ್ಲಿ ಉಡಾವಣೆಯಾದ ರಾಕೆಟ್ ಪ್ರಯೋಗಗಳ ಉಡಾವಣೆ ಕ್ಷಣಗಣನೆಯನ್ನು ಅವರು ಹೇಳುತ್ತಿದ್ದರು. ಹೀಗಾಗಿ ಆಕೆಯ ವಿಶಿಷ್ಟ ಧ್ವನಿ ದೇಶದ ಜನತೆಗೆ ಪರಿಚಿತವಾಯಿತು. ಅವರು 2015 ರಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಮೊದಲ ಬಾರಿಗೆ ಪ್ರಶಸ್ತಿಯನ್ನು ಪಡೆದರು. ಇಸ್ರೋದಿಂದ ನಿವೃತ್ತರಾದ ಅವರು ಶನಿವಾರ ಸಂಜೆ ಹೃದಯಾಘಾತದಿಂದ ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago