ಕ್ರೀಡಾ ಸುದ್ದಿ

ಮೊದಲ ಮಗುವಿನ ಸಂಭ್ರಮದಲ್ಲಿ ಜಸ್ಪ್ರೀತ್- ಸಂಜನಾ; ಫೋಟೊ ಹಂಚಿಕೊಂಡ ಕ್ರಿಕೆಟರ್ ಜಸ್ಪ್ರೀತ್ ಬೂಮ್ರಾ

ಮುಂಬೈ: ಏಷ್ಯಾ ಕಪ್ ಕೂಟದಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದ ಜಸ್ಪ್ರೀತ್ ಬುಮ್ರಾ ರವಿವಾರ ಸಂಜೆ ಭಾರತಕ್ಕೆ ಮರಳಿದ್ದರು. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಬುಮ್ರಾ ಇದೀಗ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೀಗ ಜಸ್ಪ್ರೀತ್ ಬುಮ್ರಾ- ಸಂಜನಾ ಗಣೇಶನ್ ದಂಪತಿಗೆ ಗಂಡು ಮಗುವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಕಟಿಸಿದ್ದಾರೆ.

Advertisement
Advertisement
Advertisement

ನಮ್ಮ ಪುಟ್ಟ ಕುಟುಂಬವು ಬೆಳೆದಿದೆ, ಮತ್ತು ನಮ್ಮ ಹೃದಯಗಳು ನಾವು ಊಹಿಸಲು ಸಾಧ್ಯವಾಗದಷ್ಟು ತುಂಬಿವೆ! ಇಂದು ಬೆಳಿಗ್ಗೆ, ನಾವು ನಮ್ಮ ಪುಟ್ಟ ಹುಡುಗ ಅಂಗದ್ ಜಸ್ಪ್ರೀತ್ ಬುಮ್ರಾ ಅವರನ್ನು ಜಗತ್ತಿಗೆ ಸ್ವಾಗತಿಸಿದ್ದೇವೆ” ಎಂದು ಬುಮ್ರಾ ಬರೆದುಕೊಂಡಿದ್ದಾರೆ.

ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಅವರು 2021ರ ಮಾರ್ಚ್ 15ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.

ಶ್ರೀಲಂಕಾದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಗೆ ಬುಮ್ರಾ ಟೀಂ ಇಂಡಿಯಾದ ಭಾಗವಾಗಿದ್ದಾರೆ. ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲಿ ಆಡಿದ್ದ ಬುಮ್ರಾ ರವಿವಾರ ಭಾರತಕ್ಕೆ ಮರಳಿದ್ದರು. ಸೋಮವಾರ ನಡೆಯಲಿರುವ ನೇಪಾಳ ವಿರುದ್ಧದ ಪಂದ್ಯಕ್ಕೆ ಅವರು ಅಲಭ್ಯರಾಗಲಿದ್ದಾರೆ. ಸೂಪರ್ 4 ಪಂದ್ಯಗಳಿಗೆ ಮತ್ತೆ ಅವರು ತಂಡವನ್ನು ಸೇರಲಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago