ಆರೋಗ್ಯ

ಅತಿಯಾದ ಉಪ್ಪು ಸೇವನೆಯಿಂದ ಅಧಿಕ ರಕ್ತದೊತ್ತಡ ಮಾತ್ರವಲ್ಲ ಈ ಕಾಯಿಲೆಗೂ ಬರಬಹುದು

ಉಪ್ಪಿಗಿಂತ ರುಚಿಯಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ಪರಮಸತ್ಯ. ಉಪ್ಪು ಇಲ್ಲದೆ ಯಾವುದೇ ಆಹಾರವನ್ನು ತಿನ್ನುವುದು ತುಂಬಾ ಕಷ್ಟ. ಹೀಗಾಗಿಯೇ ಮದುವೆ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಹೋದರೆ ಊಟದ ಎಲೆಯಲ್ಲಿ ಮೊದಲು ಬಡಿಸುವ ಪದಾರ್ಥವೇ ಉಪ್ಪು. ಹೋಟೆಲ್ಗಳಲ್ಲೂ ಒಂದು ಡಬ್ಬಿಯಲ್ಲಿ ಉಪ್ಪನ್ನು ಇಟ್ಟಿರುತ್ತಾರೆ. ಉಪ್ಪು ಬೇಕೆ ಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಉಪ್ಪನ್ನು ಅತಿಯಾಗಿ ಸೇವನೆ ಮಾಡುತ್ತಿದ್ದಾರೆ. ಆದರೆ, ಇದು ತುಂಬಾ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

Advertisement
Advertisement
Advertisement

ಅತಿ ಉಪ್ಪಿನಾಂಶ ಇರುವ ಆಹಾರ ಪದಾರ್ಥವನ್ನು ಪ್ರತಿದಿನ ಸೇವಿಸಿದರೆ, ಅಧಿಕ ರಕ್ತದೊತ್ತಡ ಮತ್ತು ಗಂಭೀರ ಜೀರ್ಣಕ್ರಿಯೆ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೆ, ಹೆಚ್ಚುವರಿಯಾಗಿ ರೋಗ ನಿರೋಧಕ ಶಕ್ತಿಯು ಸಹ ಕಡಿಮೆಯಾಗುತ್ತದೆ. ಇದಿಷ್ಟನ್ನು ಹೊರತುಪಡಿಸಿ ಇನ್ನಿತರ ಆರೋಗ್ಯ ಸಮಸ್ಯೆಗಳು ಸಹ ಅತಿಯಾದ ಉಪ್ಪಿನ ಸೇವನೆಯಿಂದ ಬರುತ್ತದೆ.

ರಕ್ತದೊತ್ತಡ: ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹೆಚ್ಚು ಉಪ್ಪು ಸೇವಿಸುವವರು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳಿಗೆ ಸುಲಭವಾಗಿ ಗುರಿಯಾಗುತ್ತಾರೆ. ಹಾಗಾಗಿ ಹೆಚ್ಚು ಉಪ್ಪನ್ನು ಸೇವಿಸದಿರುವುದು ಉತ್ತಮ ಎನ್ನುತ್ತಾರೆ ಆರೋಗ್ಯ ತಜ್ಞರು

ಹೃದಯ ಸಮಸ್ಯೆಗಳು: ಉಪ್ಪನ್ನು ಅತಿಯಾಗಿ ಸೇವಿಸುವುದರಿಂದ ಹೃದಯದ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ದಿನಕ್ಕೆ ಐದು ಗ್ರಾಂಗಿಂತ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಪಾರ್ಶ್ವವಾಯು ಉಂಟಾಗುತ್ತದೆ. ಇದರೊಂದಿಗೆ ಹೃದಯಾಘಾತ, ಪರಿಧಮನಿಯ ಹೃದಯಾಘಾತದಂತಹ ಸಮಸ್ಯೆಗಳೂ ಬರಬಹುದು. ಹಾಗಾಗಿ ಆಹಾರದಲ್ಲಿ ಹೆಚ್ಚು ಉಪ್ಪನ್ನು ತೆಗೆದುಕೊಳ್ಳದಿರುವುದು ಉತ್ತಮ.ನಿರ್ಜಲೀಕರಣ: ಅತಿಯಾಗಿ ಉಪ್ಪನ್ನು ಸೇವಿಸುವುದರಿಂದ ದೇಹದಲ್ಲಿ ನಿರ್ಜಲೀಕರಣ ಸಮಸ್ಯೆಯೂ ಉಂಟಾಗುತ್ತದೆ. ದೇಹ ನಿರ್ಜಲೀಕರಣ ಆದಷ್ಟು ಅನೇಕ ಸಮಸ್ಯೆಗಳನ್ನು ನಮ್ಮ ಬಾಧಿಸುತ್ತವೆ. ಉಪ್ಪು ತಿಂದಾಗ ಚಾಯಾರಿಕೆ ಆಗುವುದನ್ನು ನೀವು ಗಮನಿಸಿರುಬಹುದು. ಅದಕ್ಕಾಗಿಯೇ ಹೆಚ್ಚು ಉಪ್ಪು ಸೇವಿಸಬಾರದು.

ಕಿಡ್ನಿ ಸಮಸ್ಯೆಗಳು: ಅತಿಯಾದ ಉಪ್ಪು ಸೇವನೆಯಿಂದ ಕಿಡ್ನಿ ಹಾಳಾಗುವುದಲ್ಲದೆ ಕೆಲವರಲ್ಲಿ ಕಿಡ್ನಿ ವೈಫಲ್ಯಕ್ಕೂ ಕಾರಣವಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರೊಂದಿಗೆ ಕೆಲವರಲ್ಲಿ ಕಿಡ್ನಿಯಲ್ಲಿ ಕಲ್ಲುಗಳಾಗುವ ಸಂಭವವಿರುತ್ತದೆ. (ಏಜೆನ್ಸೀಸ್)

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago