ಆರೋಗ್ಯ

ನಿತ್ಯಹಾಲು ಕುಡಿಯುವುದರಿಂದ ಪ್ರಾಸ್ಟೇಟ್ ಕ್ಯಾನ್ಸರ್ ಬರುತ್ತಾ ಆಘಾತಕಾರಿ ಸಂಶೋಧನಾ ವರದಿ ಇಲ್ಲಿದೆ

ಪ್ರತಿದಿನ ಹಾಲು ಕುಡಿಯುವ ಪುರುಷರು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಕ್ಕೆ ಗುರಿಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಕೆಲವು ಅಧ್ಯಯನಗಳು ತಿಳಿಸಿವೆ. ಹಾಗಿದ್ದರೆ, ಹಾಲನ್ನು ಸಂಪೂರ್ಣವಾಗಿ ತ್ಯಜಿಸಬೇಕೇ? ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ? ಎಂಬುದನ್ನು ತಿಳಿಯೋಣ.

Advertisement
Advertisement
Advertisement

ಹಾಲು ಕ್ಯಾಲ್ಸಿಯಂನ ಅತ್ಯುತ್ತಮ ಮೂಲವಾಗಿದೆ. ಇದು ನಮ್ಮ ಸ್ನಾಯುಗಳು ಮತ್ತು ಮೂಳೆಗಳ ಆರೋಗ್ಯವನ್ನು ಬಲಪಡಿಸುತ್ತದೆ. ಆದರೆ ಕೆಲವು ಅಧ್ಯಯನಗಳ ಪ್ರಕಾರ ಹಾಲನ್ನು ಕುಡಿಯುವುದರಿಂದ ಪುರುಷರಲ್ಲಿ ಆರೋಗ್ಯ ಸಮಸ್ಯೆಯನ್ನು ಉಂಟು ಮಾಡುತ್ತದೆ. ಹಾಲಿನಲ್ಲಿರುವ ಹಾರ್ಮೋನುಗಳು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು ಎಂದು ಅಧ್ಯಯನಗಳು ತಿಳಿಸಿವೆ.

ಯುನೈಟೆಡ್ ಕಿಂಗ್ಡಮ್ ಮೂಲದ ಕ್ಯಾನ್ಸರ್ ಸಂಶೋಧನಾ ಕೇಂದ್ರವು ತನ್ನ ಸಂಶೋಧನಾ ಫಲಿತಾಂಶಗಳಲ್ಲಿ ಹಾಲು ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ನಡುವಿನ ಸಂಬಂಧವನ್ನು ವಿವರಿಸಿದೆ. ಹಸುವಿನ ಹಾಲಿನಲ್ಲಿ ಈಸ್ಟ್ರೊಜೆನ್ ಮತ್ತು ಇನ್ಸುಲಿನ್ ನಂತಹ ಹಾರ್ಮೋನುಗಳು ನೈಸರ್ಗಿಕವಾಗಿ ಇರುತ್ತವೆ. ಈ ಹಾರ್ಮೋನುಗಳು ಬೆಳವಣಿಗೆಯ ಹಾರ್ಮೋನುಗಳಾಗಿವೆ. ಇವು ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುತ್ತವೆ. ಸಂಶೋಧಕರ ಪ್ರಕಾರ, ಈ ಅಪಾಯವನ್ನು ಕಡಿಮೆ ಮಾಡಲು ಹಾಲು ಸೇವನೆ ಕಡಿಮೆ ಮಾಡುವುದು ಉತ್ತಮ ಎಂದಿದ್ದಾರೆ.Advertisementಅಮೆರಿಕದ ಲೋಮಾ ಲಿಂಡಾ ವಿಶ್ವವಿದ್ಯಾಲಯವು ಮೂರು ದಶಕಗಳಲ್ಲಿ ಸುಮಾರು 22,000 ಪುರುಷರ ಮೇಲೆ ಅಧ್ಯಯನ ಮಾಡಿದೆ. ಪ್ರತಿದಿನ 2.5 ರಷ್ಟು ಡೈರಿ ಉತ್ಪನ್ನಗಳನ್ನು ಸೇವಿಸುವ ಪುರುಷರು ಅದಕ್ಕಿಂತ ಅರ್ಧದಷ್ಟು ಅಥವಾ ಕಡಿಮೆ ಸೇವಿಸುವ ಪುರುಷರಿಗಿಂತ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯವನ್ನು 34 ಪ್ರತಿಶತದಷ್ಟು ಹೆಚ್ಚು ಹೊಂದಿದ್ದಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಸಾಮಾನ್ಯ ಅಥವಾ ಅಧಿಕ ಕೊಬ್ಬಿನ ಹಾಲಿಗಿಂತ ಕಡಿಮೆ ಕೊಬ್ಬಿನ, ಕೆನೆ ರಹಿತ ಹಾಲು ಪ್ರಾಸ್ಟೇಟ್ ಕ್ಯಾನ್ಸರ್‌ಗೆ ಹೆಚ್ಚಿನ ಅಪಾಯವನ್ನು ಹೊಂದಿದೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಲೋಮಾ ಲಿಂಡಾ ವಿಶ್ವವಿದ್ಯಾಲಯದ ಸಂಶೋಧಕರು, ಹಾಲು ಅಥವಾ ಯಾವುದೇ ಆಹಾರದಿಂದ ಕ್ಯಾನ್ಸರ್ ಅಪಾಯವನ್ನು ನಿಖರವಾಗಿ ನಿರ್ಧರಿಸುವುದು ಕಷ್ಟ ಎಂದು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಸಂಶೋಧನೆ ಅಗತ್ಯವಿದೆ. ಹಾಲಿನೊಂದಿಗೆ ತಪ್ಪು ಆಹಾರ ಪದ್ಧತಿ ಮತ್ತು ಕಳಪೆ ಜೀವನಶೈಲಿ ಕೂಡ ಕ್ಯಾನ್ಸರ್ಗೆ ಕಾರಣವಾಗುತ್ತದೆ ಎಂದಿದ್ದಾರೆ. (ಏಜೆನ್ಸೀಸ್)

AddThis Website Tools
ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago