ಕರಾವಳಿ

ಕರಾವಳಿಯಲ್ಲಿ ಉಲ್ಬಣಿಸಿದ ದಡಾರ… ಕಳೆದ ವರ್ಷದಿಂದ ಈ ಬಾರಿ ಏರಿಕೆ!

ಮಂಗಳೂರು: ಕಳೆದ ವರ್ಷಕ್ಕೆ ಹೋಲಿಸಿದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಡಾರ ಪ್ರಕರಣ ಈ ವರ್ಷ ಏರಿಕೆಯಾಗಿದೆ. ದ.ಕ.ದಲ್ಲಿ ಕಳೆದ ವರ್ಷ ಕೇವಲ 3 ಮತ್ತು ಉಡುಪಿಯಲ್ಲಿ 5 ಇದ್ದ ಪ್ರಕರಣ ಈ ವರ್ಷ ಕ್ರಮವಾರ 141 ಮತ್ತು 16ಕ್ಕೆ ಏರಿಕೆ ಕಂಡಿದೆ.

Advertisement
Advertisement
Advertisement

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮಿಷನ್‌ ಇಂದ್ರಧನುಷ್‌ ಎಂಬ ಕಾರ್ಯಕ್ರಮ ಇದ್ದು ನಿಯಮಿತವಾಗಿ ನೀಡಲಾಗುವ ಲಸಿಕೆಯಿಂದ ವಂಚಿತರಾದ ಗರ್ಭಿಣಿ ಮತ್ತು 0ಯಿಂದ 5 ವರ್ಷದೊಳಗಿನ ಮಕ್ಕಳನ್ನು ಪತ್ತೆಹಚ್ಚಿ ಲಸಿಕೆ ನೀಡುವುದು ಇದರ ಉದ್ದೇಶ. ಕಳೆದ ವರ್ಷ ಅಭಿಯಾನ ನಡೆದಿರಲಿಲ್ಲ. ಆದ್ದರಿಂದ 81 ಮಂದಿಯನ್ನಷ್ಟೇ ಪರೀಕ್ಷಿಸಲಾಗಿತ್ತು. ಈ ವರ್ಷ ಮತ್ತೆ ಅಭಿಯಾನ ನಡೆಯುತ್ತಿದ್ದು, ಪರೀಕ್ಷೆಯನ್ನು ಹೆಚ್ಚಿಸ ಲಾಗಿದೆ. ಈ ವರ್ಷ 299 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸಾಮಾನ್ಯವಾಗಿ ಮಕ್ಕಳಲ್ಲಿ ಕಾಣಿಸುವ ಪ್ರಕರಣ ಯುವಜನತೆಯಲ್ಲಿಯೂ ಪತ್ತೆಯಾಗಿದೆ.

ಕರಾವಳಿಯಲ್ಲಿಲ್ಲ ಪ್ರಯೋಗಾಲಯ

ತೀವ್ರ ಜ್ವರ, ದೇಹದಲ್ಲಿ ನೀರಿಲ್ಲದ ಗುಳ್ಳೆ ಇದ್ದರೆ ಶಂಕಿತ ಪ್ರಕರಣಗಳೆಂದು ಪರಿಗಣಿಸಿ ಅಂಥವರ ಗಂಟಲ ದ್ರವ ಮತ್ತು ರಕ್ತದ ಮಾದರಿಯನ್ನು ದಡಾರ ಅಥವಾ ರುಬೆಲ್ಲಾ ಪರೀಕ್ಷೆಗೆಂದು ಕಳುಹಿಸಲಾಗುತ್ತದೆ. ಇದರ ಪ್ರಯೋಗಾಲಯ ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಸರಕಾರಿ ವಲಯದಲ್ಲಿ ಇಲ್ಲದ ಕಾರಣ ಹಾಸನದ ಎಚ್‌ಐಎಂಎಸ್‌ ಅಥವಾ ಬೆಂಗಳೂರಿನ ಎನ್‌ಐವಿಗೆ ಕಳುಹಿಸುವುದು ಅನಿವಾರ್ಯ. ಅಲ್ಲಿ ಒತ್ತಡ ಇದ್ದರೆ ವರದಿ ಬರಲು 5ರಿಂದ 6 ದಿನ ತಗಲುತ್ತದೆ. ಅಷ್ಟರಲ್ಲಿ ರೋಗ ಲಕ್ಷಣ ಉಲ್ಬಣಗೊಳ್ಳುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ದ.ಕ. ಅಥವಾ ಉಡುಪಿಯಲ್ಲಿ ಪ್ರಯೋಗಾಲಯ ತೆರೆಯಬೇಕು ಎಂಬ ಬೇಡಿಕೆ ಬರುತ್ತಿದೆ.

ಹಠಾತ್‌ ಏರಿಕೆ ಆಗಿಲ್ಲಉಡುಪಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ದಡಾರ ಪ್ರಕರಣ ಹೆಚ್ಚಾಗಿರಬಹುದು. ಆದರೆ ಔಟ್‌ಬ್ರೇಕ್‌ (ಹಠಾತ್‌ ಏರಿಕೆ) ಆಗಿಲ್ಲ. ಒಂದು ತಾಲೂಕಿನಲ್ಲಿ ನಾಲ್ಕು ವಾರದೊಳಗೆ 5ಕ್ಕಿಂತ ಹೆಚ್ಚಿನ ಪ್ರಕರಣ ಒಟ್ಟಾಗಿ ಬಂದರೆ ಅದನ್ನು ಔಟ್‌ಬ್ರೇಕ್‌ ಎನ್ನಲಾಗುತ್ತದೆ ಎನ್ನುತ್ತಾರೆ ಉಡುಪಿ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು.

ಹಠಾತ್‌ ಏರಿಕೆ ಆಗಿಲ್ಲ

ಉಡುಪಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ದಡಾರ ಪ್ರಕರಣ ಹೆಚ್ಚಾಗಿರಬಹುದು. ಆದರೆ ಔಟ್‌ಬ್ರೇಕ್‌ (ಹಠಾತ್‌ ಏರಿಕೆ) ಆಗಿಲ್ಲ. ಒಂದು ತಾಲೂಕಿನಲ್ಲಿ ನಾಲ್ಕು ವಾರದೊಳಗೆ 5ಕ್ಕಿಂತ ಹೆಚ್ಚಿನ ಪ್ರಕರಣ ಒಟ್ಟಾಗಿ ಬಂದರೆ ಅದನ್ನು ಔಟ್‌ಬ್ರೇಕ್‌ ಎನ್ನಲಾಗುತ್ತದೆ ಎನ್ನುತ್ತಾರೆ ಉಡುಪಿ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು.

ಲಕ್ಷಣಗಳು

ದಡಾರ/ರುಬೆಲ್ಲಾ ವೈರಸ್‌ನಿಂದ ಬರುವಂತಹ ಕಾಯಿಲೆಗಳು. ದಡಾರದಲ್ಲಿ ಅಧಿಕ ಪ್ರಮಾಣದ ಜ್ವರ ಇರುತ್ತದೆ. ದೇಹದಲ್ಲಿ ಕೆಂಪು ಬಣ್ಣದ ನೀರಿಲ್ಲದ ಗುಳ್ಳೆ (ಬೊಕ್ಕೆ) ಕಾಣಿಸಿಕೊಳ್ಳುತ್ತದೆ. ಮುಖ, ತೋಳು, ಕುತ್ತಿಗೆ, ಕಾಲುಗಳ ಅಡಿ ಭಾಗದಲ್ಲಿ ದಡಿಕೆಗಳು (rashes) ಕಾಣಿಸಿಕೊಳ್ಳುತ್ತವೆ. ಕೆಲವರಿಗೆ ಒಣ ಕೆಮ್ಮು, ಮೂಗು ಸೋರುವಿಕೆ, ಗಂಟಲು ಕೆರೆತವೂ ಇರುತ್ತದೆ. ರುಬೆಲ್ಲಾದಲ್ಲಿ ಜ್ವರ, ತಲೆನೋವು, ಕಣ್ಣು ಅಲ್ಪಪ್ರಮಾಣದಲ್ಲಿ ಗುಲಾಬಿ ಬಣ್ಣಕ್ಕೆ ತಿರುಗುವುದು ಮತ್ತು ದಡಾರದ ಲಕ್ಷಣಗಳೇ ಇರುತ್ತವೆ. ಬಾಧಿತರನ್ನು ಪ್ರತ್ಯೇಕವಾಗಿ ಇರಿಸುವುದು ಒಳಿತು ಎನ್ನುತ್ತಾರೆ ವೈದ್ಯರು.

ದಕ್ಷಿಣ ಕನ್ನಡದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದಡಾರ ಏರಿದೆ. ಹೆಚ್ಚಿನ ಮಂದಿಯನ್ನು ತಪಾಸಣೆಗೆ ಒಳಪಡಿಸಿರುವುದೂ ಕಾರಣವಿರಬಹುದು. ದಡಾರ/ರುಬೆಲ್ಲಾ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ರೋಗದ ಶಂಕಿತರನ್ನು ತಪಾಸಣೆಗೆ ಒಳಪಡಿಸುವಂತೆ ಮೆಡಿಕಲ್‌ ಕಾಲೇಜುಗಳಿಗೂ ಸೂಚನೆ ನೀಡಲಾಗಿದೆ. ಲಕ್ಷಣ ಕಂಡುಬಂದರೆ ತತ್‌ಕ್ಷಣ ಚಿಕಿತ್ಸೆ ಪಡೆಯಬೇಕು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago