ಮನೋರಂಜನೆ

ಹಿಟ್​ ಆ್ಯಂಡ್​ ರನ್​ ಪ್ರಕರಣದಲ್ಲಿ ತಪ್ಪು ಒಪ್ಪಿಕೊಂಡ ಹಾಸ್ಯ ನಟ ಚಂದ್ರಪ್ರಭ

ಕನ್ನಡ ಕಿರುತೆರೆಯ ‘ಗಿಚ್ಚಿ ಗಿಲಿಗಿಲಿ’ ಶೋ ಮೂಲಕ ಜನಪ್ರಿಯತೆ ಪಡೆದ ಹಾಸ್ಯ ನಟ ಚಂದ್ರಪ್ರಭ ಅವರು ವಿವಾದಕ್ಕೆ ಸಿಲುಕಿದ್ದಾರೆ. ಚಿಕ್ಕಮಗಳೂರಿನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಅವರು ಸಂಕಷ್ಟ ಎದುರಿಸುತ್ತಿದ್ದಾರೆ. ಇತ್ತೀಚೆಗೆ ಅವರು ಚಲಿಸುತ್ತಿದ್ದ ಕಾರು ಮಾಲತೇಶ್​ ಎಂಬ ಬೈಕ್​ ಸವಾರನಿಗೆ ಡಿಕ್ಕಿ ಹೊಡಿದಿತ್ತು. ಈ ಘಟನೆಯಲ್ಲಿ ತಮ್ಮದು ಯಾವುದೇ ತಪ್ಪು ಇಲ್ಲ ಎಂದು ಚಂದ್ರಪ್ರಭ ಹೇಳಿಕೆ ನೀಡಿದ್ದರು. ಅಲ್ಲದೇ, ಆ ಬೈಕ್​ ಸವಾರ ಮದ್ಯಪಾನ ಮಾಡಿದ್ದರು ಎಂದು ಕೂಡ ಚಂದ್ರಪ್ರಭ ಆರೋಪಿಸಿದ್ದರು. ಆದರೆ ಈಗ ತಮ್ಮ ಹೇಳಿಕೆ ಬದಲಾಯಿಸಿದ್ದಾರೆ. ಅಂದು ನಡೆದ ಅಪಘಾತದಲ್ಲಿ ತಮ್ಮದೇ ತಪ್ಪು ಎಂದು ಚಂದ್ರಪ್ರಭ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಸಂಚಾರ ಪೊಲೀಸ್​ ಠಾಣೆ ಬಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement
Advertisement

ತಪ್ಪು ಒಪ್ಪಿಕೊಂಡ ಚಂದ್ರಪ್ರಭ:

ಚಿಕ್ಕಮಗಳೂರಿನ ಸಂಚಾರಿ ಠಾಣೆ ಮುಂಭಾಗ ಚಂದ್ರಪ್ರಭ ಅವರು ಕಣ್ಣೀರು ಹಾಕಿದ್ದಾರೆ. ಸೋಮವಾರ (ಸೆಪ್ಟೆಂಬರ್​ 4) ಅವರು ಅಪಘಾತ ಮಾಡಿ ಎಸ್ಕೇಪ್​ ಆಗಿದ್ದರು. ಪೊಲೀಸರ ಸೂಚನೆ ಮೇರೆಗೆ ಇಂದು (ಸೆಪ್ಟೆಂಬರ್​ 8) ಚಿಕ್ಕಮಗಳೂರು ಠಾಣೆಗೆ ಅವರು ಹಾಜರಾಗಿದ್ದಾರೆ. ಈ ವೇಳೆ ಅವರು ತಪ್ಪು ಒಪ್ಪಿಕೊಂಡು ಕಣ್ಣೀರು ಹಾಕಿದ್ದೂ ಅಲ್ಲದೇ, ಅಪಘಾತಕ್ಕೆ ಒಳಗಾದ ಯುವಕನ ಯೋಗಕ್ಷೇಮ ವಿಚಾರಿಸುವುದಾಗಿ ಹೇಳಿದ್ದಾರೆ.

ಅಪಘಾತದ ಬಗ್ಗೆ ಚಂದ್ರಪ್ರಭ ಹೇಳಿಕೆ:

ನಾನು ಮಾಡಿದ ಕೆಲಸ ತಪ್ಪಾಯ್ತು. ಎಲ್ಲರಿಗೂ ಕ್ಷಮೆ ಕೇಳುತ್ತೇನೆ. ಆತ ಕುಡಿದಿದ್ದ ಎಂದು ಹೇಳಿದ್ದೆ. ತಪ್ಪಾಯ್ತು. ನನ್ನನ್ನು ಕ್ಷಮಿಸಿ. ಆತ ಕುಡಿದಿರಲಿಲ್ಲ. ನಾನು ಮತ್ತು ನನ್ನ ಸ್ನೇಹಿತ ಆಸ್ಪತ್ರೆಯವರೆಗೆ ಹೋಗಿದ್ದೆವು. ಆದರೆ ಆಸ್ಪತ್ರೆಗೆ ಸೇರಿಸಲಿಲ್ಲ. ನನಗೆ ಭಯವಾಯಿತು. ಅಪಘಾತವಾದ ಯುವಕನ ಯೋಗಕ್ಷೇಮದ ಬಗ್ಗೆ ನಾನು ವಿಚಾರಿಸಬೇಕಿತ್ತು. ಆದರೆ, ವಿಚಾರಿಸಲಿಲ್ಲ. ನಾನು ಬಡವ, ತಂದೆ ಸತ್ತು 11 ವರ್ಷವಾಯ್ತು. ಆಸ್ಪತ್ರೆಗೆ ಹೋಗಿ ಯೋಗಕ್ಷೇಮ ವಿಚಾರಿಸುತ್ತೇನೆ. ಮಾಲತೇಶ್ ಅವರ ಆಸ್ಪತ್ರೆ ಖರ್ಚಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ’ ಎಂದು ಹಾಸ್ಯನಟ ಚಂದ್ರಪ್ರಭ ಹೇಳಿಕೆ ನೀಡಿದ್ದಾರೆ.

ಅಂದು ಚಂದ್ರಪ್ರಭ ಹೇಳಿದ್ದೇನು?

ನನ್ನ ಕಾರಿನ ಎಡಭಾಗಕ್ಕೆ ಸ್ಕೂಟಿ ಟಚ್​ ಆಯಿತು. ಅದರಲ್ಲಿ ಇದ್ದ ವ್ಯಕ್ತಿ ಕುಡಿದಿದ್ದರು. ನಾನು ಮತ್ತು ನನ್ನ ಸ್ನೇಹಿತರೊಬ್ಬರು ಆಟೋ ಕರೆಸಿ, ಗಾಯಾಳವನ್ನು ಆಸ್ಪತ್ರೆಗೆ ಸೇರಿಸಿದೆವು. ನನಗೆ ಬೇರೆ ಕಾರ್ಯಕ್ರಮ ಇದ್ದಿದ್ದರಿಂದ ಅಲ್ಲಿಂದ ತೆರಳಿದೆ. ನಂತರ ಪೊಲೀಸರು ಫೋನ್​ ಮಾಡಿ ಕರೆದರು. ನಾನು ಶೂಟಿಂಗ್​ನಲ್ಲಿ ಬ್ಯುಸಿ ಆದೆ. ಕಾನೂನಿನ ಪ್ರಕಾರವಾಗಿ ನಾನು ಪೊಲೀಸರು ಹೇಳಿದಂತೆ ಕೇಳುತ್ತೇನೆ. ಸೋಶಿಯಲ್​ ಮೀಡಿಯಾದಲ್ಲಿ ಅಪಪ್ರಚಾರ ಆಗುತ್ತಿದೆ. ಘಟನೆಯ ಸಿಸಿಟಿವಿ ಇದೆ. ಅದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ’ ಎಂದು ಚಂದ್ರಪ್ರಭ ಅವರು ಈ ಮೊದಲು ಹೇಳಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago