ರಾಜಕೀಯ

ಮಂಗಳೂರು ಪಾಲಿಕೆ ಬಿಜೆಪಿ ತೆಕ್ಕೆಗೆ, ಸುಧೀರ್ ಶೆಟ್ಟಿ ಮೇಯರ್, ಸುನೀತಾ ಉಪಮೇಯರ್

mangaluru city corporation mayor and deputy mayor Election 2023 ಮಂಗಳೂರು ನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್​ ಹುದ್ದೆಗೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ ನಿರೀಕ್ಷೆಯಂತೆ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಸುನಿತಾ ಆಯ್ಕೆಯಾಗಿದ್ದಾರೆ. ಇನ್ನು ಮೇಯರ್​ ಹಾಗೂ ಉಪಮೇಯರ್​ಗೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸನ್ಮಾನಿಸಿ ಅಭಿನಂದಿಸಿದರು.

Advertisement
Advertisement
Advertisement

ಮಂಗಳೂರು, (ಸೆಪ್ಟೆಂಬರ್, 08): ಮಂಗಳೂರು ನಗರ ಪಾಲಿಕೆಯ (mangaluru city corporation) 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್​ ಹುದ್ದೆಗೆ ಚುನಾವಣೆ ನಡೆದಿದ್ದು, ಮೇಯರ್​ ಆಗಿ ನಿರೀಕ್ಷೆಯಂತೆ ಬಿಜೆಪಿಯ ಸುಧೀರ್ ಶೆಟ್ಟಿ ಆಯ್ಕೆಯಾಗಿದ್ದರೆ, ಉಪಮೇಯರ್ ಆಗಿ ಸುನಿತಾ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅವಧಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ಸದಸ್ಯ ಮೇಯರ್ ಆಗಿದ್ದರು. ಈ ಬಾರಿ ಮಂಗಳೂರು ದಕ್ಷಿಣ ಕ್ಷೇತ್ರದ ಸದಸ್ಯ ಸುಧೀರ್ ಶೆಟ್ಟಿ ಅವರಿಗೆ ಮೇಯರ್​ ಹುದ್ದೆ ಒಲಿದುಬಂದಿದೆ. ಇನ್ನು ಪರಿಶಿಷ್ಟ ಜಾತಿಯ ಏಕೈಕ ಸದಸ್ಯೆ ಪಣಬೂರು ವಾರ್ಡ್​ನ ಸುನೀತಾ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸುಧೀರ್ ಶೆಟ್ಟಿ ಅವರು ಮೂರನೇ ಬಾರಿಗೆ ಪಾಲಿಕೆಗೆ ಆಯ್ಕೆಯಾಗಿದ್ದು, ಈ ಹಿಂದೆ ಮುಖ್ಯ ಸಚೇತಕರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಕಳೆದ ವರ್ಷ ಮೇಯರ್ ಚುನಾವಣೆ ವೇಳೆ ಸುಧೀರ್ ಅವರ ಹೆಸರು ಕೇಳಿಬಂದಿತ್ತು. ಆದ್ರೆ, ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಲ್ಲವ ಸಮುದಾಯಕ್ಕೆ ಆದ್ಯತೆ ನೀಡಿದ್ದ ಬಿಜೆಪಿ, ಜಯಾನಂದ ಅಂಚನ್​ ಅವರಿಗೆ ಮಣೆ ಹಾಕಿತ್ತು.
ಈ ಅವಧಿಯ ನಾಲ್ಕನೇ ಮೇಯರ್​ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟ 60 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 14, ಹಾಗೂ ಎಸ್​ಡಿಪಿಐ 2 ಸ್ಥಾನಗಳನ್ನು ಹೊಂದಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago