ರಾಜಕೀಯ

ಲೋಕಸಭೆ ಚುನಾವಣೆ,ಬಿಜೆಪಿ – ಜೆಡಿಎಸ್ ಮೈತ್ರಿಗೆ ಅಮಿತ್ ಷಾ ಒಪ್ಪಿಗೆ : ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೊಸ ಸಂಚಲನ ಒಂದನ್ನು ಸೃಷ್ಟಿಸಿದ್ದಾರೆ. ​

Advertisement
Advertisement
Advertisement

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಬಿಎಸ್ ವೈ ಕೇಂದ್ರ ಗೃಹ ಸಚಿವ ಅಮಿತ್ ಷಾರವರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಪ್ಪಿದ್ದಾರೆ. 4 ಸ್ಥಾನಗಳನ್ನು ಬಿಟ್ಟುಕೊಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಜೆಡಿಎಸ್​ ಜೊತೆಗಿನ ಮೈತ್ರಿಯಿಂದ ನಮಗೆ ಇನ್ನಷ್ಟು ಶಕ್ತಿ ಬರುತ್ತದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಈ ಮೈತ್ರಿ ಸಹಕಾರಯಾಗಲಿದೆ. ಈ ಸಂಬಂಧ ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿ ಮೂಲಗಳ ಪ್ರಕಾರ ಪ್ರಜ್ವಲ್​ ರೇವಣ್ಣ ಅನರ್ಹತೆ ಸಂಬಂಧ ವಕೀಲರೊಂದಿಗೆ ಚರ್ಚಿಸಲು ಇತ್ತೀಚಿಗೆ ದೇವೇಗೌಡರು ದೆಹಲಿಗೆ ತೆರಳಿದ್ದರು. ಈ ವೇಳೆ ಅವರು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕ ಚರ್ಚೆ ನಡೆದಿತ್ತು ಎನ್ನಲಾಗಿದೆ.

ಜೆಡಿಎಸ್​ ಪ್ರಾಬಲ್ಯ ಹೆಚ್ಚಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ ಹಾಗೂ ಮಂಡ್ಯದಲ್ಲಿ ಸ್ಪರ್ಧಿಸಬಹುದು ಎಂದು ಅಂದಾಜಿಸಲಾಗಿದೆ. ಉಳಿದ ಕಡೆ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸುವುದಾಗಿ ಉಭಯ ನಾಯಕರ ನಡುವೆ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಒಂದು ವೇಳೆ ಬಿಜೆಪಿ ಹೈಕಮಾಂಡ್​ ದೇವೇಗೌಡರ ಷರತ್ತಿಗೆ ಒಪ್ಪಿದ್ದಲ್ಲಿ ಸೆಪ್ಟೆಂಬರ್​ 10ರ ನಂತರ ಮೈತ್ರಿ ನಿರ್ಧಾರ ಪ್ರಕಟವಾಗಲಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago