ರಾಷ್ಟ್ರ

ಚಂದ್ರಯಾನ-3ರ ಯಶಸ್ಸಿಗೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ನವದೆಹಲಿ, ಸೆಪ್ಟೆಂಬರ್ 8: ಭಾರತದ ಚಂದ್ರಯಾನ-3 ಯೋಜನೆಯ ಯಶಸ್ಸಿಗಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ವಿಜ್ಞಾನಿಗಳನ್ನು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅಭಿನಂದಿಸಿದರು. ಜಿ20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಭಾರತಕ್ಕೆ ಬಂದಿರುವ ಅವರು ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಆ ಬಳಿಕ ಭಾರತ, ಅಮೆರಿಕದಿಂದ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಉಭಯ ನಾಯಕರು ನಡೆಸಿರುವ ಮಾತುಕತೆಯ ವಿವರ ನೀಡಲಾಗಿದೆ.

Advertisement
Advertisement
Advertisement

ಉಭಯ ದೇಶಗಳ ನಡುವೆ ರಾಜಕೀಯ ಪಾಲುದಾರಿಕೆಗಾಗಿ ತಾಂತ್ರಿಕ ಸಹಕಾರದ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಜತೆಗೆ ಚೀನಾದ ಬಗ್ಗೆಯೂ ಮಾತುಕತೆ ನಡೆದಿದೆ. ಕ್ವಾಡ್ ಸಭೆಯಲ್ಲಿ ಪಾಲ್ಗೊಳ್ಳಲು ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವಂತೆ ಬೈಡನ್ ಅವರನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ.

ಎಂಕ್ಯು9 ರೀಪರ್ ಡ್ರೋನ್ ಮತ್ತು ಜೆಟ್ ಎಂಜಿನ್ ಬಗ್ಗೆ ಉಭಯ ದೇಶಗಳ ನಡುವಿನ ಮಾತುಕತೆಗಳು ಪ್ರಗತಿಯಲ್ಲಿವೆ. ಪ್ರಧಾನಿ ಮೋದಿ ಮತ್ತು ಬೈಡನ್ ದ್ವಿಪಕ್ಷೀಯ ಮಾತುಕತೆಯಲ್ಲಿ, ಕ್ವಾಡ್‌ನಲ್ಲಿ ಎರಡೂ ದೇಶಗಳ ಸಕ್ರಿಯ ಪಾತ್ರದ ಬಗ್ಗೆಯೂ ಚರ್ಚಿಸಲಾಗಿದೆ. ಜತೆಗೆ ಜಿ 20 ಅಧ್ಯಕ್ಷ ಸ್ಥಾನಕ್ಕಾಗಿ ಭಾರತವನ್ನು ಬೈಡನ್ ಶ್ಲಾಘಿಸಿದ್ದಾರೆ.

ಉಭಯ ರಾಷ್ಟ್ರಗಳ ಮುಖ್ಯಸ್ಥರ ನಡುವಿನ ದ್ವಿಪಕ್ಷೀಯ ಮಾತುಕತೆ ಒಟ್ಟು ನಲವತ್ತೈದು ನಿಮಿಷಗಳ ಕಾಲ ನಡೆದಿದೆ. ದ್ವಿಪಕ್ಷೀಯ ಮಾತುಕತೆ ಮುಗಿದ ನಂತರ, ಅಮೆರಿಕದ ಅಧ್ಯಕ್ಷರು ಐಟಿಸಿ ಮೌರ್ಯ ಹೋಟೆಲ್‌ಗೆ ತೆರಳಿದ್ದು, ವಿಶ್ರಾಂತಿ ಪಡೆಯಲಿದ್ದಾರೆ. ದೆಹಲಿ ತಲುಪಿದ ನಂತರ ಬೈಡನ್ ಅವರು ನೇರವಾಗಿ ಪ್ರಧಾನಿ ಮೋದಿ ನಿವಾಸಕ್ಕೆ ತಲುಪಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago