ಇತರೆ

KPSC Jobs: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ- ಡಿಗ್ರಿ ಪಾಸಾದವರಿಂದ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಅಕ್ಟೋಬರ್ 7, 2023 ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು.

Advertisement
Advertisement
Advertisement

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಎಂಪ್ಲಾಯ್​ಮೆಂಟ್ ಆಫೀಸರ್ (HK) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಲೋಕ ಸೇವಾ ಆಯೋಗ
ಹುದ್ದೆಅಸಿಸ್ಟೆಂಟ್ ಎಂಪ್ಲಾಯ್​ಮೆಂಟ್ ಆಫೀಸರ್
ಒಟ್ಟು ಹುದ್ದೆ1
ವಿದ್ಯಾರ್ಹತೆಪದವಿ
ವೇತನಮಾಸಿಕ ₹ 30,350-58,250
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಅಕ್ಟೋಬರ್ 7, 2023

ವಿದ್ಯಾರ್ಹತೆ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 7, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
PH/ ವಿಧವಾ ಅಭ್ಯರ್ಥಿಗಳು- 10 ವರ್ಷ


ಅರ್ಜಿ ಶುಲ್ಕ:
SC/ST/ ಪ್ರವರ್ಗ-1 & PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ.
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ.
ಸಾಮಾನ್ಯ ಅಭ್ಯರ್ಥಿಗಳು- 600 ರೂ.
ಪಾವತಿಸುವ ಬಗೆ- ಆನ್​ಲೈನ್

ವೇತನ:
ಮಾಸಿಕ ₹ 30,350-58,250


ಉದ್ಯೋಗದ ಸ್ಥಳ:
ಕರ್ನಾಟಕ


ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 7, 2023
ಕನ್ನಡ ಭಾಷಾ ಪರೀಕ್ಷೆ ನಡೆಯುವ ದಿನಾಂಕ: ಡಿಸೆಂಬರ್ 2, 2023
ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನ: ಡಿಸೆಂಬರ್ 3, 2023


ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ.


ಕೇಂದ್ರ ಕಚೇರಿ ಮಾಹಿತಿ ಕೇಂದ್ರ ಮತ್ತು ಸಹಾಯವಾಣಿ ಸಂಖ್ಯೆ: 080-30574957/30574901
ಪ್ರಾಂತೀಯ ಕಛೇರಿ ಮೈಸೂರು: 0821-2545956
ಪ್ರಾಂತೀಯ ಕಛೇರಿ ಬೆಳಗಾವಿ: 0831-2475345
ಪ್ರಾಂತೀಯ ಕಛೇರಿ ಕಲಬುರಗಿ: 08472-227944
ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago