ದೇಶ

G20 ಇತಿಹಾಸದಲ್ಲಿ ಅತ್ಯಂತ ಮಹತ್ವಾಕಾಂಕ್ಷೆ ಸಭೆಯಾಗಿ ಹೊರಹೊಮ್ಮಿದ ಭಾರತದ ಅಧ್ಯಕ್ಷತೆ!

ನವದೆಹಲಿ: ಜಿ20 ಶೃಂಗಸಭೆಗೆ ಅಧ್ಯಕ್ಷತೆ ವಹಿಸಿರುವ ಭಾರತ ಇದೀಗ ದೆಹಲಿಯಲ್ಲಿ ಎರಡು ದಿನಗಳ ಮಹತ್ವದ ಸಮ್ಮೇಳನದಲ್ಲಿ ಹಲವು ರಾಷ್ಟ್ರಗಳ ಗಣ್ಯರೊಂದಿಗೆ ದ್ವಿಪಕ್ಷೀಯ ಮಾತುಕತೆ, ಜಾಗತಿಕ ಸಭೆ ನಡೆಸುತ್ತಿದೆ. ಇದರ ಜೊತಗೆ ಭಾರತದ ಜಿ20 ಶೃಂಗ ಸಭೆ ಹೊಸ ಮೈಲಿಗಲ್ಲು ನಿರ್ಮಿಸಿದೆ. ದೆಹಲಿಯಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ 73 ಘೋಷಣೆಗಳು ಹೊರಬಿದ್ದಿದೆ. ಇಷ್ಟೇ ಅಲ್ಲ ಈ 73 ಘೋಷಣೆಗಳನ್ನು ವಿಶ್ವನಾಯಕರು ಅಂಗೀಕರಿಸಿದ್ದಾರೆ. ಈ ತನ ಯಾವುದೇ ಜಿ20 ಸಭೆಯಲ್ಲಿ ಇಷ್ಟು ಘೋಷಣೆಗಳಿಗೆ ಅಂಗೀಕಾರ ಸಿಕ್ಕಿಲ್ಲ. ಇದರ ಜೊತೆಗೆ 39 ದಾಖಲೆಗಳನ್ನು ಲಗತ್ತಿಸಿ ಪ್ರಸ್ತುತಪಡಿಸಲಾಗಿದೆ. ಈ ದಾಖಲೆಗಳು ಮಾನ್ಯವಾಗಿದೆ.

Advertisement
Advertisement
Advertisement

ಭಾರತದ ಅದ್ಯಕ್ಷತೆ ವಹಿಸಿರುವ ಜಿ20 ಶೃಂಗಸಭೆಯಲ್ಲಿ 73 ಘೋಷಣೆಗಳ ಅಂಗೀಕಾರ ಹಾಗೂ 39 ದಾಖಲೆಗಳ ಪ್ರಸ್ತುತಿ ಸೇರಿದಂತೆ ಒಟ್ಟು 112 ಮಹತ್ವದ ಘೋಷಣೆಗಳು ದಾಖಲೆಗಳು ಅಂಗೀಕಾರವಾಗಿದೆ. ಈ ಮೂಲಕ ಈ ಹಿಂದಿನ ಜಿ20 ಅಧ್ಯಕ್ಷತೆ ಹಾಗೂ ಸಮ್ಮೇಳನಕ್ಕೆ ಹೋಲಿಸಿದರೆ ಅತ್ಯಂತ ಗರಿಷ್ಠ ಅನ್ನೋ ಹೆಗ್ಗಳಿಕಗೆ ಪಾತ್ರವಾಗಿದೆ.

2022ರಲ್ಲಿ ಇಂಡೋನೇಷಿಯಾ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿತ್ತು. ಈ ವೇಳೆ 27 ಘೋಷಣೆಗಳಿಗೆ ಅಂಗೀಕಾರ ಸಿಕ್ಕಿದೆ. ಇನ್ನು 23 ದಾಖಲೆಗಳನ್ನು ಪ್ರಸ್ತುತ ಪಡಿಸಲಾಗಿತ್ತು. ಒಟ್ಟು ಸಂಖ್ಯೆ 50. 2021ರಲ್ಲಿ ಇಟಲಿ ಜಿ20 ಶೃಂಗಸಭೆ ಅಧ್ಯಕ್ಷತೆ ವಹಿಸಿತ್ತು. ಈ ವೇಳೆ ಮಹಾಸಮ್ಮೇಳನದಲ್ಲಿ 36 ಘೋಷಣೆಗಳಿಗೆ ವಿಶ್ವನಾಯಕರು ಅಂಗೀಕಾರ ಪಡೆದಿದ್ದರು. 29 ದಾಖಲೆಗಳು ಸಲ್ಲಿಕೆ ಸೇರಿದಂತೆ ಒಟ್ಟು 65 ಘೋಷಣೆ ಹಾಗೂ ದಾಖಲೆ ಅಂಗೀಕಾರವಾಗಿತ್ತು. ಜಿ20 ಇತಿಹಾಸದಲ್ಲಿ ಎರಡನೇ ಅತೀ ದೊಡ್ಡ ಘೋಷಣೆ ಅಂಗೀಕಾರ ಹಾಗೂ ದಾಖಲೆ ಸಲ್ಲಿಕೆಗೆ ಇಂಡೋನೇಷಿಯಾ ಜಿ20 ಪಾತ್ರವಾಗಿದೆ.

2019ರಲ್ಲಿ ಸೌದಿ ಅರೇಬಿಯಾದಲ್ಲಿ ನಡೆದ ಜಿ20 ಅಧ್ಯಕ್ಷತೆಯಲ್ಲಿ ಒಟ್ಟು 30, 2019ರಲ್ಲಿ ಜಪಾನ್ ಅಧ್ಯಕ್ಷತೆ ವಹಿಸಿದ್ದ ಜಿ20 ಅಧ್ಯಕ್ಷತೆಯಲ್ಲಿ ಒಟ್ಟು 29,2018ರಲ್ಲಿ ಅರ್ಜಂಟೀನಾ 33, ಇನ್ನು 2017ರಲ್ಲಿ ಜರ್ಮನಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಒಟ್ಟು 22 ಘೋಷಣೆ ಹಾಗೂ ದಾಖಲೆ ಅಂಗೀಕಾರವಾಗಿತ್ತು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago