ಪ್ರಮುಖ ಸುದ್ದಿಗಳು

ಉಚಿತ ಬಸ್‌ ಪ್ರಯಾಣ : ಶಕ್ತಿಯೋಜನೆಯಡಿ ಮಹಿಳೆಯರು ಸ್ಮಾರ್ಟ್‌ ಕಾರ್ಡ್‌ ಮಾಡಿಸದಿದ್ರೆ ಉಚಿತ ಪ್ರಯಾಣ ರದ್ದು

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ತರುವುದಾಗಿ ಕಾಂಗ್ರೆಸ್‌ ಪಕ್ಷ ಹೇಳಿದೆ. ಅದರಂತೆ ಕಾಂಗ್ರೆಸ್‌ ಪಕ್ಷ ಅತೀ ಹೆಚ್ಚು ಮತ ಗಳಿಕೆ ಪಡೆಯುವ ಮೂಲಕ ರಾಜ್ಯದಲ್ಲಿ ಅಧಿಕಾರವನ್ನು ಪಡೆದಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿ ತಂದಿದೆ.

Advertisement
Advertisement
Advertisement

ಐದು ಗ್ಯಾರಂಟಿ ಯೋಜನೆಗಳಲ್ಲಿ ಸದ್ಯ ಯುವನಿಧಿ ಯೋಜನೆಯೊಂದು ಜಾರಿಗೊಳಿಸಲು ಬಾಕಿ ಇದ್ದು, ಈ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಲಿದೆ ಎಂದಿದ್ದಾರೆ. ಆದರೆ ಈಗ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲ ಯೋಜನೆ ಬಗ್ಗೆ ಮಹತ್ತರ ಹೇಳಿಕೆಯನ್ನು ನೀಡಲಾಗಿದೆ.

ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್‌ 11ರಂದು ಚಾಲನೆ ನೀಡುವ ಮೂಲಕ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣವನ್ನು ಘೋಷಿಸಿದ್ದರು. ಈ ಯೋಜನೆಯ ಚಾಲನೆಯ ದಿನದಿಂದ ರಾಜ್ಯದ ಮಹಿಳೆಯರು ರಾಜ್ಯದ ಎಲ್ಲೆಡೆ ಉಚಿತವಾಗಿ ಪ್ರಯಾಣ ಮಾಡುವ ಮೂಲಕ ಯೋಜನೆಯ ಲಾಭವನ್ನು ಪಡೆದಿದ್ದಾರೆ. ಈ ಯೋಜನೆಯ ಲಾಭವನ್ನು ಪಡೆಯುವ ಸಲುವಾಗಿ ಮಹಿಳೆಯರು ಯಾವುದೇ ಶುಲ್ಕವನ್ನು ಪಾವತಿಸಿದೇ ಆಧಾರ್‌ ಕಾರ್ಡ್‌ ಅಂತಹ ಗುರುತಿನ ಚೀಟಿಯನ್ನು ಬಳಸಿಕೊಂಡು ಉಚಿತ ಬಸ್‌ ಪ್ರಯಾಣದ ಲಾಭವನ್ನು ಸಿಎಂ ಸಿದ್ದರಾಮಯ್ಯ ಸರಕಾರ ಕಲ್ಪಿಸಿಕೊಟ್ಟಿದೆ.

ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿರುತ್ತದೆ. ಸದ್ಯ ಈ ಯೋಜನೆಯ ಕುರಿತು ಸರಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರಕಾರದ ಈ ನಿರ್ಧಾರದ ಪ್ರಕಾರ, ಇಲ್ಲಿಯವರೆಗೂ ಮಹಿಳೆಯರು ಬಸ್‌ನಲ್ಲಿ ಪ್ರಯಾಣಿಸುವಾಗ ಆಧಾರ್‌ ಕಾರ್ಡ್‌ ನೀಡುತ್ತಿದ್ದು, ಇನ್ನು ಮುಂದೆ ಆಧಾರ್‌ ಕಾರ್ಡ್‌ ನೀಡುವ ಅಗತ್ಯವಿಲ್ಲ ಎನ್ನಲಾಗಿದೆ. ಇದೀಗ ರಾಜ್ಯ ಸರಕಾರವುನ ಶಕ್ತಿ ಯೋಜನೆಯಲ್ಲಿ ಕೆಲವು ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ಮಹಿಳೆಯರು ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಾಗಿ 14.16 ರೂ. ಗಳನ್ನು ಪಾವತಿಸಬೇಕಾಗುತ್ತದೆ. ಇದಕ್ಕಾಗಿ ಅರ್ಜಿಗಳನ್ನು ಶೀಘ್ರದಲ್ಲೇ ಸರಕಾರ ಬಿಡುಗಡೆ ಮಾಡಲಾಗುತ್ತದೆ. ಇದರ ನೋಂದಾಣಿಗಾಗಿ ಮಹಿಳೆಯರು ಹತ್ತಿರದ ಕರ್ನಾಟಕ ಒನ್, ಬಾಪೂಜಿ ಕೇಂದ್ರ, ಬೆಂಗಳೂರು ಒನ್‌ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಅನ್ನು ಪಡೆಯಬಹುದಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago