ತಂತ್ರಜ್ಞಾನ

ನೀವು ಸ್ಮಾರ್ಟ್‌ಫೋನ್ ಅನ್ನು 100 ಪ್ರತಿಶತದಷ್ಟು ಚಾರ್ಜ್ ಮಾಡುತ್ತೀರಾ? ಈಗಲೇ ನಿಲ್ಲಿಸಿ

ಪ್ರತಿಯೊಬ್ಬರ ಜೀವನದಲ್ಲಿ ಸ್ಮಾರ್ಟ್‌ಫೋನ್ ಒಂದು ವಿಶೇಷವಾದ ಪ್ರಾಮುಖ್ಯತೆಯನ್ನು ಹೊಂದಿದೆ. ಪ್ರಯಾಣದಿಂದ ಹಿಡಿದು ಪ್ರತಿಯೊಂದು ಖರ್ಚಿಗೂ ನಾವು ಸ್ಮಾರ್ಟ್‌ಫೋನ್‌ಗಳನ್ನು ಬಳಸುತ್ತೇವೆ. ಪ್ರಯಾಣದ ವೇಳೆ ಟಿಕೆಟ್ ಖರೀದಿಸುವುದಾಗಲಿ ಅಥವಾ ಯಾವುದೇ ವಸ್ತುವಿನ ಬಿಲ್ ಪಾವತಿಗಾಗಲಿ ಮೊಬೈಲ್ ಮೂಲಕವೇ ಎಲ್ಲ ವಹಿವಾಟು ನಡೆಸುತ್ತೇವೆ. ಆದ್ದರಿಂದ, ಮೊಬೈಲ್ ಫೋನ್‌ಗಳಲ್ಲಿ ಚಾರ್ಜಿಂಗ್ ಒಂದು ಪ್ರಮುಖ ಅಂಶವಾಗಿದೆ.

Advertisement
Advertisement
Advertisement

ಈಗಂತು ಮನೆಯಿಂದ ಹೊರಡುವಾಗ ಪರ್ಸ್ ಇಲ್ಲದಿದ್ದರೂ ತೊಂದರೆಯಿಲ್ಲ, ಮೊಬೈಲ್ ಫೋನ್‌ನಲ್ಲಿ 100 ಪ್ರತಿಶತ ಚಾರ್ಜಿಂಗ್ ಇದ್ದರೆ ಸಾಕು ಎಂದು ಅನೇಕರು ಭಾವಿಸುತ್ತಾರೆ. ನೀವೂ ಸಹ ನಿಮ್ಮ ಸ್ಮಾರ್ಟ್‌ಫೋನ್ ಅನ್ನು 100 ಪ್ರತಿಶತದಷ್ಟು ಚಾರ್ಜ್ ಮಾಡುತ್ತಿದ್ದರೆ, ಈ ಸುದ್ದಿ ನಿಮಗಾಗಿ.

ನೀವು ನಿಮ್ಮ ಸ್ಮಾರ್ಟ್​ಫೋನ್ ಅನ್ನು ಶೇ. 100 ರಷ್ಟು ಚಾರ್ಜ್ ಮಾಡುವುದರಿಂದ ಮುಂದೆ ದೊಡ್ಡ ಸಮಸ್ಯೆಗೆ ಒಳಗಾಗಬಹುದು. ಇದರಿಂದ ಮೊಬೈಲ್ ಬೇಗನೆ ಹಾಳಾಗುತ್ತದೆ. ಹಾಗಾದರೆ ಸ್ಮಾರ್ಟ್​ಫೋನನ್ನು ಎಷ್ಟು ಚಾರ್ಜ್ ಮಾಡಬೇಕು?. ಸ್ಮಾರ್ಟ್‌ಫೋನ್ ಚಾರ್ಜಿಂಗ್‌ಗಾಗಿ ಯಾವಾಗಲೂ 80-20 ಸೂತ್ರವನ್ನು ಬಳಸಿದರೆ ಉತ್ತಮ. ಏಕೆಂದರೆ, ಈ ಸೂತ್ರವು ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ. ಅಲ್ಲದೆ, ಹೀಗೆ ಮಾಡುವುದರಿಂದ ನಿಮ್ಮ ಫೋನ್ ಯಾವುದೇ ಹಾನಿಯಾಗದೆ ಸುರಕ್ಷಿತವಾಗಿರುತ್ತದೆ.

80-20 ಸೂತ್ರ ಯಾವುದು?

80-20 ಸೂತ್ರ ಯಾವುದು ಎಂದರೆ, ಸ್ಮಾರ್ಟ್‌ಫೋನ್‌ನಲ್ಲಿನ ಚಾರ್ಜಿಂಗ್ ಶೇಕಡಾ 20 ಕ್ಕೆ ಇಳಿಯಲು ಬಿಡಬಾರದು. ಅಂದರೆ, 20 ಪ್ರತಿಶತ ಬ್ಯಾಟರಿ ಉಳಿದಿದ್ದರೆ, ಸ್ಮಾರ್ಟ್‌ಫೋನ್ ಅನ್ನು ಕೂಡಲೆ ಚಾರ್ಜಿಂಗ್‌ನಲ್ಲಿ ಇರಿಸಿ, ಇದು ಬ್ಯಾಟರಿಯ ಮೇಲೆ ಒತ್ತಡವನ್ನು ಹಾಕುವುದಿಲ್ಲ ಮತ್ತು ಬ್ಯಾಟರಿ ಅವಧಿಯನ್ನು ಹೆಚ್ಚಿಸುತ್ತದೆ.

ಮೊಬೈಲ್ ಫೋನ್ ಅನ್ನು ಎಷ್ಟು ಚಾರ್ಜ್ ಮಾಡಬೇಕು?:

ಮೊಬೈಲನ್ನು ಚಾರ್ಜ್ ಮಾಡುವಾಗ ಗಮನಿಸಬೇಕಾದ ಅಂಶವೆಂದರೆ, 100 ಪರ್ಸೆಂಟ್ ಚಾರ್ಜ್ ಆಗುವ ವರೆಗೆ ಬಿಡಬಾರದು. ಮೊಬೈಲ್ ಅನ್ನು 100 ಪ್ರತಿಶತದಷ್ಟು ಚಾರ್ಜ್ ಮಾಡುವುದರಿಂದ ಸ್ಮಾರ್ಟ್‌ಫೋನ್ ಬಿಸಿಯಾಗುತ್ತದೆ ಮತ್ತು ಬ್ಯಾಟರಿಯ ಮೇಲೆ ಒತ್ತಡ ಉಂಟಾಗುತ್ತದೆ, ಇದು ಬ್ಯಾಟರಿ ಸ್ಫೋಟಗೊಳ್ಳಲು ಕಾರಣವಾಗಬಹುದು. ಅಷ್ಟೇ ಅಲ್ಲ, ಬ್ಯಾಟರಿ ಬಾಳಿಕೆ ಕಡಿಮೆಯಾಗುವ ಅಪಾಯವೂ ಇದೆ. ಆದ್ದರಿಂದ, ಸ್ಮಾರ್ಟ್​ಫೋನನ್ನು ಗರಿಷ್ಠ 80 ಪ್ರತಿಶತದಷ್ಟು ಚಾರ್ಜ್ ಮಾಡಿದರೆ ಉತ್ತಮ. ಹೀಗೆ ಮಾಡುವುದರಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago