ಕ್ರೀಡಾ ಸುದ್ದಿ

ಭಾರತ-ಪಾಕಿಸ್ತಾನ್ ಪಂದ್ಯ ಸೋಮವಾರಕ್ಕೆ ಮುಂದೂಡಿಕೆ

ಭಾರತ-ಪಾಕಿಸ್ತಾನ್ ನಡುವಣ ಸೂಪರ್ ಫೋರ್ ಹಂತದ 3ನೇ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಇಂದು ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

Advertisement
Advertisement
Advertisement

ಶಾಹೀನ್ ಅಫ್ರಿದಿಯ ಮೊದಲ ಓವರ್​ನಲ್ಲಿ ಸಿಕ್ಸ್ ಸಿಡಿಸುವ ಮೂಲಕ ರನ್ ಖಾತೆ ತೆರೆದ ರೋಹಿತ್ ಶರ್ಮಾ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮತ್ತೊಂದೆಡೆ ಯುವ ದಾಂಡಿಗ ಶುಭ್​ಮನ್ ಗಿಲ್ ಕೂಡ ಭರ್ಜರಿಯಾಗಿ ಬ್ಯಾಟ್ ಬೀಸಿದರು.

ಪರಿಣಾಮ ಗಿಲ್ ಬ್ಯಾಟ್​ನಿಂದ 37 ಎಸೆತಗಳಲ್ಲಿ ಅರ್ಧಶತಕ ಮೂಡಿಬಂದರೆ, ರೋಹಿತ್ ಶರ್ಮಾ 42 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದರು. ಅಲ್ಲದೆ 16.3 ಓವರ್​ಗಳಲ್ಲಿ 121 ರನ್​ಗಳ​ ಜೊತೆಯಾಟವಾಡಿದರು.

ಈ ಹಂತದಲ್ಲಿ ಶಾದಾಬ್ ಖಾನ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ರೋಹಿತ್ ಶರ್ಮಾ (56 ರನ್, 49ಎಸೆತ, 4 ಸಿಕ್ಸ್, 6 ಫೋರ್) ಕ್ಯಾಚ್ ನೀಡಿ ನಿರ್ಗಮಿಸಿದರು. ಇದರ ಬೆನ್ನಲ್ಲೇ 52 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ 58 ರನ್​ಗಳಿಸಿದ್ದ ಶುಭ್​ಮನ್ ಗಿಲ್ ಶಾಹೀನ್ ಅಫ್ರಿದಿ ಎಸೆತದಲ್ಲಿ ಔಟಾದರು.

ಈ ಹಂತದಲ್ಲಿ ಜೊತೆಗೂಡಿದ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ತಂಡದ ಮೊತ್ತಕ್ಕೆ 24 ರನ್ ಸೇರಿಸಿದರು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಈ ಹಂತದಲ್ಲಿ ಟೀಮ್ ಇಂಡಿಯಾ 24.1 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 147 ರನ್​ ಕಲೆಹಾಕಿತ್ತು. ಇದೀಗ ಮಳೆಯ ಕಾರಣ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

50 ಓವರ್​ಗಳ ಪಂದ್ಯ:

ಸೋಮವಾರ ಉಭಯ ತಂಡಗಳು 50 ಓವರ್​ಗಳ ಪಂದ್ಯವನ್ನಾಡಲಿದೆ. ಆದರೆ ಈಗಾಗಲೇ 24.1 ಓವರ್​ಗಳನ್ನು ಆಡಿರುವ ಟೀಮ್ ಇಂಡಿಯಾ ಉಳಿದ ಓವರ್​ಗಳನ್ನು ಆಡಲಿದೆ. ಅಂದರೆ ಭಾನುವಾರ ಪಂದ್ಯವು ಎಲ್ಲಿ ಕೊನೆಗೊಂಡಿತ್ತೊ ಅಲ್ಲಿಂದಲೇ ಮ್ಯಾಚ್ ಶುರುವಾಗಲಿದೆ. ಅಂದರೆ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago