ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ACB) ನ್ಯಾಯಾಲಯ ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
371 ಕೋಟಿ ರೂ.ಗಳ ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪದ ಮೇಲೆ ಚಂದ್ರಬಾಬು ನಾಯ್ಡು ಅವರನ್ನು ಅಪರಾಧ ತನಿಖಾ ಇಲಾಖೆ (CID) ಶನಿವಾರ ಮುಂಜಾನೆ ಬಂಧಿಸಿದೆ.
ಈ ಪ್ರಕರಣ ಆಂಧ್ರಪ್ರದೇಶ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ (APSSDC) ರಚನೆಗೆ ಸಂಬಂಧಿಸಿದೆ. 2014 ರಲ್ಲಿ ನಿರುದ್ಯೋಗಿ ಯುವಕರಿಗೆ ತರಬೇತಿ ನೀಡಲು ಮತ್ತು ಅನಂತಪುರ ಜಿಲ್ಲೆಯ ಕಿಯಾದಂತಹ ಕೈಗಾರಿಕೆಗಳ ಬಳಿ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಬಂಧವನ್ನು ಬೆಳೆಸುವ ಗುರಿಯನ್ನು ಹೊಂದಿದೆ. ತೆಲುಗು ದೇಶಂ ಪಕ್ಷದ (TDP) ಮುಖ್ಯಸ್ಥ ಈ ಪ್ರಕರಣದಲ್ಲಿ ಮುಖ್ಯ ಸಂಚುಕೋರನಂತೆ ವರ್ತಿಸಿದ್ದು, ಎಪಿಎಸ್ಎಸ್ಡಿಸಿಯ ಸೋಗಿನಲ್ಲಿ 371 ಕೋಟಿ ರೂ.ಗಳ ಹಗರಣವನ್ನು ನಡೆಸಿದ್ದಾರೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.
ಚಂದ್ರಬಾಬು ನಾಯ್ಡು ಅವರು 2014 ರಿಂದ 2019 ರವರೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಆ ಸಂದರ್ಭ ಆಂಧ್ರಪ್ರದೇಶದ ಸರ್ಕಾರ ಎಪಿಎಸ್ಎಸ್ಡಿಸಿ ಯೋಜನೆಗಾಗಿ ಜರ್ಮನ್ ಎಂಜಿನಿಯರಿಂಗ್ ದೈತ್ಯ ಸೀಮೆನ್ಸ್ನೊಂದಿಗೆ ಪಾಲುದಾರಿಕೆ ಹೊಂದಿತ್ತು. 6 ಶ್ರೇಷ್ಠ ಕೇಂದ್ರಗಳನ್ನು ಸ್ಥಾಪಿಸುವ ಕಾರ್ಯವನ್ನು ಸೀಮೆನ್ಸ್ಗೆ ವಹಿಸಲಾಗಿತ್ತು. ಆದರೆ ಸೀಮೆನ್ಸ್ ಯೋಜನೆಗೆ ಯಾವುದೇ ಹಣವನ್ನು ಹೂಡಿಕೆ ಮಾಡದಿದ್ದರೂ ರಾಜ್ಯ ಸರ್ಕಾರ ಯೋಜನೆಗೆ 371 ಕೋಟಿ ರೂ. ಬಿಡುಗಡೆ ಮಾಡಿತ್ತು.
ಇದೀಗ ಆಂಧ್ರಪ್ರದೇಶದ ಮಾಜಿ ಸಿಎಂ ಅವರನ್ನು ಸಂಬಂಧಿತ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಬಂಧಿಸಲಾಗಿದೆ. ಇದರಲ್ಲಿ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆ) ಮತ್ತು 465 (ನಕಲಿ) ಸೇರಿವೆ. ಆಂಧ್ರಪ್ರದೇಶದ ಸಿಐಡಿ ಕೂಡ ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…