ಪ್ರಮುಖ ಸುದ್ದಿಗಳು

ಭಾರತ ಎಂಬ ಮರುನಾಮಕರಣವನ್ನು ವಿರೋಧಿಸುವವರು ದೇಶ ತೊರೆಯಬಹುದು: ಬಿಜೆಪಿ ಎಂಪಿ

ಕೋಲ್ಕತ್ತಾ: ಭಾರತ ಎಂಬ ನಾಮಕರಣವನ್ನು ವಿರೋಧಿಸುವವರು ದಯವಿಟ್ಟು ದೇಶ ತೊರೆಯಬಹುದು ಎಂದು ಪಶ್ಚಿಮ ಬಂಗಾಳ ಬಿಜೆಪಿ ಸಂಸದ ದಿಲೀಪ್ ಘೋಷ್ ಹೇಳಿದ್ದಾರೆ.

Advertisement
Advertisement
Advertisement

ಪಶ್ಚಿಮ ಬಂಗಾಳದ ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ಖಾರಗ್‌ಪುರ ನಗರದಲ್ಲಿ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂಡಿಯಾ ಎಂಬ ಹೆಸರನ್ನು ಭಾರತ ಎಂದು ಮರುನಾಮಕರಣ ಮಾಡಲಾಗುವುದು. ಇದನ್ನು ಯಾರೆಲ್ಲ ವಿರೋಧಿಸುತ್ತಾರೋ ಅಥವಾ ಯರಿಗೆಲ್ಲ ಈ ಹೆಸರು ಇಷ್ಟ ಇಲ್ಲವೋ ಅವರೆಲ್ಲಾ ಆರಾಮಾಗಿ ದೇಶ ತೊರೆಯಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದೇ ವೇಳೆ ಟಿಎಂಸಿ ಹಾಗೂ ಸಿಪಿಐ ವಿರುದ್ಧವೂ ವಾಗ್ದಾಳಿ ನಡೆಸಿದ ದಿಲೀಪ್, ಟಿಎಂಸಿಯ ನನ್ನ ಸ್ನೇಹಿತರಿಗೆ ‘ಭಾರತ್’ ಅಥವಾ ಇಂಡಿಯಾ ಎಂದು ಏಕೆ ಹೇಳುತ್ತಿದ್ದಾರೆ?, ಅದರ ಹಿಂದಿನ ಇತಿಹಾಸ ಏನು ಎಂದು ತಿಳಿದಿಲ್ಲ. ಸಿಪಿಎಂನವರಿಗೂ ಇದು ತುಂಬಾ ಕಷ್ಟ, ಯಾವಾಗಲೂ ವಿದೇಶಗಳತ್ತ ಗಮನ ಹರಿಸುತ್ತಾರೆ ಎಂದರು.

ಕೋಲ್ಕತ್ತಾದಿಂದ ವಿದೇಶಿಯರ ಎಲ್ಲಾ ಪ್ರತಿಮೆಗಳನ್ನು ತೆಗೆದುಹಾಕುವುದಾಗಿ ಸಂಸದರು ಭರವಸೆ ನೀಡಿದರು. ಕೋಲ್ಕತ್ತಾದ ಹಲವು ಬೀದಿಗಳಲ್ಲಿ ಬ್ರಿಟಿಷರ ಅನೇಕ ಪ್ರತಿಮೆಗಳು ಇದ್ದವು. ಅವು ಈಗ ಎಲ್ಲಿವೆ? ಬಿಜೆಪಿ ಅಧಿಕಾರಕ್ಕೆ ಬಂದಾಗ ನಾವು ಎಲ್ಲವನ್ನೂ ಕಿತ್ತು ವಿಕ್ಟೋರಿಯಾ ಸ್ಮಾರಕ ಭವನದಲ್ಲಿ ಇಡುತ್ತೇವೆ. ಸಂಗ್ರಹಾಲಯದ ವಸ್ತುಗಳು ಮ್ಯೂಸಿಯಂನಲ್ಲಿ ಉಳಿಯುತ್ತವೆ. ಬೀದಿಗಳಲ್ಲಿ ಅಲ್ಲ. ನಮ್ಮ ಮಕ್ಕಳು ಬೆಳಗ್ಗೆ ಎದ್ದು ವಿದೇಶಿಯರ ಮುಖಗಳನ್ನು ಅನುಸರಿಸದಂತೆ ನೋಡುತ್ತಾರೆ ಎಂದು ದಿಲೀಪ್ ಘೋಷ್ ಹೇಳಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago