ವ್ಯವಹಾರ

ಬ್ಯಾಂಕ್ ಎಫ್ ಡಿ ಹೊಂದಿರೋರಿಗೆ ಗುಡ್ ನ್ಯೂಸ್; ಶೀಘ್ರದಲ್ಲೇ ಬಡ್ಡಿದರ ಏರಿಕೆ ನಿರೀಕ್ಷೆ

ಮುಂಬೈ : ಬ್ಯಾಂಕ್ ನಲ್ಲಿ ಸ್ಥಿರ ಠೇವಣಿ (ಎಫ್ ಡಿ) ಹೊಂದಿರೋರಿಗೆ ಶುಭಸುದ್ದಿ ಇದೆ. ಪ್ರಸಕ್ತ ಹಣಕಾಸು ಸಾಲಿನ ಮೊದಲ ಐದು ತಿಂಗಳಲ್ಲಿ ಬ್ಯಾಂಕ್ ಕ್ರೆಡಿಟ್ ನಲ್ಲಿ ಬೆಳವಣಿಗೆಯಾಗಿರೋದು ಠೇವಣಿಗಳಲ್ಲಿ ಏರಿಕೆಯಾಗಲು ಕಾರಣವಾಗಿದೆ. ಇದರ ಪರಿಣಾಮವಾಗಿ ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಏಪ್ರಿಲ್-ಆಗಸ್ಟ್ ಅವಧಿಯಲ್ಲಿ ಸರಾಸರಿ ಟರ್ಮ್ ಡೆಫಾಸಿಟ್ ದರಗಳಲ್ಲಿ 27 ಬೇಸಿಸ್ ಪಾಯಿಂಟ್ಸ್ ಹೆಚ್ಚಳವಾಗುವ ನಿರೀಕ್ಷೆಯಿದೆ. ಆರ್ ಬಿಐ ಅಂಕಿಅಂಶಗಳ ಪ್ರಕಾರ 2023ರ ಏಪ್ರಿಲ್- ಆಗಸ್ಟ್ ಅವಧಿಯಲ್ಲಿ ಬ್ಯಾಂಕ್ ಠೇವಣಿಗಳಲ್ಲಿ ಶೇ.6.6ರಷ್ಟು ಹೆಚ್ಚಳವಾಗಿದ್ದು, 149.2 ಲಕ್ಷ ಕೋಟಿ ರೂ.ಗೆ ತಲುಪಿದೆ. ಇದೇ ಅವಧಿಯಲ್ಲಿ ಬ್ಯಾಂಕ್ ಕ್ರೆಡಿಟ್ ನಲ್ಲಿ ಶೇ.9.1ರಷ್ಟು ಹೆಚ್ಚಳವಾಗಿದ್ದು, 124.5 ಲಕ್ಷ ಕೋಟಿ ರೂ.ಗೆ ತಲುಪಿದೆ. ಎಚ್ ಡಿಎಫ್ ಸಿ ಬ್ಯಾಂಕ್ ಜೊತೆಗೆ ಎಚ್ ಡಿಎಫ್ ಸಿ ವಿಲೀನದಿಂದ ಕ್ರೆಡಿಟ್ -ಠೇವಣಿ (ಡೆಪೋಸಿಟ್ ) ನಡುವಿನ ಅಂತರ ಹೆಚ್ಚಿದೆ. ಗೃಹ ಹಣಕಾಸು ಕಂಪನಿಗಳ ಠೇವಣಿಗಳು ಸಾಲಗಳಿಗಿಂತ ಕಡಿಮೆಯಿರುವ ಕಾರಣ ಕ್ರೆಡಿಟ್-ಡೆಪೋಸಿಟ್ ನಡುವಿನ ಅಂತರ ಹೆಚ್ಚಿರುತ್ತದೆ.

Advertisement
Advertisement
Advertisement

ಬ್ಯಾಂಕ್ ಗಳು 11.9 ಲಕ್ಷ ಕೋಟಿ ರೂ. ಠೇವಣಿಗಳನ್ನು ಸೇರ್ಪಡೆಗೊಳಿಸಿವೆ. ಆದರೆ, ಅವುಗಳ ಸಾಲದ ಮೊತ್ತದಲ್ಲಿ ಕೂಡ ಹೆಚ್ಚಳವಾಗಿದ್ದು, 12.4 ಲಕ್ಷ ಕೋಟಿ ರೂ. ತಲುಪಿದೆ. ಕ್ರೆಡಿಟ್ ಹಾಗೂ ಡೆಫಾಸಿಟ್ ಬೆಳವಣಿಗೆ ನಡುವಿನ ಅಂತರವನ್ನು ಸರ್ಕಾರಿ ಸೆಕ್ಯುರಿಟೀಗಳಲ್ಲಿ ಬ್ಯಾಂಕ್ ಗಳ ಹೆಚ್ಚುವರಿ ಹೂಡಿಕೆಗಳಿಂದ ನಿರ್ವಹಣೆ ಮಾಡಬಹುದಾಗಿದೆ. ಕೇರ್ ಎಡ್ಜ್ ರೇಟಿಂಗ್ಸ್ ಅನ್ವಯ ಪ್ರಸಕ್ತ ಹಣಕಾಸು ಸಾಲಿನಲ್ಲಿ ಎಚ್ ಡಿಎಫ್ ಸಿ ವಿಲೀನದ ಹೊರತಾಗಿಯೂ ಕ್ರೆಡಿಟ್ ಬೆಳವಣಿಗೆ ಶೇ. 13-ಶೇ.13.5 ತಲುಪುವ ನಿರೀಕ್ಷೆಯಿದೆ. ಠೇವಣಿಗಳ ಬೆಳವಣಿಗೆ ಕ್ರೆಡಿಟ್ ತೆಗೆದುಕೊಳ್ಳುವಿಕೆ ಮೇಲೆ ಯಾವುದೇ ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸೋದಾಗಿ ರೇಟಿಂಗ್ ಏಜೆನ್ಸಿ ತಿಳಿಸಿದೆ.

ಬ್ಯಾಂಕ್ ಗಳು 11.9 ಲಕ್ಷ ಕೋಟಿ ರೂ. ಠೇವಣಿಗಳನ್ನು ಸೇರ್ಪಡೆಗೊಳಿಸಿವೆ. ಆದರೆ, ಅವುಗಳ ಸಾಲದ ಮೊತ್ತದಲ್ಲಿ ಕೂಡ ಹೆಚ್ಚಳವಾಗಿದ್ದು, 12.4 ಲಕ್ಷ ಕೋಟಿ ರೂ. ತಲುಪಿದೆ. ಕ್ರೆಡಿಟ್ ಹಾಗೂ ಡೆಫಾಸಿಟ್ ಬೆಳವಣಿಗೆ ನಡುವಿನ ಅಂತರವನ್ನು ಸರ್ಕಾರಿ ಸೆಕ್ಯುರಿಟೀಗಳಲ್ಲಿ ಬ್ಯಾಂಕ್ ಗಳ ಹೆಚ್ಚುವರಿ ಹೂಡಿಕೆಗಳಿಂದ ನಿರ್ವಹಣೆ ಮಾಡಬಹುದಾಗಿದೆ. ಕೇರ್ ಎಡ್ಜ್ ರೇಟಿಂಗ್ಸ್ ಅನ್ವಯ ಪ್ರಸಕ್ತ ಹಣಕಾಸು ಸಾಲಿನಲ್ಲಿ ಎಚ್ ಡಿಎಫ್ ಸಿ ವಿಲೀನದ ಹೊರತಾಗಿಯೂ ಕ್ರೆಡಿಟ್ ಬೆಳವಣಿಗೆ ಶೇ. 13-ಶೇ.13.5 ತಲುಪುವ ನಿರೀಕ್ಷೆಯಿದೆ. ಠೇವಣಿಗಳ ಬೆಳವಣಿಗೆ ಕ್ರೆಡಿಟ್ ತೆಗೆದುಕೊಳ್ಳುವಿಕೆ ಮೇಲೆ ಯಾವುದೇ ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸೋದಾಗಿ ರೇಟಿಂಗ್ ಏಜೆನ್ಸಿ ತಿಳಿಸಿದೆ.ಬ್ಯಾಂಕ್ FD ಖಾತೆಯನ್ನು ಆನ್‌ಲೈನಲ್ಲೇ ಸುಲಭವಾಗಿ ಕ್ಲೋಸ್ ಮಾಡ್ಬಹುದು, ಹೇಗೆ? ಇಲ್ಲಿದೆ ಮಾಹಿತಿಬ್ಯಾಂಕ್ ಆಫ್ ಬರೋಡಾದ ಮುಖ್ಯ ಆರ್ಥಿಕ ತಜ್ಞ ಮದನ್ ಸಬ್ನಾವಿಸ್ ಪ್ರಕಾರ ಕ್ರೆಡಿಟ್ ಹಾಗೂ ಠೇವಣಿ ಬೆಳವಣಿಗೆ ನಡುವಿನ ವ್ಯತ್ಯಾಸ ಹಣದ ಮಾರುಕಟ್ಟೆಯಲ್ಲಿನ ಲಿಕ್ವಿಡಿಟಿಯಲ್ಲಿ ಪ್ರತಿಫಲಿಸುತ್ತದೆ. ‘ಆರ್ ಬಿಐ ಅಂಕಿಅಂಶಗಳ ಆಧಾರದಲ್ಲಿ ಠೇವಣಿಗಳ ವೆಚ್ಚ ಜುಲೈನಲ್ಲಿ ಏರಿಕೆಯಾಗುವ ನಿರೀಕ್ಷೆಯಿದ್ದು, ಇದರಲ್ಲಿ ಯಾವುದೇ ಅಚ್ಚರಿಯಿಲ್ಲ. ಇದು ಆಗಸ್ಟ್ ನಲ್ಲಿ ಕೂಡ ಮುಂದುವರಿದಿದೆ’ ಎಂದು ಅವರು ತಿಳಿಸಿದ್ದಾರೆ.

ಬ್ಯಾಂಕ್ ಗಳ ಟರ್ಮ್ ಡೆಫಾಸಿಟ್ ದರ ಏಪ್ರಿಲ್ ನಲ್ಲಿ ಶೇ.6.28ರಷ್ಟಿದ್ದು, ಜುಲೈನಲ್ಲಿ ಶೇ.6.55ಕ್ಕೆ ಏರಿಕೆಯಾಗಿದೆ. ಕಳೆದ ವಾರ ಪಿಎನ್ ಬಿ ಟರ್ಮ್ ಡೆಫಾಸಿಟ್ ಗಳ ಮೇಲಿನ ಬಡ್ಡಿದರವನ್ನು 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ ಮಾಡಿತ್ತು. ಪ್ರಸ್ತುತ ಸಣ್ಣ ಹಣಕಾಸು ಬ್ಯಾಂಕ್ ಗಳು ಅತ್ಯಧಿಕ ಟರ್ಮ್ ಡೆಫಾಸಿಟ್ ದರಗಳನ್ನು ಹೊಂದಿವೆ. 1001 ದಿನಗಳ ಠೇವಣಿಗಳ ಮೇಲೆ ಯುನಿಟಿ ಎಸ್ ಎಫ್ ಬಿ ಶೇ.9ರಷ್ಟು ಬಡ್ಡಿದರ ಹೊಂದಿದೆ. ಭಾರತೀಯ ಖಾಸಗಿ ಬ್ಯಾಂಕ್ ಗಳ ಪೈಕಿ ಡಿಸಿಬಿ 25ರಿಂದ 37 ತಿಂಗಳ ಅವಧಿಯ ಎಫ್ ಡಿ ಮೇಲೆ ಶೇ.7.75 ಬಡ್ಡಿ ನೀಡುತ್ತಿದೆ. ಇನ್ನು ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಪಂಜಾಬ್ ಹಾಗೂ ಸಿಂಧ್ ಬ್ಯಾಂಕ್ ಠೇವಣಿಗಳ ಮೇಲೆ ಶೇ.7.4ರಷ್ಟು ಬಡ್ಡಿ ನೀಡುತ್ತಿದೆ.

ಇನ್ನು ಚಾಲ್ತಿ ಹಾಗೂ ಉಳಿತಾಯ ಖಾತೆಗಠೇವಣಿಗಳಲ್ಲಿ ಏರಿಕೆಯಾಗಲು 2 ಸಾವಿರ ರೂ. ನೋಟುಗಳ ವಿತ್ ಡ್ರಾ ಕೂಡ ಕಾರಣವಾಗಿದೆ ಎಂದು ಹೇಳಲಾಗಿದೆ. ಆದರೆ, ಇದು ತಾತ್ಕಾಲಿಕ ಎಂದು ಹೇಳಲಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago