ರಾಜ್ಯ

ಕೋರ್ ಕಮಿಟಿ ಸಭೆಗೆ ಬರಲೇ ಇಲ್ಲ ‘ಭಿನ್ನ’ ಶಾಸಕರು: ಬಿಜೆಪಿಯಲ್ಲಿ ಅಲ್ಲೋಲ-ಕಲ್ಲೋಲ

ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕರೇ ಸ್ವಪಕ್ಷದ ವಿರುದ್ಧ ಬುಸುಗುಡುತ್ತಿದ್ದಾರೆ. ಭಿನ್ನಮತ ಶಮನಕ್ಕೆ ಎಂದು ಕರೆದ ಸಭೆಯಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಒಂದು ಕಾಲದಲ್ಲಿ ಹುಬ್ಬಳ್ಳಿ-ಧಾರವಾಡ ಬಿಜೆಪಿಯ ಭದ್ರಕೋಟೆಯಾಗಿತ್ತು. ಇಲ್ಲಿ ಕಾಂಗ್ರೆಸ್ ಇದ್ದು ಇಲ್ಲದಂತಾಗಿತ್ತು. ಆದ್ರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದೇ ಸೇರಿದ್ದು ಹುಬ್ಬಳ್ಳಿ-ಧಾರವಾಡ ಬಿಜೆಪಿಯ ಕೋಟೆ ಒಡೆದ ಮನೆಯಂತಾಗಿದೆ. ಲೋಕಸಭೆ ಚುನಾವಣೆಗೆ ಶೆಟ್ಟರ್ ದಾಳ ಉರುಳಿಸಿದ್ದು, ಬಿಜೆಪಿಯಲ್ಲಿ ಅಲ್ಲೋಲ-ಕಲ್ಲೋಲ ಶುರುವಾಗಿದೆ.

Advertisement
Advertisement
Advertisement

ಕೋರ್ ಕಮಿಟಿ ಸಭೆಗೆ ಬರಲೇ ಇಲ್ಲ ‘ಭಿನ್ನ’ ಶಾಸಕರು

15 ದಿನದ ಹಿಂದಷ್ಟೇ ಶೆಟ್ಟರ್ ಆಪ್ತ ಹಾಗೂ ಮಾಜಿ ಸಚಿವ ಮುನೇನಕೊಪ್ಪ ಸ್ವಪಕ್ಷ ಬಿಜೆಪಿ ವಿರುದ್ಧ ಕೆಂಡಕಾರಿದ್ದರು. ಅಷ್ಟೇ ಅಲ್ಲ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಬಿಜೆಪಿ ವಿರುದ್ಧ ನೇರವಾಗಿ ಅಸಮಾಧಾನ ಹೊರಹಾಕಿದ್ದರು. ಬಿಜೆಪಿಯಲ್ಲಿ ಹೇಳೋರು ಇಲ್ಲ ಕೇಳೋರು ಇಲ್ಲ ಎಂದು ಗುಡುಗಿದ್ರು. ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದ ಜಗದೀಶ್ ಶೆಟ್ಟರ್, ಬಿಜೆಪಿ ತೊರೆಯೋ ಲಿಂಗಾಯತ ನಾಯಕರ ಪಟ್ಟಿಯನ್ನೇ ತೆರೆದಿಟ್ಟಿದ್ದರು. ಇದರ ಬೆನ್ನಲ್ಲೇ ಅಲರ್ಟ್ ಆದ ಬಿಜೆಪಿ ನಾಯಕರು ನಿನ್ನೆ(ಸೆಪ್ಟೆಂಬರ್ 11) ಮಹತ್ವದ ಕೋರ್ ಕಮಿಟಿ ಸಭೆ ಕರೆದಿತ್ತು. ಭಿನ್ನಮತ ಶಮನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಖಾಸಗಿ ಹೋಟೆಲ್​ನಲ್ಲಿ ಕೋರ್ ಕಮಿಟಿ ಸಭೆ ಹಮ್ಮಿಕೊಂಡಿದ್ರು. ಆದ್ರೆ, ಸಭೆಗೆ ಅಹ್ವಾನ ಇದ್ರೂ ಪ್ರದೀಪ್ ಶೆಟ್ಟರ್, ಮುನೇನಕೊಪ್ಪ, ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಗೈರಾಗುವ ಮೂಲಕ ಬಿಜೆಪಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಇನ್ನು ಕೋರ್ ಕಮಿಟಿ ಸಭೆಯಲ್ಲಿ ಘಟಾನುಘಟಿ ನಾಯಕರು ಭಾಗಿಯಾಗಿದ್ರು. ಯಾರು ಏನೇ ಮಾತಾಡಿದ್ರು ನಮಗೆ ಕಾರ್ಯಕರ್ತರು ಮುಖ್ಯ. ಒಬ್ಬರು ಇಬ್ಬರು ಮಾತಾಡಿದರೆ ಅದು ಭಿನ್ನಮತ ಅಲ್ಲ. ಬಹಿರಂಗವಾಗಿ ಯಾರೂ ಪಕ್ಷದ ವಿರುದ್ಧ ಹೇಳಿಕೆ ಕೊಡಬಾರದು ಎಂದು ನಾಯಕರು ಖಡಕ್ ಸೂಚನೆ ಕೊಟ್ಟಿದ್ದಾರೆ. ಭಿನ್ನ ಶಾಸಕರು ಸಭೆಗೆ ಗೈರಾದ ಬಗ್ಗೆ ಬಿಜೆಪಿ ನಾಯಕರು ಕೊಟ್ಟ ಸ್ಪಷ್ಟನೆ ಇದು.

ಅಂತೂ ಇಂತೂ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದನ್ನ ನಾಯಕರ ಗೈರು ಎತ್ತಿ ತೋರಿಸಿದ್ದು, ಇದನ್ನು ಪಕ್ಷದ ಹಿರಿಯ ನಾಯಕರು ಹೇಗೆ ಸರಿ ಮಾಡುತ್ತಾರೆ ಕಾದು ನೋಡಬೇಕಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago