ಬೆಂಗಳೂರಿನಲ್ಲಿ ತಮಿಳುನಾಡು ಸಾರಿಗೆ ಬಸ್​ಗಳ ಮೇಲೆ ಕಲ್ಲು ತೂರಾಟ; ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

By: Ommnews

Date:

Share post:

ಬೆಂಗಳೂರು: ಬೆಂಗಳೂರಿನ ಸ್ಯಾಟ್​ಲೈಟ್ ಸಮೀಪ‌ದ ಭಾರತ್ ಪೆಟ್ರೋಲ್ ಬಂಕ್ ಬಳಿ ತಮಿಳುನಾಡು ಸಾರಿಗೆ ಬಸ್​ಗಳ ಮೇಲೆ ಕಲ್ಲು ತೂರಾಟವಾಗಿದೆ. ಸೆ.11ರ ಮಧ್ಯರಾತ್ರಿ ತಮಿಳುನಾಡಿಗೆ ಸೇರಿದ 4 ಬಸ್​ಗಳ​ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬಸ್ ಚಾಲಕ ಗುಣಶೇಖರನ್ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಾಮರಾಜಪೇಟೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Advertisement
Advertisement
Advertisement

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.11ರಂದು ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್​ಗೆ ಕರೆ ನೀಡಿತ್ತು. ಪ್ರತಿಭಟನಾಕಾರರು ರೋಡಿಗಿಳಿದ ಕೆಲ ವಾಹನಗಳ ಮೇಲೆ ಕಲ್ಲು, ಮೊಟ್ಟೆ ತೂರಾಟ ಮಾಡಿ ಆಕ್ರೋಶ ಹೊರ ಹಾಕಿದ್ದರು. ಮಧ್ಯಾಹ್ನ ಸಾರಿಗೆ ಸಚುವ ರಾಮಲಿಂಗಾರೆಡ್ಡಿ ಫ್ರೀಡಂ ಪಾರ್ಕ್​ಗೆ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಮಾತನಾಡಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು. ಇದರ ನಡುವೆ ತಡರಾತ್ರಿ ತಮಿಳುನಾಡು ಬಸ್​ಗಳ ಮೇಲೆ ಕಲ್ಲು ತೂರಾಟವಾಗಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section