ಬೆಂಗಳೂರಿನಲ್ಲಿ ತಮಿಳುನಾಡು ಸಾರಿಗೆ ಬಸ್​ಗಳ ಮೇಲೆ ಕಲ್ಲು ತೂರಾಟ; ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

0
89

ಬೆಂಗಳೂರು: ಬೆಂಗಳೂರಿನ ಸ್ಯಾಟ್​ಲೈಟ್ ಸಮೀಪ‌ದ ಭಾರತ್ ಪೆಟ್ರೋಲ್ ಬಂಕ್ ಬಳಿ ತಮಿಳುನಾಡು ಸಾರಿಗೆ ಬಸ್​ಗಳ ಮೇಲೆ ಕಲ್ಲು ತೂರಾಟವಾಗಿದೆ. ಸೆ.11ರ ಮಧ್ಯರಾತ್ರಿ ತಮಿಳುನಾಡಿಗೆ ಸೇರಿದ 4 ಬಸ್​ಗಳ​ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬಸ್ ಚಾಲಕ ಗುಣಶೇಖರನ್ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಾಮರಾಜಪೇಟೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.11ರಂದು ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್​ಗೆ ಕರೆ ನೀಡಿತ್ತು. ಪ್ರತಿಭಟನಾಕಾರರು ರೋಡಿಗಿಳಿದ ಕೆಲ ವಾಹನಗಳ ಮೇಲೆ ಕಲ್ಲು, ಮೊಟ್ಟೆ ತೂರಾಟ ಮಾಡಿ ಆಕ್ರೋಶ ಹೊರ ಹಾಕಿದ್ದರು. ಮಧ್ಯಾಹ್ನ ಸಾರಿಗೆ ಸಚುವ ರಾಮಲಿಂಗಾರೆಡ್ಡಿ ಫ್ರೀಡಂ ಪಾರ್ಕ್​ಗೆ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಮಾತನಾಡಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು. ಇದರ ನಡುವೆ ತಡರಾತ್ರಿ ತಮಿಳುನಾಡು ಬಸ್​ಗಳ ಮೇಲೆ ಕಲ್ಲು ತೂರಾಟವಾಗಿದೆ.

LEAVE A REPLY

Please enter your comment!
Please enter your name here