ಮನೋರಂಜನೆ

4ನೇ ದಿನಕ್ಕೆ ‘ಕೆಜಿಎಫ್​ 2’, ‘ಬಾಹುಬಲಿ 2’ ದಾಖಲೆ ಮುರಿದ ‘ಜವಾನ್​’; ಇಲ್ಲಿದೆ ಲೆಕ್ಕಾಚಾರ

ಗಲ್ಲಾಪೆಟ್ಟಿಗೆಯಲ್ಲಿ ‘ಜವಾನ್​’ ಸಿನಿಮಾ ಅಬ್ಬರಿಸುತ್ತಿದೆ. ಈ ಸಿನಿಮಾದ ಕ್ರೇಜ್​ನಿಂದ ಅನೇಕ ಚಿತ್ರಗಳ ದಾಖಲೆಗಳು ಪುಡಿ ಆಗುತ್ತಿವೆ. ಸೆಪ್ಟೆಂಬರ್​ 7ರಂದು ‘ಜವಾನ್’ ಬಿಡುಗಡೆ ಆಯಿತು. ಶಾರುಖ್​ ಖಾನ್​ ಅಭಿಮಾನಿಗಳು ಈ ಸಿನಿಮಾಗೆ ದೊಡ್ಡ ಮಟ್ಟದ ಓಪನಿಂಗ್​ ನೀಡಿದರು. ಅಂದಿನಿಂದ ಪ್ರತಿದಿನವೂ ಈ ಸಿನಿಮಾ ಸದ್ದು ಮಾಡುತ್ತಲೇ ಇದೆ. ಬಾಕ್ಸ್​ ಆಫೀಸ್​ ಕಲೆಕ್ಷನ್​ ವಿಚಾರದಲ್ಲಿ ಈ ಚಿತ್ರ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ​ಅಚ್ಚರಿ ಎಂದರೆ ಅತಿ ವೇಗವಾಗಿ 250 ಕೋಟಿ ರೂಪಾಯಿ ಗಳಿಸಿದ ಹಿಂದಿ ಸಿನಿಮಾ ಎಂಬ ಖ್ಯಾತಿಗೆ ‘ಜವಾನ್​’ ಪಾತ್ರವಾಗಿದೆ. ಈ ವಿಚಾರದಲ್ಲಿ ‘ಕೆಜಿಎಫ್​ 2’ ಮತ್ತು ‘ಬಾಹುಬಲಿ 2’ ಸಿನಿಮಾದ ಹಿಂದಿ ವರ್ಷನ್​ ಅನ್ನು ‘ಜವಾನ್​’ ಮೀರಿಸಿದೆ.

Advertisement
Advertisement
Advertisement

ದಕ್ಷಿಣ ಭಾರತದ ‘ಕೆಜಿಎಫ್​ 2’, ‘ಬಾಹುಬಲಿ 2’ ಮುಂತಾದ ಸಿನಿಮಾಗಳು ಹಿಂದಿಗೂ ಡಬ್​ ಆಗಿ ತೆರೆಕಂಡು ಉತ್ತಮವಾಗಿ ಕಮಾಯಿ ಮಾಡಿದ್ದವು. ಆ ಚಿತ್ರಗಳ ಗಳಿಕೆಗೆ ಹೋಲಿಸಿದರೆ ‘ಜವಾನ್​’ ಸಿನಿಮಾ ಬಹಳ ವೇಗವಾಗಿ ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತಿದೆ. ಈ ವಿಚಾರದಲ್ಲಿ ಶಾರುಖ್​ ಖಾನ್​ ಅವರು ಹೊಸ ದಾಖಲೆ ಬರೆದಿದ್ದಾರೆ. ಹಿಂದಿ ಮಾರುಕಟ್ಟೆಯಲ್ಲಿ 250 ಕೋಟಿ ರೂಪಾಯಿ ಗಳಿಸಲು ‘ಕೆಜಿಎಫ್​ 2’ ಸಿನಿಮಾ 7 ದಿನಗಳನ್ನು ತೆಗೆದುಕೊಂಡಿತ್ತು. ‘ಬಾಹುಬಲಿ 2’ ಸಿನಿಮಾಗೆ 8 ದಿನ ಹಿಡಿದಿತ್ತು. ಆದರೆ ‘ಜವಾನ್​’ ಸಿನಿಮಾ ಕೇವಲ ನಾಲ್ಕೇ ದಿನದಲ್ಲಿ 250 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ.

‘ಜವಾನ್​’ ಸಿನಿಮಾಗೆ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​ ಜೊತೆ ವಿಜಯ್​ ಸೇತುಪತಿ, ದೀಪಿಕಾ ಪಡುಕೋಣೆ, ಸುನಿಲ್​ ಗ್ರೋವರ್​, ಸಂಜಯ್​ ದತ್​, ನಯನತಾರಾ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿರುದ್ಧ್​ ರವಿಚಂದರ್​ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಹಿಂದಿ, ತಮಿಳು, ತೆಲುಗು ವರ್ಷನ್​ ಸೇರಿ ಈ ಸಿನಿಮಾಗೆ ನಾಲ್ಕು ದಿನದಲ್ಲಿ 520 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago