ಶಿಕ್ಷಣ

Byju’s : ರೂಪಾಯಿ ಸಾಲ ಮರುಪಾವತಿಗಾಗಿ 2 ಕಂಪನಿಗಳನ್ನೇ ಮಾರಾಟಕ್ಕಿಟ್ಟ ಬೈಜೂಸ್

ನವದೆಹಲಿ: ದೇಶದ ಅತೀ ದೊಡ್ಡ ಶಿಕ್ಷಣ ತಂತ್ರಜ್ಞಾನ ಸಂಸ್ಥೆಯಾದ ಬೈಜೂಸ್ (‌Byju’s) ಕಳೆದ ಕೆಲವು ತಿಂಗಳಿನಿಂದ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದು, ಇದೀಗ ಸಾಲದ ಹೊರೆಯನ್ನು ಇಳಿಸಿಕೊಳ್ಳುವ ನಿಟ್ಟಿನಲ್ಲಿ ತನ್ನ ಎರಡು ವಿದೇಶಿ ಕಂಪನಿಗಳನ್ನು ಮಾರಾಟ ಮಾಡಲು ಮುಂದಾಗಿರುವುದಾಗಿ ವರದಿ ತಿಳಿಸಿದೆ.

Advertisement
Advertisement
Advertisement

ಬೈಜೂ ರವೀಂದ್ರನ್‌ ನೇತೃತ್ವದ ಖಾಸಗಿ ಸ್ಟಾರ್ಟ್‌ ಅಪ್‌ ಕಂಪನಿ ಸುಮಾರು 8,195 ಕೋಟಿ ರೂಪಾಯಿಗೆ ಎರಡು ವಿದೇಶಿ ಕಂಪನಿಗಳನ್ನು ಖರೀದಿಸಿತ್ತು. ಆದರೆ ಏತನ್ಮಧ್ಯೆ ಅಮೆರಿಕದ ಕಂಪನಿಯೊಂದರಿಂದ ಪಡೆದಿದ್ದ 9,956 ಕೋಟಿ ರೂಪಾಯಿ ಸಾಲವನ್ನು ಮರುಪಾವತಿಸಬೇಕಾಗಿದೆ. ಇದರಿಂದಾಗಿ ಎರಡು ವಿದೇಶಿ ಕಂಪನಿಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದೆ ಎಂದು ವರದಿ ಹೇಳಿದೆ.

ಬೈಜೂಸ್‌ ಕಂಪನಿ ಮಕ್ಕಳ ಡಿಜಿಟಲ್‌ ರೀಡಿಂಗ್‌ ಪ್ಲ್ಯಾಟ್‌ ಫಾರಂ ಎಪಿಕ್‌ ಅನ್ನು 500 ಮಿಲಿಯನ್‌ ಡಾಲರ್‌ ಗೆ (ಅಂದಾಜು 3,729.8 ಕೋಟಿ) ಹಾಗೂ ಅಪ್‌ ಸ್ಕಿಲ್ಲಿಂಗ್‌ ಪ್ಲ್ಯಾಟ್‌ ಫಾರಂ ಗ್ರೇಟ್‌ ಲರ್ನಿಂಗ್‌ ಅನ್ನು 600 ಮಿಲಿಯನ್‌ ಡಾಲರ್‌ (ಸುಮಾರು 4,466 ಕೋಟಿ)ಗೆ ಖರೀದಿಸಿತ್ತು. ಇದೀಗ ಬೈಜೂಸ್‌ ಕಂಪನಿ ಈ ಎಪಿಕ್‌ ಮತ್ತು ಗ್ರೇಟ್‌ ಲರ್ನಿಂಗ್‌ ಕಂಪನಿಗಳನ್ನು 800 ಮಿಲಿಯನ್‌ ಡಾಲರ್‌ ನಿಂದ ಒಂದು ಬಿಲಿಯನ್‌ ಡಾಲರ್‌ ಮೊತ್ತಕ್ಕೆ ಮಾರಾಟ ಮಾಡಲು ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.

ಮತ್ತೊಂದೆಡೆ ಸಾಲದ ಸುಳಿಗೆ ಸಿಲುಕಿರುವ ಬೈಜೂಸ್‌ ಈಕ್ವಿಟಿ ಮಾರಾಟದ ಮೂಲಕ ನಗದನ್ನು ಕ್ರೋಢೀಕರಿಸಲು ಪ್ರಯತ್ನಿಸುತ್ತಿದೆ. ಸಾಲ ಮರುಪಾವತಿಗಾಗಿ ಬೈಜೂಸ್‌ ಅಮೆರಿಕದ ಬ್ಯಾಂಕರ್ಸ್‌ ಜೊತೆ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago