ಸುದ್ದಿಗಳು

Cricket Stadium : ಪುತ್ತೂರಿನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ಭರವಸೆ

ಪುತ್ತೂರು: ಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆಂದು ಕಬಕ ಗ್ರಾಮದ ಸರ್ವೆ ನಂ.260/1ಪಿನಲ್ಲಿ 23.25 ಎಕ್ರೆ ಜಮೀನು ಕಾದಿರಿಸಿದರೂ, ಕ್ರೀಡಾಂಗಣ ನಿರ್ಮಾಣಕ್ಕೆ ಯಾವುದೇ ಕ್ರಮ ಕೈಗೊಳ್ಳದೇ ಇರುವ ಹಿನ್ನೆಲೆಯಲ್ಲಿ ಪುತ್ತೂರು ಕ್ರಿಕೆಟ್‌ ಯೂನಿಯನ್‌ ಪದಾಧಿಕಾರಿಗಳು ಶಾಸಕರ ಮೂಲಕ ಇಲಾಖೆಯ ಗಮನಕ್ಕೆ ತಂದಿದ್ದರು.

Advertisement
Advertisement
Advertisement

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಎಸೋಸಿಯೇಶನ್‌ ಅಧ್ಯಕ್ಷ ರಘುರಾಮ ಭಟ್‌ ಅವರು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರನ್ನು ಭೇಟಿ ಮಾಡಿ ಅತಿ ಶೀಘ್ರದಲ್ಲಿ ಪುತ್ತೂರಿನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಭರವಸೆ ನೀಡಿದ್ದಾರೆ.

ಸ್ಥಳೀಯ ಕ್ರಿಕೆಟ್‌ ಕ್ರೀಡಾಪಟುಗಳಿಗೆ ತರಬೇತಿ ನೀಡುವುದು ಮತ್ತು ಕ್ರಿಕೆಟ್‌ ಆಟವನ್ನು ಇನ್ನಷ್ಟೂ ಅಭಿವೃದ್ಧಿ ಪಡಿಸುವುದು ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದಿರುವ ಪ್ರಮುಖ ಉದ್ದೇಶವಾಗಿದೆ. ಇದರ ಜತೆಗೆ ಜಿಲ್ಲಾ ಕೇಂದ್ರವಾಗಲು ಎಲ್ಲಾ ಅರ್ಹತೆ ಹೊಂದಿರುವ ಪುತ್ತೂರಿಗೆ ಸುಸಜ್ಜಿತ ಕ್ರಿಕೆಟ್‌ ಕ್ರೀಡಾಂಗಣದ ಅವಶ್ಯಕತೆಯೂ ಇತ್ತು.

ಈ ಕ್ರೀಡಾಂಗಣದಿಂದಾಗಿ ಪ್ರವಾಸೋದ್ಯಮ, ಸ್ಥಳೀಯರಿಗೆ ಉದ್ಯೋಗಾವಕಾಶ ಹಾಗೂ ನಗರದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕ್ರೀಡಾಂಗಣಕ್ಕೆ ಕಬಕ ಮತ್ತು ಬಲಾ°ಡು ಮೂಲಕ ರಸ್ತೆಯ ವ್ಯವಸ್ಥೆಯಿದೆ. ಈ ಹಿಂದೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದರೆ ಇದನ್ನು ಅಭಿವೃದ್ಧಿ ಪಡಿಸುವ ಕಾರ್ಯ ನಡೆಯದಿದ್ದಾಗ ಪುತ್ತೂರು ಕ್ರಿಕೆಟ್‌ ಯೂನಿಯನ್‌ ಕ್ಲಬ್‌ ಶಾಸಕರ ಗಮನಕ್ಕೆ ತಂದಿದ್ದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago