ಮಧ್ಯಪ್ರದೇಶದ ಅತಿದೊಡ್ಡ ಹನಿಟ್ರ್ಯಾಪ್ ಹಗರಣದ ಕಿಂಗ್ಪಿನ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾಳೆ. ಮಾಜಿ ಸಚಿವರು, ಉನ್ನತ ಮಟ್ಟದ ಅಧಿಕಾರಿಗಳಿಗೆ ಯುವತಿಯರನ್ನು ಪೂರೈಕೆ ಮಾಡಿ ಬಳಿಕ ಅವರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ ಆರತಿ ದಯಾಳ್ ಬೆಂಗಳೂರಿನ ಮಹದೇವಪುರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಬೆಂಗಳೂರು, (ಸೆಪ್ಟೆಂಬರ್ 13): ಮಧ್ಯಪ್ರದೇಶದ(madhya pradesh) ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್ನ(high profile honey trap) ಮಾಸ್ಟರ್ ಮೈಡ್ ಬೆಂಗಳೂರಿನಲ್ಲಿ (Bengaluru) ಸಿಕ್ಕಿಬಿದ್ದಿದ್ದಾಳೆ. ಮಧ್ಯಪ್ರದೇಶದ ಅತಿದೊಡ್ಡ ಹನಿಟ್ರ್ಯಾಪ್ ಹಗರಣದ ಮಾಸ್ಟರ್ ಮೈಡ್ ಆರತಿ ದಯಾಳ್(Aarti Dayal) ಅವಳನ್ನ ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿ ಮಧ್ಯಪ್ರದೇಶದ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. 2019 ರಲ್ಲಿ ಮಧ್ಯಪ್ರದೇಶದಲ್ಲಿ ನಡೆದಿದ್ದ ಬಹುದೊಡ್ಡ ಹೈಪ್ರೋಫೈಲ್ ಹನಿಟ್ರಾಪ್ ಪ್ರಕರಣದಲ್ಲಿ ಆರತಿ ಜೈಲು ಸೇರಿ 2020 ರಲ್ಲಿ ಹೊರ ಬಂದವಳು ಯಾರಿಗೂ ಸಿಕ್ಕಿರಲಿಲ್ಲ. ಸೋನು, ಸಮಂತಾ, ಆರತಿ ಅಗರ್ವಾಲ್ ಹೀಗೆ ಬೇರೆ ಬೇರೆ ಹೆಸರಿನಲ್ಲಿ ತಲೆಮರಿಸಿಕೊಂಡಿದ್ದಳು. ಅಲ್ಲದೇ ಈ ಹಿಂದೆ ಹೈ ಪ್ರೊಫೈಲ್ ಹನಿಟ್ರಾಪ್ ಮಾಡುತ್ತಿದ್ದವಳು ಈಗ ಕಳ್ಳತನ ದಾರಿ ಹಿಡಿದಿದ್ದಳು.
ಇಂತಹದ್ದೇ ಹನಿಟ್ರ್ಯಾಪ್ ಪ್ರಕರಣವೊಂದರಲ್ಲಿಇಂದೋರ್ ಪುರಸಭೆಯ ಎಂಜಿನಿಯರ್ ಹರ್ಬಜನ್ ಸಿಂಗ್ ಅವರಿಗೆ ಆರತಿ ದಯಾಳ್ ಮತ್ತು ಮೋನಿಯಾ ಯಾದವ್ ಸೇರಿ 3 ಕೋಟಿ ರೂ. ಹಫ್ತಾ ಬೇಡಿಕೆ ಇಟ್ಟಾಗ ಅವರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಈ ಜಾಲದ ಕೃತ್ಯ ಬಯಲಾಗಿತ್ತು.