ಬೆಂಗಳೂರು : ಇತ್ತೀಚೆಗೆ ಸೈಬರ್ ಸೇರಿ ವಿವಿಧ ಮಾದರಿಯ ಕೇಸ್ ಬೆಳಕಿಗೆ ಬರುತ್ತಿವೆ. ದೇಶ ವಿರೋಧಿಗಳು ಕರ್ನಾಟಕ, ಕೇರಳ ಸೇರಿದಂತೆ ಹಲವೆಡೆ ಇದ್ದಾರೆ. ಅವರನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಪ್ರಮುಖವಾಗಿ ಉಗ್ರವಾದ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ಸಂಬಂಧ ಅಂತರಾಜ್ಯಗಳಲ್ಲಿ ಉಂಟಾಗುವ ಕಾನೂನಾತ್ಮ ತೊಡಕುಗಳನ್ನು ನಿವಾರಿಸಿಕೊಂಡು ಒಟ್ಟಾಗಿ ಕೆಲಸ ಮಾಡಬೇಕು. ಈ ಬಗ್ಗೆ ಅರಿವು ಮೂಡಿಸುವ ಜೊತೆಗೆ ಉತ್ತಮ ಭದ್ರತೆಯನ್ನು ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್ನಲ್ಲಿ ನಡೆದ ದಕ್ಷಿಣ ಭಾರತ ಡಿಜಿಪಿಗಳ ಕಾನ್ಫರೆನ್ಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಹಲವಾರು ಮಾದರಿಯ ಅಪರಾಧಗಳು ಖಾಸಗಿತನಕ್ಕೆ ದಕ್ಕೆ ಉಂಟು ಮಾಡುತ್ತಿವೆ. ಉಗ್ರಗಾಮಿಗಳು ಒಂದು ರಾಜ್ಯದಲ್ಲಿ ಕೃತ್ಯ ಎಸಗಿ ಬೇರೆ ರಾಜ್ಯದಲ್ಲಿ ತಲೆ ಮರಿಸಿಕೊಳ್ಳುತ್ತಾರೆ. ಇವರೆಲ್ಲರನ್ನು ಮಟ್ಟ ಹಾಕಬೇಕಿದೆ. ಹೀಗಾಗಿ ಈ ವಿಚಾರದಲ್ಲಿ ರಾಜ್ಯವಾರು ಅಧಿಕಾರಿಗಳ ಹಂತದಲ್ಲಿ ಸ್ವಲ್ಪ ತೊಂದರೆಗಳು ಆಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಿಕೊಂಡು ಗಡಿಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಕರೆ ಕೊಟ್ಟರು.
ಇತ್ತಿಚೀನ ದಿನದಲ್ಲಿ ಸೈಬರ್ ಸೇರಿ ವಿವಿಧ ಮಾದರಿಯ ಕೇಸ್ಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಆರೋಪಿಗಳಿಗಿಂತ ಒಂದು ಹೆಜ್ಜೆ ಮುಂದೆ ಇದ್ದು ಕೆಲಸ ಮಾಡಬೆಡಕಿದೆ. ಸಮಾಜವನ್ನು ಕಾಪಾಡಲು ಪೊಲೀಸ್ ಇಲಾಖೆ ಮಾಡುತ್ತಿರುವ ಕೆಲಸ ನಮಗೆ ಆತ್ಮವಿಶ್ವಾಸ ಹೆಚ್ಚಿಸುತ್ತಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಇನ್ನು ರಾಷ್ಟ್ರದ ಪ್ರಮುಖ ಪೊಲೀಸ್ ಅಧಿಕಾರಿಗಳು ಇಂದು ಸೌತ್ ಇಂಡಿಯಾ ಡಿಜಿಪಿಗಳ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿರುವುದಕ್ಕೆ ಹೆಮ್ಮೆ ಇದೆ. ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ, ಪುದುಚೇರಿ, ಅಂಡಮಾನ್-ನಿಕೋಬಾರ್ ಲಕ್ಷದ್ವೀಪ್ಗಳ ಎನ್ಸಿಸಿಬಿ, ಎನ್ಐಎ, ಸಿಆರ್ಪಿಎಫ್, ಸಿಐಎಸ್ಎಫ್ ಮತ್ತು ಕೇಂದ್ರ ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದೀರಿ. ನಾವೆಲ್ಲರು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…