ತಂತ್ರಜ್ಞಾನ

ವಾಟ್ಸ್​ಆ್ಯಪ್​ನಲ್ಲಿ ನಿರೀಕ್ಷೆಗೂ ಮೀರಿದ ಫೀಚರ್: ಬರುತ್ತಿದೆ ಚಾಟ್ ಫಿಲ್ಟರ್ ಎಂಬ ಆಯ್ಕೆ

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಪ್ರತಿದಿನ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಮೊನ್ನೆಯಷ್ಟೆ ಭಾರತದಲ್ಲಿ ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿದಂತಹ 72 ಲಕ್ಷಕ್ಕೂ ಅಧಿಕ ಖಾತೆಯನ್ನು ನಿಷೇಧಿಸಿ ಸುದ್ದಿಯಾಗಿತ್ತು. ಇದರ ನಡುವೆ ಹೊಸ ಹೊಸ ಫೀಚರ್​ಗಳನ್ನು ಕೂಡ ಘೋಷಣೆ ಮಾಡುತ್ತಿದೆ.

Advertisement
Advertisement
Advertisement

ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿದೆ. ಹೀಗಿರುವಾಗ ಇಂದು ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ.

ವಾಟ್ಸ್​ಆ್ಯಪ್ ಅಪ್‌ಡೇಟ್‌ಗಳ ಟ್ರ್ಯಾಕರ್, WabetaInfo ನ ವರದಿಯ ಪ್ರಕಾರ, ಮೆಟಾ-ಮಾಲೀಕತ್ವದ ಇನ್‌ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಶನ್ ಬಳಕೆದಾರರಿಗೆ ಚಾಟ್ ಪಟ್ಟಿಯನ್ನು ಫಿಲ್ಟರ್ ಎಂಬ ಹೊಸ ವೈಶಿಷ್ಟ್ಯವನ್ನು ನೀಡಲು ಮುಂದಾಗಿದೆ. ಸದ್ಯ ಈ ಫೀಚರ್ ಅಭಿವೃದ್ದಿ ಹಂತದಲ್ಲಿದೆ ಎಂದು ಹೇಳಿದೆ.

ವಾಟ್ಸ್​ಆ್ಯಪ್ ಬೀಟಾ 2.23.14.17 ಅಪ್ಡೇಟ್​ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

ಮಾಹಿತಿಯ ಪ್ರಕಾರ, ಫಿಲ್ಟರ್​ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್​ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್​ಆ್ಯಪ್​ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.

ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್‌ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್​ಗಳಿಗೆ ಇದು ಅನ್ವಯ ಆಗುವುದಿಲ್ಲ. ಇದಕ್ಕಾಗಿ ಯಾವುದೇ ಆಯ್ಕೆ ಕಂಡುಬಂದಿಲ್ಲ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago