ಟ್ರಿಪೋಲಿ: ಲಿಬಿಯಾದಲ್ಲಿ ಉಂಟಾಗಿರುವ ಭೀಕರ ಮಳೆಯಿಂದ ಉಂಟಾದ ಪ್ರವಾಹದಿಂದ 2 ಅಣೆಕಟ್ಟೆಗಳು ಒಡೆದು 5,300 ಜನ ಸಾವನ್ನಪ್ಪಿದ್ದಾರೆ. 10 ಸಾವಿರಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರಿಂದ ಕರಾವಳಿಯ ನಗರವಾದ ಪೆರ್ನಾ ಅತ್ಯಂತ ಹೆಚ್ಚು ಹಾನಿಗೊಳಾಗಿದೆ. ಇಡೀ ನಗರವನ್ನು ವಿಪತ್ತು ಪ್ರದೇಶ ಎಂದು ಘೋಷಿಸಲಾಗಿದೆ. ಅವಶೇಷಗಳಿಂದ ಸುಮಾರು 1,000 ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿರುವ ಹಲವಾರು ರಕ್ಷಣಾ ಕಾರ್ಯಕರ್ತರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದಿಂದ ಹಲವಾರು ಕಟ್ಟಡಗಳು ಹಾಗೂ ವಾಹನಗಳು ಹಾನಿಗೊಳಗಾಗಿವೆ. ಮೃತದೇಹಗಳು ಎಲ್ಲೆಂದರಲ್ಲಿ ಬಿದ್ದಿವೆ. ಅನೇಕರು ಮೃತಪಟ್ಟ ಕುಟುಂಬಸ್ಥರ ಶವಗಳ ಹುಡುಕಾಟದಲ್ಲಿ ತೊಡಗಿರುವುದು ಕಂಡು ಬಂದಿದೆ.
ಸಹಾಯಕ್ಕಾಗಿ ವಿಶ್ವಸಂಸ್ಥೆಯ ತುರ್ತು ಸೇವೆಯ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಅಲ್ಲದೇ ಬೇರೆ ಬೇರೆ ದೇಶಗಳಿಂದ ಅಗತ್ಯ ನೆರವುಗಳನ್ನು ನೀಡಲಾಗುತ್ತಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…