ಕ್ರೀಡಾ ಸುದ್ದಿ

ಭಾರತದ ವಿರುದ್ಧ ಸೋಲು: ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ.!

Asia Cup 2023: ಶ್ರೀಲಂಕಾ ಹಾಗೂ ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಏಷ್ಯಾಕಪ್​ನ​ ಫೈನಲ್​ಗೇರಲಿದೆ. ಹೀಗಾಗಿ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಒಂದು ವೇಳೆ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ ಉಭಯ ತಂಡಗಳು ಒಂದೊಂದು ಅಂಕ ಹಂಚಿಕೊಳ್ಳಲಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ ತಂಡವು ಫೈನಲ್​ಗೆ ಅರ್ಹತೆ ಪಡೆಯಲಿದೆ.

Advertisement
Advertisement
Advertisement

ಏಷ್ಯಾಕಪ್​ನ ಸೂಪರ್-4 ಹಂತದ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಭಾರತದ ನೀಡಿದ 356 ರನ್​ಗಳ ಸವಾಲನ್ನು ಬೆನ್ನತ್ತಿದ ಪಾಕ್ ಪಡೆ ಕೇವಲ 128 ರನ್​ಗಳಿಗೆ ಆಲೌಟ್ ಆಗಿತ್ತು. ಇತ್ತ 228 ರನ್​ಗಳ ಅಮೋಘ ಗೆಲುವಿನೊಂದಿಗೆ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸಿತು. ಇದೀಗ ಈ ಹೀನಾಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ್ ತಂಡವು ನಿರ್ಣಾಯಕ ಪಂದ್ಯಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

ಅಂದರೆ ಗುರುವಾರ ಶ್ರೀಲಂಕಾ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಪಾಕಿಸ್ತಾನ್ ಗೆದ್ದರೆ ಫೈನಲ್​ಗೆ ಪ್ರವೇಶಿಸಬಹುದು. ಇದಕ್ಕಾಗಿ ಬಲಿಷ್ಠ ಪಡೆಯನ್ನೇ ರೂಪಿಸಲು ಪಾಕ್ ತಂಡದ ಆಡುವ ಬಳಗದಲ್ಲಿ ಐದು ಬದಲಾವಣೆ ಮಾಡಲಾಗಿದೆ.

ಈ ಬದಲಾವಣೆಗಾಗಿ ತಂಡದ ಅನುಭವಿ ಆರಂಭಿಕ ಆಟಗಾರ ಫಖರ್ ಝಮಾನ್​ಗೆ ಗೇಟ್ ಪಾಸ್ ನೀಡಲಾಗಿದ್ದು, ಬದಲಿ ಆಟಗಾರನಾಗಿ ಮೊಹಮ್ಮದ್ ಹ್ಯಾರಿಸ್​ರನ್ನು ಆಯ್ಕೆ ಮಾಡಲಾಗಿದೆ. ಇನ್ನು ಸಲ್ಮಾನ್ ಆಘಾ ಸ್ಥಾನದಲ್ಲಿ ಸೌದ್ ಶಕೀಲ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಫಹೀಮ್ ಅಶ್ರಫ್ ಜಾಗದಲ್ಲಿ ಮೊಹಮ್ಮದ್ ನವಾಝ್ ಕಣಕ್ಕಿಳಿಯಲಿದ್ದಾರೆ.

ಇನ್ನು ಗಾಯದಿಂದ ಬಳಲುತ್ತಿರುವ ಪ್ರಮುಖ ವೇಗಿಗಳಾದ ನಸೀಮ್ ಶಾ ಮತ್ತು ಹ್ಯಾರಿಸ್ ರೌಫ್ ಸ್ಥಾನಗಳಲ್ಲಿ ಝಮಾನ್ ಖಾನ್ ಹಾಗೂ ಮೊಹಮ್ಮದ್ ವಾಸಿಂ ಜೂನಿಯರ್ ಕಾಣಿಸಿಕೊಳ್ಳಲಿದ್ದಾರೆ. ಈ ಐದು ಬದಲಾವಣೆಯೊಂದಿಗೆ ಪಾಕಿಸ್ತಾನ್ ತಂಡವು ಶ್ರೀಲಂಕಾ ವಿರುದ್ಧ ಕಣಕ್ಕಿಳಿಯಲಿದೆ.

ಯಾರು ಫೈನಲ್​ಗೆ?

ಶ್ರೀಲಂಕಾ ಹಾಗೂ ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಏಷ್ಯಾಕಪ್​ನ​ ಫೈನಲ್​ಗೇರಲಿದೆ. ಹೀಗಾಗಿ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಒಂದು ವೇಳೆ ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ ಉಭಯ ತಂಡಗಳು ಒಂದೊಂದು ಅಂಕ ಹಂಚಿಕೊಳ್ಳಲಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ ತಂಡವು ಫೈನಲ್​ಗೆ ಅರ್ಹತೆ ಪಡೆಯಲಿದೆ.

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್, ಝಮಾನ್ ಖಾನ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago