ಚಲನಚಿತ್ರ

‘800’ ಸಿನಿಮಾ ರಿಲೀಸ್ ದಿನಾಂಕ ಘೋಷಣೆ; ಅಕ್ಟೋಬರ್ 6ಕ್ಕೆ ಮುತ್ತಯ್ಯ ಬಯೋಪಿಕ್

ವಿಶ್ವ ಕಂಡ ಅಪ್ರತಿಮ ಸ್ಪಿನ್ನರ್​ಗಳಲ್ಲಿ ​ಮುತ್ತಯ್ಯ ಮುರಳೀಧರನ್ ಕೂಡ ಒಬ್ಬರು. ಶ್ರೀಲಂಕಾ ಪರ ಆಡಿದ್ದ ಅವರು, ಹಲವು ಸಾಧನೆ ಮಾಡಿದ್ದಾರೆ. ಅವರು ಬೌಲಿಂಗ್​ಗೆ ಇಳಿದರೆ ಎದುರಾಳಿಗಳು ನಡುಗುತ್ತಿದ್ದರು. ಅವರ ಕುರಿತು ಈಗ ಬಯೋಪಿಕ್ ಸಿದ್ಧಗೊಳ್ಳುತ್ತಿದೆ. ಈ ಚಿತ್ರಕ್ಕೆ ‘800’ ಎಂದು ಶೀರ್ಷಿಕೆ ಇಡಲಾಗಿದೆ. ಬಹುಭಾಷೆಯಲ್ಲಿ ನಿರ್ಮಾಣ ಆಗಿರುವ ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಈ ಸಿನಿಮಾ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ. ಈ ಕುರಿತು ತಂಡ ಮಾಹಿತಿ ನೀಡಿದೆ.

Advertisement
Advertisement
Advertisement

ಮುತ್ತಯ್ಯ ಮುರಳೀಧರನ್​ ಅವರು ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಕ್ರಿಕೆಟರ್ ಆಗಬೇಕು ಎನ್ನುವ ಕನಸು ಕಂಡರು. ಒಳ್ಳೆಯ ಸ್ಪಿನ್ ಬೌಲರ್ ಆದರು. ಅವರು ವೃತ್ತಿ ಜೀವನದಲ್ಲಿ 800 ವಿಕೆಟ್ ಪಡೆದಿದ್ದಾರೆ. ಈ ಸಾಧನೆ ಮಾಡಿರುವ ಏಕೈಕ ಬೌಲರ್ ಎನ್ನುವ ಖ್ಯಾತಿ ಮುತ್ತಯ್ಯ ಮುರಳೀಧರನ್​ಗೆ ಇದೆ. ಈ ಕಾರಣದಿಂದ ಅವರ ಬಯೋಪಿಕ್​ಗೆ ‘800’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ರಿಲೀಸ್ ದಿನಾಂಕ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಮುತ್ತಯ್ಯ ಮುರಳೀಧರನ್ ಅವರ ಕ್ರಿಕೆಟ್ ಬದುಕು ಹಲವು ರೋಚಕ ಅಂಶಗಳಿಂದ ಕೂಡಿದೆ. ಸಾಕಷ್ಟು ವಿವಾದಗಳನ್ನು ಅವರು ಮಾಡಿಕೊಂಡಿದ್ದಾರೆ. ಅವುಗಳನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಶ್ರೀಲಂಕಾ ತಂಡ ಕ್ರಿಕೆಟ್ ಆಡಲು ಪಾಕಿಸ್ತಾನಕ್ಕೆ ತೆರಳಿತ್ತು. ಈ ವೇಳೆ ಗುಂಡಿನ ದಾಳಿ ಆಗಿತ್ತು. ಈ ದಾಳಿಯ ಸಂದರ್ಭದಲ್ಲಿ ಮುತ್ತಯ್ಯ ಕೂಡ ದಾಳಿಗೆ ಒಳಗಾದ ಬಸ್​ನಲ್ಲಿ ಇದ್ದರು. ಇದನ್ನೂ ಬಯೋಪಿಕ್​ನಲ್ಲಿ ಸೇರಿಸಲಾಗಿದೆ. ಅವರ ವೈಯಕ್ತಿಕ ವಿಚಾರಗಳು ಈ ಚಿತ್ರದಲ್ಲಿವೆ.

‘800’ ಚಿತ್ರಕ್ಕೆ ಎಂ.ಎಸ್​. ಶ್ರೀಪತಿ ನಿರ್ದೇಶನದಲ್ಲಿ ಮಾಡಿದ್ದಾರೆ. ಗಿಬ್ರಾನ್​ ಅವರ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಸ್ಲಂ ಡಾಗ್​​ ಮಿಲಿಯನೇರ್​’ ಸಿನಿಮಾದಲ್ಲಿ ನಟಿಸಿದ್ದ ಮಧುರ್​ ಮಿತ್ತಲ್​ ‘800’ ಚಿತ್ರದಲ್ಲಿ ಮುಖ್ಯಭೂಮಿಕೆ ಮಾಡಿದ್ದಾರೆ. ಮುತ್ತಯ್ಯ ಅವರ ಪತ್ನಿಯ ಪಾತ್ರಕ್ಕೆ ಮಹಿಮಾ ನಂಬಿಯಾರ್​ ನಟಿಸಿದ್ದಾರೆ. ತಮಿಳು, ತೆಲುಗು, ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಅಕ್ಟೋಬರ್​ 6ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಸಚಿನ್​ ತೆಂಡೂಲ್ಕರ್​ ಈ ಸಿನಿಮಾದ ಟ್ರೇಲರ್​ ರಿಲೀಸ್ ಮಾಡಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago