ಬೆಂಗಳೂರು, ಸೆ.15: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರು ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದರು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೈತ್ರಾ ಅವರಿಗೆ ಪಿಡ್ಸ್ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನು ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಸಿಸಿಬಿ ಕಚೇರಿಯಲ್ಲಿರುವ ವಾಶ್ ರೂಮ್ ಅನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಅದಾಗ್ಯೂ, ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟದ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ.
ವೈದ್ಯರ ತಪಾಸಣೆ ವೇಳೆ ಮೂರ್ಛೆ ರೋಗಕ್ಕೆ ಸಂಬಂಧಿಸಿದ ಯಾವುದೇ ಕುರುಹು ಕಂಡು ಬಂದಿಲ್ಲ ಎಂದು ತಿಳಿದುಬಂದಿದೆ. ಸದ್ಯ ಇನ್ನೂ ಕೆಲಕಾಲ ಅಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸಲು ಸಿಸಿಬಿ ಪೊಲೀಸರ ನಿರ್ಧಾರ ಮಾಡಿದ್ದಾರೆ. ಸದ್ಯ ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಬಂದ ತನಿಖಾಧಿಕಾರಿ ಸಿಸಿಬಿ ಕಚೇರಿಗೆ ವಾಪಸ್ ಆಗಿದ್ದಾರೆ. ಅಲ್ಲದೇ ಈ ಹಿಂದೆ ಇದೇ ರೀತಿ ಆಗಿದ್ದ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯೆ ಡಾ.ಅಸೀಮಾ ಬಾನು, ಚೈತ್ರಾ ಕುಂದಾಪುರ ಆರೋಗ್ಯ ಸ್ಥಿರವಾಗಿದೆ. ಚೈತ್ರಾ ಕುಂದಾಪುರ ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್ ಇದೆ. ಚೈತ್ರಾ ಕುಂದಾಪುರಗೆ ನಡೆಸಿದ ಎಲ್ಲಾ ಟೆಸ್ಟ್ನಲ್ಲೂ ನಾರ್ಮಲ್ ಇದೆ. ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೂರ್ಛೆ ರೋಗ ಇರಲಿಲ್ಲ. ಸದ್ಯ ಐಸಿಯುನಲ್ಲಿ ಚೈತ್ರಾ ಕುಂದಾಪುರಗೆ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದರು.
ಬಾಯಿ ಬಿಡದ ಚೈತ್ರಾ ಕುಂದಾಪುರ
ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದ ಬಳಿಕ ಚೈತ್ರಾ ಕುಂದಾಪುರ ಬಾಯಿ ಬಿಡುತ್ತಿಲ್ಲವಂತೆ. ವೈದ್ಯರು ಮಾತಾಡಿಸಿದ್ದಕ್ಕೆ ಸನ್ನೆ ಮೂಲಕ ಮಾತನಾಡಲು ಆಗುತ್ತಿಲ್ಲ ಎಂದು ಹೇಳುತ್ತಿದ್ದಾಳಂತೆ. ಆದರೆ, ಆಕೆಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಚೈತ್ರಾ ಕುಂದಾಪುರ ನಾಟಕಕ್ಕೆ ಸಿಸಿಬಿ ಪೊಲೀಸರು ಕಂಗಾಲಾಗಿದ್ದಾರೆ. ಅದಾಗ್ಯೂ, ಸಿಸಿಬಿ ಅಧಿಕಾರಿಗಳು ಕೂಡ ಚೈತ್ರಾ ಅವರನ್ನು ಮಾತನಾಡಿಸಲು ಯತ್ನಿಸುತ್ತಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…