ರಾಜ್ಯ

ವಿಘ್ನಗಳನ್ನ ನಿವಾರಿಸೋ ವಿಘ್ನೇಶ್ವರನ ಆರಾಧನೆಗೆ ವಿಘ್ನ, ಕರ್ನಾಟಕದ ಹಲವೆಡೆ ಗಲಾಟೆ

ಬೆಂಗಳೂರು, ಸೆ. 15: ಮತ್ತೆ ಗಣೇಶನ ಆಗಮನವಾಗುತ್ತಿದೆ. ಭಾರತದಲ್ಲಿ ಯಾವುದೇ ಜಾತಿ, ಮತ, ಪಂಥಗಳ ಬೇಧಭಾವವಿಲ್ಲದೆ ಅತ್ಯಂತ ವೈಭವದಿಂದ ಆಚರಿಸುವ ಹಬ್ಬವೆಂದರೆ ಗಣೇಶ ಚತುರ್ಥಿ. ಸಕಲ ವಿಘ್ನಗಳನ್ನು ನಿವಾರಿಸುವ ವಿನಾಯಕನು ನಂಬಿದ ಭಕ್ತರಿಗೆ ಬುದ್ಧಿ, ಆಯುಷ್ಯ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ದಯಪಾಲಿಸುತ್ತಾನೆ. ಆದ್ರೆ, ಕರ್ನಾಟಕದ ಹಲವು ಕಡೆಗಳಲ್ಲಿ ಗಣೇಶ ಕೂರಿಸುವ ವಿಚಾರಕ್ಕೆ ಗಲಾಟೆಗಳು ನಡೆಯುತ್ತಲೇ ಇವೆ. ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾನೆ ಮಾಡುವ ವಿಚಾರಕ್ಕೆ ಬಿಗ್ ಫೈಟ್ ನಡೆಯುತ್ತಿದೆ. ಅತ್ತ ಬೆಳಗಾವಿಯಲ್ಲಿ ಮುಸ್ಲಿಂ ಸಮುದಾಯ ಗಣೇಶೋತ್ಸವಕ್ಕೆ ಸೌಹಾರ್ದಯುತ ಗಿಫ್ಟ್ ಕೊಟ್ರೆ, ಇತ್ತ ಶಿವಮೊಗ್ಗದಲ್ಲಿ ಏನಾಗುತ್ತೋ ಎನ್ನುವ ಟೆನ್ಷನ್.

Advertisement
Advertisement
Advertisement

ಹುಬ್ಬಳ್ಳಿಯ ಈದ್ಗಾದಲ್ಲಿ ಗಣೇಶನನ್ನ ಕೂರಿಸುವಂತಿಲ್ಲ!

ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕು ಎನ್ನುವ ಕೂಗು ತೀವ್ರ ಸ್ವರೂಪ‌ ಪಡೆದುಕೊಂಡಿದೆ.‌ ಆದ್ರೆ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸಲು ಪಾಲಿಕೆ ಆಯುಕ್ತರು ಅನುಮತಿ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಪಟ್ಟು ಹಿಡಿದಿವೆ. ಆದ್ರೆ ಅನುಮತಿ ಕೊಟ್ರೆ ಕೋಮುಗಲಭೆಗೆ ಅವಕಾಶ ಮಾಡಿಕೊಟ್ಟಂತಾಗುತ್ತೆ ಅಂತ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಇದನ್ನ ಖಂಡಿಸಿ ನಿನ್ನೆ ರಾತ್ರಿ ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಪಾಲಿಕೆ ಆಯುಕ್ತರ ಕೊಠಡಿಗೆ ಮುತ್ತಿಗೆ ಹಾಕಿ, ಆಕ್ರೋಶ ಹೊರಹಾಕಿದ್ರು. ನಾವು ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ ಅಂತ ಎಚ್ಚರಿಕೆ ನೀಡಿದ್ರು.

ಗಣೇಶೋತ್ಸವಕ್ಕೆ ಮುಸ್ಲಿಂ ಸಮುದಾಯದ ‘ಸೌಹಾರ್ದ’

ಕುಂದಾನಗರಿ ಬೆಳಗಾವಿಯಲ್ಲಿ ಪ್ರತಿ ವರ್ಷ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಬಾರಿ ಸೆಪ್ಟೆಂಬರ್ 28ರಂದು ಗಣೇಶ ವಿಸರ್ಜನೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.. ಅದೇ ದಿನ ಈದ್ ಮಿಲಾದ್ ಮೆರವಣಿಗೆಯೂ ಫಿಕ್ಸ್ ಆಗಿತ್ತು.. ಎರಡೂ ಒಂದೇ ದಿನ ಇದ್ದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿತ್ತು.‌ ಆದ್ರೆ, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 28ರ ಬದಲು ಅಕ್ಟೋಬರ್ 1ರಂದು ನಡೆಸಲು ತೀರ್ಮಾನ ಕೈಗೊಳ್ಳಲಾಯ್ತು.

ಮಲೆನಾಡ ಹೆಬ್ಬಾಗಿಲಿನಲ್ಲೂ ಗಲಾಟೆ

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲೂ ಇದೇ ಸಮಸ್ಯೆ ತಲೆದೋರಿದೆ.. ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸೆಪ್ಟೆಂಬರ್ 28ರಂದೇ ನಡೆಯಲಿದೆ.. ಇದು ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ತಲೆಬಿಸಿ ತಂದಿಟ್ಟಿದೆ.. ಹೇಳಿ ಕೇಳಿ.. ಶಿವಮೊಗ್ಗ ಕೋಮು ಸೂಕ್ಷ್ಮ ಪ್ರದೇಶ. ಒಂದೇ ದಿನ ಎರಡೆರಡು ಆಚರಣೆ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆ.ಸದ್ಯ ಸಂಧಾನ ಸಭೆ ನಡೆಯುತ್ತಿದ್ದು, ಚಂದ್ರನ ದರ್ಶನವಾದ ಬಳಿಕ ಹಬ್ಬದ ದಿನ ನಿರ್ಧಾರವಾಗುತ್ತೆ.

ಕರ್ನಾಟಕದ ಹಲವೆಡೆ ವಿಘ್ನೇಶ್ವರನ ಆರಾಧನೆಗೆ ವಿಘ್ನ

ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಕೊಪ್ಪಳ(ಗಂಗಾವತಿ), ಚಿತ್ರದುರ್ಗ ಸೇರಿದಂತೆ ಕರ್ನಾಟಕದ ಹಲವೆಡೆ ಈ ಹಿಂದೆ ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಕೋಮು ಸಂಘರ್ಷಗಳು ನಡೆದ ಉದಾಹರಣೆಗಳಿವೆ. ಈಗಲೂ ಸಹ ಕೆಲವೆಡೆ ಗಣೇಶನ ಗಲಾಟೆಗಳು ನಡೆಯುತ್ತಲೇ ಇವೆ. ಹೀಗಾಗಿ ಈ ಬಾರಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಗೃಹ ಇಲಾಖೆ ಮುನ್ನೆಚ್ಚರಿಕೆ ಕೈಗೊಂಡಿದ್ದು, ಹಲವೆಡೆ ಹಿಂದೂ -ಮುಸ್ಲಿಂ ಮುಖಂಡರ ಸಭೆ ನಡೆಸುತ್ತಿದ್ದಾರೆ. ಅಲ್ಲದೇ ಗಣಪತಿ ಪ್ರತಿಷ್ಠಾಪಿಸುವ ಸಂಘ-ಸಂಸ್ಥೆಗಳು, ಮಂಡಳಿಗಳಿಗೂ ಸಹ ಆಯಾ ಪೊಲೀಸ್ ಠಾಣೆಗಳಿಂದ ಕೆಲ ಸಲಹೆ ಸೂಚನೆಗಳನ್ನು ಹೊರಡಿಸಲಾಗಿದೆ. ಇಂತಿಷ್ಟು ದಿನಗಳು ಮಾತ್ರ(5, 9, 11 ದಿನಗಳು) ಗಣೇಶನ ಕೂಡಿಸುವ ಷರತ್ತುಗಳನ್ನು ಹಾಕಲಾಗಿದೆ.

ಇತ್ತ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಸರ್ಕಾರಿ ರಜೆಯ ಬಗ್ಗೆ ಗೊಂದಲ ಮುಂದುವರಿದಿದೆ. ಸೆಪ್ಟೆಂಬರ್ 19ರಂದು ಗಣೇಶ ಚತುರ್ಥಿ ಘಳಿಗೆ ಬಂದರೆ, ರಾಜ್ಯ ಸರ್ಕಾರ ಮಾತ್ರ ಸೆಪ್ಟೆಂಬರ್ 18ರಂದು ರಜೆ ಘೋಷಿಸಿದೆ. ಗಣೇಶ ಚತುರ್ಥಿಗೆ 18ರ ಬದಲು 19ರಂದು ಸರ್ಕಾರಿ ರಜೆ ಘೋಷಣೆ ಮಾಡುವಂತೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಏನೇ ಹೇಳಿ ಗಣೇಶೋತ್ಸವಕ್ಕೆ ಸಂಕಷ್ಟ ಎದುರಾಗಿದೆ. ಈ ವಿಘ್ನಗಳು ಅದ್ಹೇಗೆ ದೂರಾಗಿ ನಿರ್ವಿಘ್ನವಾಗಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡುತ್ತೆ ಕಾದು ನೋಡಬೇಕಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago