ಚಲನಚಿತ್ರ

ಸೈಮಾ ಅವಾರ್ಡ್ 2023: ​ ಈ ಬಾರಿ ಯಾರಿಗೆಲ್ಲ ಒಲಿದಿದೆ ಪ್ರಶಸ್ತಿ?

ದುಬೈನ ವರ್ಲ್ಡ್​ ಟ್ರೇಡ್​ ಸೆಂಟರ್​ನಲ್ಲಿ ಸೆಪ್ಟೆಂಬರ್​ 15ರ ರಾತ್ರಿ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಅನೇಕ ತಾರೆಯರು ಭಾಗಿ ಆಗಿದ್ದಾರೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು, ತಂತ್ರಜ್ಞರು ಸೈಮಾ ಪ್ರಶಸ್ತಿ ಪಡೆದು ಬೀಗಿದ್ದಾರೆ. ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾಗೆ ‘ಅತ್ತುತ್ತಮ ಚಿತ್ರ’ ಪ್ರಶಸ್ತಿ ಸಿಕ್ಕಿದೆ. ರಿಷಬ್​ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದಲ್ಲಿನ ಅಭಿನಯಕ್ಕೆ ‘ಅತ್ಯುತ್ತಮ ನಟ’ (ಕ್ರಿಟಿಕ್ಸ್​) ಅವಾರ್ಡ್​ ಪಡೆದಿದ್ದಾರೆ. ಅದೇ ಸಿನಿಮಾದಲ್ಲಿ ನಟಿಸಿದ ಅಚ್ಯುತ್​ ಕುಮಾರ್​ ಅವರು ‘ಅತ್ಯುತ್ತಮ ಖಳನಟ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿನ ಅಭಿನಯಕ್ಕೆ ಯಶ್​ ‘ಅತ್ಯುತ್ತಮ ನಟ’ ಹಾಗೂ ಶ್ರೀನಿಧಿ ಶೆಟ್ಟಿ ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಸಿಕ್ಕಿದೆ.

Advertisement
Advertisement
Advertisement

ಗಾಳಿಪಟ 2’ ಸಿನಿಮಾದಲ್ಲಿನ ನಟನೆಗೆ ದಿಗಂತ್​ ಅವರು ‘ಅತ್ಯುತ್ತಮ ಪೋಷಕ ನಟ’ ಸೈಮಾ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಕಾಶ್​ ತುಮ್ಮಿನಾಡು ಅವರಿಗೆ ‘ಕಾಂತಾರ’ ಚಿತ್ರಕ್ಕಾಗಿ ಅತ್ಯುತ್ತಮ ಹಾಸ್ಯನಟ ಪ್ರಶಸ್ತಿ ಸಿಕ್ಕಿದೆ. ‘ಡೊಳ್ಳು’ ಚಿತ್ರದ ಡೈರೆಕ್ಟರ್​ ಸಾಗರ್​ ಪುರಾಣಿಕ್​ ಅವರು ‘ಅತ್ಯುತ್ತಮ ಚೊಚ್ಚಲ ನಿರ್ದೇಶಕ’ ಪ್ರಶಸ್ತಿ ಪಡೆದಿದ್ದಾರೆ. ‘ಕಾಂತಾರ’ ಸಿನಿಮಾಗಾಗಿ ಅಜನೀಶ್​ ಬಿ. ಲೋಕನಾಥ್​ ಅವರು ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ಸ್ವೀಕರಿಸಿದ್ದಾರೆ. ಈ ಸಿನಿಮಾದ ‘ಸಿಂಗಾರ ಸಿರಿಯೇ..’ ಹಾಡಿಗಾಗಿ ವಿಜಯ್​ ಪ್ರಕಾಶ್​ ಅವರು ಅತ್ಯುತ್ತಮ ಗಾಯಕ ಹಾಗೂ ಪ್ರಮೋದ್​ ಮರವಂತೆ ಅವರು ಅತ್ಯುತ್ತಮ ಗೀತಸಾಹಿತಿ ಅವಾರ್ಡ್​ ಪಡೆದಿದ್ದಾರೆ

ಅತ್ಯುತ್ತಮ ನಟ: ಯಶ್​ (ಕೆಜಿಎಫ್​: ಚಾಪ್ಟರ್​ 2) ಅತ್ಯುತ್ತಮ ನಟಿ: ಶ್ರೀನಿಧಿ ಶೆಟ್ಟಿ (ಕೆಜಿಎಫ್​: ಚಾಪ್ಟರ್​ 2) ಅತ್ಯುತ್ತಮ ನಟ (ಕ್ರಿಟಿಕ್ಸ್​): ರಿಷಬ್​ ಶೆಟ್ಟಿ (ಕಾಂತಾರ) ಅತ್ಯುತ್ತಮ ಸಿನಿಮಾ: 777 ಚಾರ್ಲಿ (ನಿರ್ದೇಶನ- ಕಿರಣ್​ ರಾಜ್​) ಅತ್ಯುತ್ತಮ ಸಂಗೀತ: ಅಜನೀಶ್​ ಬಿ. ಲೋಕನಾಥ್​ (ಕಾಂತಾರ) ಅತ್ಯುತ್ತಮ ಹಾಸ್ಯನಟ: ಪ್ರಕಾಶ್​ ತುಮ್ಮಿನಾಡು (ಕಾಂತಾರ) ಅತ್ಯುತ್ತಮ ಗಾಯಕ: ವಿಜಯ್​ ಪ್ರಕಾಶ್​ (ಸಿಂಗಾರ ಸಿರಿಯೇ) ಅತ್ಯುತ್ತಮ ಪೋಷಕ ನಟ: ದಿಗಂತ್​ ಮಂಚಾಲೆ (ಗಾಳಿಪಟ 2) ಅತ್ಯುತ್ತಮ ಖಳನಟ: ಅಚ್ಯುತ್​ ಕುಮಾರ್​ (ಕಾಂತಾರ)

ಅತ್ಯುತ್ತಮ ಗಾಯಕಿ: ಸುನಿಧಿ ಚೌಹಾಣ್​ (ರಾರಾ ರಕ್ಕಮ್ಮ) ಅತ್ಯುತ್ತಮ ಹೊಸ ನಟ: ಪೃಥ್ವಿ ಶ್ಯಾಮನೂರು (ಪದವಿ ಪೂರ್ವ) ಅತ್ಯುತ್ತಮ ಛಾಯಾಗ್ರಹಣ: ಭುವನ್​ ಗೌಡ (ಕೆಜಿಎಫ್​ 2) ಅತ್ಯುತ್ತಮ ನಟಿ (ಕ್ರಿಟಿಕ್ಸ್​): ಸಪ್ತಮಿ ಗೌಡ (ಕಾಂತಾರ)

ಅತ್ಯುತ್ತಮ ನಟ (ವಿಶೇಷ ಮೆಚ್ಚುಗೆ ಪ್ರಶಸ್ತಿ): ರಕ್ಷಿತ್​ ಶೆಟ್ಟಿ (777 ಚಾರ್ಲಿ) ಅತ್ಯುತ್ತಮ ಹೊಸ ನಟಿ: ನೀತಾ ಅಶೋಕ್​ (ವಿಕ್ರಾಂತ್​ ರೋಣ) ಅತ್ಯುತ್ತಮ ಹೊಸ ನಿರ್ಮಾಣ: ಅಪೇಕ್ಷಾ ಪುರೋಹಿತ್​, ಪವನ್​ ಒಡೆಯರ್​ (ಡೊಳ್ಳು) ಅತ್ಯುತ್ತಮ ಪೋಷಕ ನಟಿ: ಶುಭಾ ರಕ್ಷಾ (ಹೋಮ್​ ಮಿನಿಸ್ಟರ್​)

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago