ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನ ಗುಡ್ಡಗಾಡು ಪ್ರದೇಶದಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರಲ್ಲಿ ಮೂವರು ಉಗ್ರರನ್ನು ಇಂದು (ಸೆ.16) ಭಾರತೀಯ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು. ನಂತರ ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಮುಂಚೂಣಿ ಪ್ರದೇಶದಲ್ಲಿ ಭಯೋತ್ಪಾದಕರು, ಸೇನೆ ನಡುವೆ ಎನ್ಕೌಂಟರ್ ಪ್ರಾರಂಭವಾಯಿತು. ಇದೀಗ ಈ ಗುಂಡಿನ ಕಾಳಗದಲ್ಲಿ ಮತ್ತೆ ಮೂರು ಉಗ್ರರ ಹತ್ಯೆಯಾಗಿದೆ ಎಂದು ಹೇಳಲಾಗಿದೆ.
ಈ ಕಾರ್ಯಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ ಸಾಥ್ ನೀಡಿದ್ದಾರೆ. ಈ ಬಗ್ಗೆ ಎಕ್ಸ್ (ಹಿಂದಿನ ಟ್ವಿಟರ್) ನಲ್ಲೂ ಪೋಸ್ಟ್ ಮಾಡಲಾಗಿತ್ತು. ಇನ್ನು ಈ ಕಾರ್ಯಚಾರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಭಯೋತ್ಪಾದಕರ ಪತ್ತೆಗೆ ಡ್ರೋನ್ಗಳನ್ನು ಕೂಡ ಬಳಸಲಾಗುತ್ತಿದೆ.
ಅನಂತನಾಗ್ನಲ್ಲಿ ಮೂರು ದಿನಗಳಿಂದ ಕಾರ್ಯಚರಣೆ ನಡೆಯುತ್ತಿದ್ದು, ಗುಂಡಿನ ದಾಳಿಯಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಕಾಳಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕೊಕರ್ನಾಗ್ನ ಗಡೋಲ್ನ ಅರಣ್ಯ ಪ್ರದೇಶದಲ್ಲಿ ಸೇರಿದಂತೆ ಅನೇಕ ಕಡೆ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಸೇನೆ ತಿಳಿಸಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…