ಮಂಗಳೂರು (ಸೆ.16): ದೇಶದಾದ್ಯಂತ ಸಂಭ್ರಮ ಸಡಗರದಿಂದ ವಿಘ್ನ ನಿವಾರಕ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೆ.18ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಣೆಮಾಡಿದೆ. ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸ್ಥಳೀಯ ಪರಿಸ್ಥಿತಿಗಳ ಅನುಸಾರ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಈ ಜಿಲ್ಲೆಗಳಲ್ಲಿ ಸೆ.18ರ ಬದಲಾಗಿ ಸೆ.19ರ ಮಂಗಳವಾರ ಗಣೇಶ ಹಬ್ಬದ ರಜೆಯನ್ನು ಘೋಷಣೆ ಮಾಡಲಾಗಿದೆ.