ಕ್ರೈಮ್

ಚುನಾವಣಾ ಪ್ರಚಾರಕ್ಕಾಗಿ ಮಧ್ಯಪ್ರದೇಶದದಲ್ಲಿ AI ದುರ್ಬಳಕೆ; ಇಬ್ಬರು ನಾಯಕರ ಬೈಗುಳದ ಆಡಿಯೊ ವೈರಲ್

ಭೋಪಾಲ್, ಸೆಪ್ಟೆಂಬರ್ 16: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರದ ನಡುವೆಯೇ ಕೃತಕ ಬುದ್ಧಿಮತ್ತೆಯ ದುರ್ಬಳಕೆ ಪ್ರಕರಣ ಬೆಳಕಿಗೆ ಬಂದಿದೆ. ಜಬಲ್‌ಪುರದಲ್ಲಿ ಇತ್ತೀಚಿನ ಪ್ರಕರಣ ಬೆಳಕಿಗೆ ಬಂದಿದ್ದು, ಶಾಸಕ ಮತ್ತು ಮಾಜಿ ರಾಜ್ಯ ಸಚಿವರ ಬೈಗುಳ ಆಡಿಯೊವನ್ನು AI ಬಳಸಿ ಕ್ಲೋನ್ ಮಾಡಿ ವ್ಯಾಪಕವಾಗಿ ಪ್ರಸಾರ ಮಾಡಲಾಗಿದೆ.

Advertisement
Advertisement
Advertisement

ಆಡಿಯೊದಲ್ಲಿ, ಇಬ್ಬರು ನಾಯಕರು ಫೋನ್‌ನಲ್ಲಿ ಕಾರ್ಯಕರ್ತನೊಂದಿಗೆ ಮಾತನಾಡುವಾಗ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ. ಆಡಿಯೋ ವೈರಲ್ ಆದ ನಂತರ ವಿಷಯ ಪೊಲೀಸರಿಗೆ ತಲುಪಿತ್ತು. ಈ ಆಡಿಯೊ ಬಗ್ಗೆ ತನಿಖೆಗೆ ನಡೆಸಬೇಕು ಎಂದು ಇಬ್ಬರು ನಾಯಕರು ಒತ್ತಾಯಿಸಿದ್ದಾರೆ. ಆದಾಗ್ಯೂ, ವೈರಲ್ ಆಗುತ್ತಿರುವ ಆಡಿಯೊದಲ್ಲಿ ಮಾತನಾಡುತ್ತಿರುವ ಮಾತುಗಳು ಮತ್ತು ಸಾಲುಗಳು ಬಹುತೇಕ ಒಂದೇ ಆಗಿದ್ದು, ಧ್ವನಿಯಲ್ಲಿ ವ್ಯತ್ಯಾಸವಿದೆ.

ಕಾಂಗ್ರೆಸ್ ಶಾಸಕ ವಿನಯ್ ಸಕ್ಸೇನಾ ಮತ್ತು ಉತ್ತರ ಮಧ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಶರದ್ ಜೈನ್ ಅವರ ದನಿಯಲ್ಲಿರುವ ಆಡಿಯೊ ವೈರಲ್ ಆಗಿದೆ ಎರಡೂ ಆಡಿಯೊ ಕ್ಲಿಪ್‌ಗಳನ್ನು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪಕ್ಷದ ನಾಯಕರು ಮತ್ತು ಸಚಿವರು ಪಕ್ಷದ ಕಾರ್ಯಕರ್ತರೊಂದಿಗೆ ಹೇಗೆ ಮತ್ತು ಯಾವ ಸ್ವರದಲ್ಲಿ ಮಾತನಾಡುತ್ತಾರೆ ಎಂಬುದನ್ನು ಕೇಳಿ ಎಂಬ ಬರಹದೊಂದಿದೆ ಈ ಆಡಿಯೊವನ್ನು ಹಂಚಿಕೊಳ್ಳಲಾಗಿದೆ.

ಇದು ನಮ್ಮ ದನಿಯಲ್ಲ ಎಂದ ನಾಯಕರು

ವೈರಲ್ ಆದ ಆಡಿಯೊ ಕ್ಲಿಪ್‌ನಲ್ಲಿರುವುದು ನನ್ನ ಧ್ವನಿಯಲ್ಲ ಎಂದು ಕಾಂಗ್ರೆಸ್ ಶಾಸಕ ವಿನಯ್ ಸಕ್ಸೇನಾ ಹೇಳಿದ್ದಾರೆ. ಇದು ಮಾನಹಾನಿ ಮಾಡುವ ಪ್ರಯತ್ನ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಕೃತ್ಯ ಎಸಗಿದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಸಕ್ಸೇನಾ ಒತ್ತಾಯಿಸಿದ್ದಾರೆ.

ಮತ್ತೊಂದೆಡೆ ರಾಜ್ಯ ಸಚಿವ ಶರದ್ ಜೈನ್ ಕೂಡ ಆಡಿಯೊದಲ್ಲಿರುವ ದನಿ ನನ್ನದಲ್ಲ. ಇದು ರಾಜಕೀಯ ಪೈಪೋಟಿ ಈ ಬಗ್ಗೆ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago