ಕ್ರೀಡಾ ಸುದ್ದಿ

ಏಷ್ಯಾ ಕಪ್ ಕಿರೀಟಕ್ಕೆ ಭಾರತ vs ಲಂಕಾ ಫೈಟ್..!

ಕೊಲಂಬೊ(ಸೆ.17): ಈ ಬಾರಿ ಏಷ್ಯಾದ ಕ್ರಿಕೆಟ್‌ ಅಧಿಪತಿ ಯಾರಾಗಲಿದ್ದಾರೆ ಎಂಬ ಕ್ರೀಡಾಭಿಮಾನಿಗಳ ಕುತೂಹಲಕ್ಕೆ ತೆರೆ ಬೀಳುವ ಸಮಯ ಬಂದಿದೆ. ಭಾನುವಾರ 16ನೇ ಆವೃತ್ತಿ ಏಷ್ಯಾಕಪ್‌ ಏಕದಿನ ಕ್ರಿಕೆಟ್‌ ಟೂರ್ನಿಯ ಫೈನಲ್‌ ನಡೆಯಲಿದ್ದು, ಭಾರತ ಹಾಗೂ ಶ್ರೀಲಂಕಾ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.

Advertisement
Advertisement
Advertisement

ಏಷ್ಯಾಕಪ್‌ನಲ್ಲಿ ಈವರೆಗೆ ಟೀಂ ಇಂಡಿಯಾ ಹೆಚ್ಚಿನ ಯಶಸ್ಸು ಸಾಧಿಸಿದ್ದು, 7 ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅತ್ತ ಟೂರ್ನಿಯಲ್ಲಿ ಭಾರತದ ಪ್ರಬಲ ಎದುರಾಳಿಯಾಗಿರುವ ಶ್ರೀಲಂಕಾ 6 ಬಾರಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಆದರೆ ಕಳೆದ 5 ವರ್ಷಗಳಲ್ಲಿ ಐಸಿಸಿ ಜೊತೆ ಏಷ್ಯಾಕಪ್‌ ಪ್ರಶಸ್ತಿಗೂ ಬರ ಎದುರಿಸುತ್ತಿರುವ ಭಾರತ ಈ ಬಾರಿ ಅದನ್ನು ನೀಗಿಸಲು ಎದುರು ನೋಡುತ್ತಿದೆ. ಹಾಲಿ ಚಾಂಪಿಯನ್‌ ಲಂಕಾ ತವರಿನಲ್ಲಿ ಪ್ರಶಸ್ತಿ ತನ್ನಲ್ಲೇ ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.

ಕುಗ್ಗಿದ ಆತ್ಮವಿಶ್ವಾಸ:

ಸೂಪರ್‌-4 ಹಂತದ ಕೊನೆ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಸೋಲನುಭವಿಸಿದ್ದು, ಫೈನಲ್‌ ಪಂದ್ಯಕ್ಕೂ ಮುನ್ನ ತಂಡದ ಆತ್ಮವಿಶ್ವಾಸ ಕುಗ್ಗಿಸಿದ್ದು ಸುಳ್ಳಲ್ಲ. ಕಳೆದೆರಡೂ ಪಂದ್ಯಗಳಲ್ಲಿ ಭಾರತ ಬ್ಯಾಟಿಂಗ್‌ನಲ್ಲಿ ನೀರಸ ಪ್ರದರ್ಶನ ತೋರಿದೆ. ಲಂಕಾ ವಿರುದ್ಧವೇ ತಂಡ 213ಕ್ಕೆ ಆಲೌಟಾಗಿದ್ದನ್ನು ಮರೆಯುವಂತಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಬ್ಯಾಟರ್‌ಗಳು ಲಂಕಾ ಸ್ಪಿನ್ನರ್‌ಗಳ ಮುಂದೆ ಜವಾಬ್ದಾರಿ ಅರಿತು ಆಡಬೇಕಿದೆ. ರೋಹಿತ್‌, ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ ಮೇಲೆ ಹೆಚ್ಚಿನ ನಿರೀಕ್ಷೆ ಇದ್ದು, ಕೆ.ಎಲ್‌.ರಾಹುಲ್‌, ಇಶಾನ್‌ ಕಿಶನ್‌ ನಿರ್ಣಾಯಕ ಪಂದ್ಯದಲ್ಲಿ ಅಬ್ಬರಿಸುವ ಅನಿವಾರ್ಯತೆ ಇದೆ. ಹಾರ್ದಿಕ್‌ ಜೊತೆ ರವೀಂದ್ರ ಜಡೇಜಾ, ಶಾರ್ದೂಲ್‌ ಆಲ್ರೌಂಡ್‌ ಬ್ಯಾಟಿಂಗ್‌ನಲ್ಲಿ ಮಿಂಚದಿದ್ದರೆ ಗೆಲುವು ಕಷ್ಟಸಾಧ್ಯ. ಇನ್ನು, ಬೌಲಿಂಗ್‌ ವಿಭಾಗದಲ್ಲಿ ಕುಲ್ದೀಪ್‌ ಯಾದವ್‌ ಟ್ರಂಪ್‌ ಕಾರ್ಡ್‌ ಎನಿಸಿಕೊಂಡಿದ್ದು, ಬೂಮ್ರಾ, ಸಿರಾಜ್‌ ಮೇಲೆ ಲಂಕಾ ಬ್ಯಾಟರ್‌ಗಳನ್ನು ಕಟ್ಟಿಹಾಕಬೇಕಾದ ಜವಾಬ್ದಾರಿಯಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago