ದೇಶ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ, ರಾಷ್ಟ್ರಪತಿ ಮುರ್ಮು ಹಾಗೂ ಕೇಂದ್ರ ಸಚಿವರಿಂದ ಶುಭಾಶಯ

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ 73ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರು ಶುಭಾಶಯ ಕೋರಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಜತೆಗೆ ಇಂದು ವಿಶ್ವಕರ್ಮ ಜಯಂತಿ ಕೂಡ, ಪ್ರಧಾನಿ ವಿಶ್ವಕರ್ಮ ಯೋಜನೆಗೆ ಇಂದು ಚಾಲನೆ ಸಿಗಲಿದೆ.

Advertisement
Advertisement
Advertisement

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ಮುರ್ಮು ಶುಭಾಶಯ

ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ, ದೃಢಸಂಕಲ್ಪ, ದೃಢವಾದ ನಾಯಕತ್ವದಿಂದ ಅಮೃತಕಾಲದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡಲಿ ಎಂಬುದು ನನ್ನ ಶುಭ ಹಾರೈಕೆ ನೀವು ಯಾವಾಗಲೂ ಆರೋಗ್ಯವಾಗಿ, ಸಂತೋಷವಾಗಿರಲೆಂದು ಹಾರೈಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾರಿಂದ ಶುಭಾಶಯ

ದಣಿವರಿಯದ ವ್ಯಕ್ತಿ, ನಿಸ್ವಾರ್ಥ ಸೇವೆಯ ಮೂಲಕ ಕೋಟ್ಯಂತರ ಜನರ ಜೀವನದಲ್ಲಿ ಸಮೃದ್ಧಿ ಹಾಗೂ ವಿಶ್ವಾಸವನ್ನು ತಂದ ದೇಶದ ಜನಪ್ರಿಯ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಎಂದು ಟ್ವಿಟರ್ ನಲ್ಲಿ ಶಾ ಶುಭಾಶಯ ಕೋರಿದ್ದಾರೆ.

ಸಚಿವ ರಾಜ್​ನಾಥ್ ಸಿಂಗ್ ಅಭಿನಂದನೆ

ಭಾರತದ ಯಶಸ್ವಿ ಮತ್ತು ಕಟ್ಟಪಟ್ಟು ದುಡಿಯುವ ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯಗಳು, ಮೋದಿಯವರು ಭಾರತಕ್ಕೆ ಹೊಸ ಗುರುತನ್ನು ನೀಡಿದ್ದು, ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಅದರ ಘನತೆಯನ್ನು ಹೆಚ್ಚಿಸಿದ್ದಾರೆ ಎಂದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರಿಂದ ಶುಭಾಶಯ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪ್ರಧಾನಿ ಮೋದಿಗೆ ಶುಭಾಶಯ ಕೋರಿದ್ದಾರೆ, ವಿಶ್ವದ ಜನಪ್ರಿಯ ನಾಯಕ ಮೋದಿ, ನೀವು ಭಾರತೀಯ ಸಂಸ್ಕೃತಿಯ ಜಾಗತಿಕ ಪ್ರತಿಷ್ಠೆ, ಜನರ ಬಹು ಆಯಾಮದ ಅಭಿವೃದ್ಧಿ ಮತ್ತು ರಾಷ್ಟ್ರದ ಸಾರ್ವತ್ರಿಕ ಪ್ರಗತಿಗೆ ಒಳ್ಳೆಯ ರೂಪವನ್ನು ನೀಡಿದ್ದೀರಿ ಎಂದಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago