ತಂತ್ರಜ್ಞಾನ

ಬಿಡುಗಡೆಗೆ ಸಿದ್ಧವಾದ ಶವೋಮಿ ಕಂಪನಿಯ ಅತ್ಯಂತ ದುಬಾರಿ ಸ್ಮಾರ್ಟ್​ಫೋನ್

ಈ ವರ್ಷದ ಫೆಬ್ರವರಿಯಲ್ಲಿ ಚೀನಾ ಮೂಲದ ಪ್ರಸಿದ್ಧ ಶವೋಮಿ ಕಂಪನಿ ಶವೋಮಿ 13 ಪ್ರೊ ಸ್ಮಾರ್ಟ್​ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿತು. ಇಲ್ಲಿಯವರೆಗೆ ಭಾರತದಲ್ಲಿ ಶವೋಮಿ ಪರಿಚಯಿಸಿದ ಅತ್ಯಂತ ದುಬಾರಿ ಫೋನ್ ಇದಾಗಿದೆ. ಪ್ರಮುಖ ಫೋನ್ ವಿಮರ್ಶಕರು ಮತ್ತು ಬಳಕೆದಾರರಿಂದ ಈ ಫೋನಿಗೆ ಉತ್ತಮ ವಿಮರ್ಶೆಗಳು ಕೇಳಿ ಬಂದಿದ್ದವು. ಈಗ, ಶವೋಮಿ ಸಂಸ್ಥೆ ತನ್ನ ಮುಂದಿನ ವರ್ಷನ್ ಶವೋಮಿ 14 ಸರಣಿಯ (Xiaomi 14 Series) ಜಾಗತಿಕ ಬಿಡುಗಡೆಗೆ ಸಜ್ಜಾಗಿದೆ. ಈ ಫೋನಿಗಳ ಬೆಲೆ ಕೂಡ ಅತ್ಯಂತ ದುಬಾರಿ ಆಗಿರಲಿದೆ.

Advertisement
Advertisement
Advertisement

ಶವೋಮಿ 14 ಸರಣಿ ಅಡಿಯಲ್ಲಿ ಶವೋಮಿ 14 ಮತ್ತು ಶವೋಮಿ 14 ಪ್ರೊ ಎಂಬ ಎರಡು ಮಾದರಿಗಳನ್ನು ಒಳಗೊಂಡಿರುತ್ತದೆ. ನಿಖರವಾದ ಬಿಡುಗಡೆ ದಿನಾಂಕ ಇನ್ನೂ ತಿಳಿದಿಲ್ಲವಾದರೂ, ನವೆಂಬರ್ 11 ರ ಮೊದಲು ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದು ಚೀನಾದಲ್ಲಿ ಒಂದು ಪ್ರಮುಖ ದಿನಾಂಕವಾಗಿದ್ದು, ಡಬಲ್ ಇಲೆವೆನ್ ಮಾರಾಟದ ಈವೆಂಟ್ ನಡೆಯುವ ಸಮಯವಾಗಿದೆ. ನವೆಂಬರ್ 11 ಅನ್ನು ಚೀನಾದಲ್ಲಿ ಸಿಂಗಲ್ಸ್ ಡೇ ಎಂದೂ ಕರೆಯಲಾಗುತ್ತದೆ. ಆ ಸಂದರ್ಭ ಜನಪ್ರಿಯ ಶಾಪಿಂಗ್ ಸೀಸನ್ ಆಗಿದೆ. ಹೀಗಾಗಿ ನ. 11 ರಂದು ಅನಾವರಣಗೊಳ್ಳಲಿದೆಯಂತೆ.

ಶವೋಮಿ 14 6.4-ಇಂಚಿನ ಡಿಸ್ ಪ್ಲೇಯನ್ನು ಹೊಂದಿದೆ ಎಂದು ವರದಿಯಾಗಿದೆ. ಅಂತೆಯೆ ಶವೋಮಿ 14 Pro ದೊಡ್ಡದಾದ, 6.7-ಇಂಚಿನ ಡಿಸ್ ಪ್ಲೇ ಹೊಂದಿರುತ್ತದೆ. ಎರಡೂ ಫೋನ್‌ಗಳು 522 ppi ಜೊತೆಗೆ 1440 x 3200 ಪಿಕ್ಸೆಲ್‌ಗಳ ರೆಸಲ್ಯೂಶನ್​ನಿಂದ ಕೂಡಿದೆ. ಈ ಫೋನ್‌ಗಳು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಮತ್ತು ಪಂಚ್-ಹೋಲ್ ನಾಚ್ ವಿನ್ಯಾಸದೊಂದಿಗೆ ಬರುತ್ತವೆ. ಶವೋಮಿ ಆಂಡ್ರಾಯ್ಡ್ 14 ಅನ್ನು ಆಧರಿಸಿದ MIUI 15 ಅನ್ನು ಪರೀಕ್ಷಿಸುತ್ತಿದೆ. ಇದರ ಜೊತೆಗೆ, ಎರಡೂ ಫೋನ್‌ಗಳು ಇನ್ನೂ ಲಾಂಚ್ ಆಗದ ಕ್ವಾಲ್ಕಂನ ಸ್ನಾಪ್‌ಡ್ರಾಗನ್ 8 Gen 3 ಚಿಪ್‌ಸೆಟ್‌ನಿಂದ ಚಾಲಿತವಾಗುವ ನಿರೀಕ್ಷೆಯಿದೆ.

ಶವೋಮಿ 14 4860 mAh ಬ್ಯಾಟರಿಯನ್ನು ಹೊಂದಿದೆ ಮತ್ತು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಬಹುದು. OIS ನೊಂದಿಗೆ ಮೂರು 50-ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾಗಳೊಂದಿಗೆ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಬಹುದು. ಈ ಫೋನ್‌ನ ಬೆಲೆ 54,999 ರೂ. ಇರಬಹುದು ಎನ್ನಲಾಗಿದೆ.

ಶವೋಮಿ 14 Pro ಗೆ ಬಂದರೆ, ಈ ಫೋನ್ 120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAh ಬ್ಯಾಟರಿಯೊಂದಿಗೆ ಬರಬಹುದು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago