ಕ್ರೀಡಾ ಸುದ್ದಿ

ಏಷ್ಯಾಕಪ್‌ ಫೈನಲ್‌ : 6 ವಿಕೆಟ್‌ ಕಿತ್ತು ಹಲವು ದಾಖಲೆ ಬರೆದ ಮೊಹಮ್ಮದ್ ಸಿರಾಜ್‌‌

ಕೊಲಂಬೊ: ಟೀಂ ಇಂಡಿಯಾದ ಸ್ಟಾರ್‌ ವೇಗಿ ಮೊಹಮ್ಮದ್ ಸಿರಾಜ್‌‌ 2023ರ ಏಷ್ಯಾಕಪ್‌ ಫೈನಲ್‌ ಪಂದ್ಯದಲ್ಲಿ ಪ್ರಚಂಡ ಬೌಲಿಂಗ್‌ ಪ್ರದರ್ಶನ ತೋರಿದ್ದಾರೆ. ಶ್ರೀಲಂಕಾ ವಿರುದ್ಧ 7 ಓವರ್‌ಗಳಲ್ಲಿ 21 ರನ್‌ ಬಿಟ್ಟುಕೊಟ್ಟು ಒಟ್ಟು 6 ವಿಕೆಟ್‌ ಪಡೆಯುವ ಮೂಲಕ ಹಲವು ದಾಖಲೆಗಳನ್ನ ನಿರ್ಮಿಸಿದ್ದಾರೆ.

Advertisement
Advertisement
Advertisement

ಹೈದರಾಬಾದ್ ಮೂಲದ 29 ವರ್ಷದ ಬಲಗೈ ವೇಗಿ ಸಿರಾಜ್‌, ಏಷ್ಯಾ ಕಪ್ 2023 ಟೂರ್ನಿಯಲ್ಲಿ ತಮ್ಮ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನ ವೃತ್ತಿಬದುಕಿನ ಶ್ರೇಷ್ಠ ಬೌಲಿಂಗ್‌ ಪ್ರದರ್ಶನ ನೀಡಿದ್ದಾರೆ. 7 ಓವರ್‌ಗಳಲ್ಲಿ ಒಂದು ಮೇಡಿನ್‌ ಒಳಗೊಂಡಂತೆ 21 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಪಡೆದು ಅಬ್ಬರಿಸಿದ್ದಾರೆ. ಪರಿಣಾಮ ಶ್ರೀಲಂಕಾ ತಂಡ 50 ರನ್‌ಗಳ ಅಲ್ಪ ಮೊತ್ತಕ್ಕೆ ಆಲ್‌ಔಟ್‌ ಆಯಿತು.

ಇದೇ ಟೂರ್ನಿಯಲ್ಲಿ ಸಿರಾಜ್‌ ಭಾರತದ ಪರ ಅತಿ ವೇಗವಾಗಿ 5 ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ. ಇದು ಸಿರಾಜ್ ಏಕದಿನ ಕ್ರಿಕೆಟ್‌ ವೃತ್ತಿಬದುಕಿನ ಮೊದಲ ಸಾಧನೆಯೂ ಆಗಿದೆ. 1993ರ ಸಿಎಬಿ ಜುಬ್ಲೀ ಟೂರ್ನಿಯ ಫೈನಲ್‌ನಲ್ಲಿ ವೆಸ್ಟ್‌ ಇಂಡೀಸ್‌ ಎದುರು ಅನಿಲ್ ಕುಂಬ್ಳೆ ವೇಗವಾಗಿ 6 ವಿಕೆಟ್‌ ಪಡೆದಿದ್ದು, ಈ ಹಿಂದಿನ ಸಾಧನೆ ಆಗಿತ್ತು. ಇದರೊಂದಿಗೆ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಅತ್ಯಂತ ಕಡಿಮೆ ಪಂದ್ಯಗಳಲ್ಲಿ ಭಾರತದ ಪರ 50 ವಿಕೆಟ್‌ ಪಡೆದ 4ನೇ ಬೌಲರ್‌ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.

ಅಷ್ಟೇ ಅಲ್ಲದೇ ಭಾರತದ ಪರ ಮೊದಲ 10 ಓವರ್‌ಗಳಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ವಿಶೇಷ ಸಾಧನೆ ಮಾಡಿದ್ದಾರೆ. ಜೊತೆಗೆ 2003ರ ವಿಶ್ವಕಪ್‌ ಟೂರ್ನಿಯಲ್ಲಿ ಬಾಂಗ್ಲಾದೇಶದ ವಿರುದ್ಧ 16 ಎಸೆತಗಳಲ್ಲಿ 5 ವಿಕೆಟ್‌ ಕಿತ್ತು ವಿಶ್ವದಾಖಲೆ ನಿರ್ಮಿಸಿದ್ದ ಶ್ರೀಲಂಕಾದ ಮಾಜಿ ವೇಗಿ ಚಮಿಂದಾ ವಾಸ್‌ ಅವರ ದಾಖಲೆಯನ್ನೂ ಸಿರಾಜ್‌ ಸರಿಗಟ್ಟಿದ್ದಾರೆ.

ಸಿರಾಜ್‌ ಬೌಲಿಂಗ್‌ ಮಾಡಿದ 2ನೇ ಓವರ್‌ನಲ್ಲೇ ಹ್ಯಾಟ್ರಿಕ್‌ ವಿಕೆಟ್‌ ಸಾಧನೆ ಅವಕಾಶ ಕೈತಪ್ಪಿದರು ಸಹ ಆ ಓವರ್‌ನಲ್ಲಿ 4 ವಿಕೆಟ್‌ ಕಿತ್ತು ಮಿಂಚಿದರು. ಪಂದ್ಯದ ಮೊದಲ ಓವರ್‌ನಲ್ಲೇ ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ದಾಳಿಗೆ ಓಪನರ್‌ ಕುಶಲ್‌ ಪೆರೆರಾ ಶೂನ್ಯಕ್ಕೆ ಔಟಾದರು. ಈ ಬೆನ್ನಲ್ಲೇ ಶ್ರೀಲಂಕಾ ತಂಡದ ಪೆವಿಲಿಯನ್ ಪರೇಡ್‌ ಶುರುವಾಗಿತ್ತು. ಬುಮ್ರಾ ಮತ್ತು ಸಿರಾಜ್‌ ಬಳಿಕ ದಾಳಿಗಿಳಿದ ಹಾರ್ದಿಕ್‌ ಪಾಂಡ್ಯ ಕೂಡ ಕೇವಲ 3 ರನ್‌ಗಳಿಗೆ 3 ವಿಕೆಟ್‌ ಪಡೆದು ಶ್ರೀಲಂಕಾ ತಂಡವನ್ನು 50 ರನ್‌ಗಳಿಗೆ ಆಲ್‌ಔಟ್‌ ಮಾಡುವಲ್ಲಿ ಯಶಸ್ವಿಯಾದರು. ಇದು 39 ವರ್ಷಗಳ ಬಳಿಕ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಶ್ರೀಲಂಕಾ ತಂಡ ಭಾರತದ ಎದುರು ಗಳಿಸಿದ ಅತ್ಯಂತ ಕಡಿಮೆ ಮೊತ್ತವಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago