ದೇಶ

ರಜೆಯಲ್ಲಿದ್ದ ಯೋಧನ ಮನೆಗೆ ನುಗ್ಗಿ ಕಿಡ್ನ್ಯಾಪ್‌ ಮಾಡಿ ಹತ್ಯೆ

ಇಂಫಾಲ್: ರಜೆಯಲ್ಲಿ ಮನೆಯಲ್ಲಿದ್ದ ಯೋಧನನ್ನು ಕಿಡ್ನ್ಯಾಪ್‌ ಮಾಡಿ ಹತ್ಯೆಗೈದಿರುವ ಘಟನೆ ಮಣಿಪುರದಲ್ಲಿ ನಡೆದಿದೆ. ಸೆರ್ಟೊ ತಂಗ್‌ತಾಂಗ್‌ ಕೋಮ್‌ ಹುತಾತ್ಮರಾದ ಯೋಧ.

Advertisement
Advertisement
Advertisement

ರಜೆ ಮೇಲಿದ್ದ ಇವರು ಇಂಫಾಲ್‌ ಪಶ್ಚಿಮ ಜಿಲ್ಲೆಯ ತಮ್ಮ ಮನೆಯಲ್ಲಿದ್ದರು. ಶನಿವಾರ ಅವರನ್ನು ಮನೆಯಿಂದ ಅಪಹರಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಅವರ ಮೃತದೇಹ ಪತ್ತೆಯಾಗಿದೆ ಎಂದು ಸೇನೆ ತಿಳಿಸಿದೆ.

ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅವರ ಮನೆಯಿಂದ ಅಪರಿಚಿತ ಶಸ್ತ್ರಧಾರಿ ವ್ಯಕ್ತಿಗಳು ಅವರನ್ನು ಅಪಹರಿಸಿದ್ದರು. ಈ ವೇಳೆ ಯೋಧನ 10 ವರ್ಷದ ಪುತ್ರ ಕೂಡ ಮನೆಯಲ್ಲಿದ್ದ. ಮನೆಗೆ ನುಗ್ಗಿದ ಶಸ್ತ್ರಧಾರಿಗಳು ತನ್ನ ತಂದೆಯನ್ನು ಹೇಗೆ ಅಪಹರಿಸಿದರು ಎಂಬ ಬಗ್ಗೆ ಮಾಹಿತಿ ನೀಡಿದ್ದಾನೆ.

ಮೂವರು ಮನೆಗೆ ನುಗ್ಗಿ ನನ್ನ ತಂದೆಯನ್ನು ಎಳೆದೊಯ್ದರು. ಅವರು ನನ್ನ ತಂದೆಯ ತಲೆಯ ಮೇಲೆ ಪಿಸ್ತೂಲ್ ಇಟ್ಟು ಬಿಳಿಯ ವಾಹನಕ್ಕೆ ಬಲವಂತವಾಗಿ ಹತ್ತಿಸಿದರು ಎಂದು ಸಂತ್ರಸ್ತ ಯೋಧನ ಪುತ್ರ ಪೊಲೀಸರಿಗೆ ತಿಳಿಸಿದ್ದಾನೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago