ರಾಜ್ಯ

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ: ಉಡುಪಿಯಲ್ಲಿ ಎಫ್​ಐಆರ್ ದಾಖಲು

ಉಡುಪಿ, ಸೆ.18: ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಲಕ್ಷಾಂತರ ರೂಪಾಯಿ ಪಡೆದ ವಂಚಿಸಿದ ಆರೋಪ ಸಂಬಂಧ ಉಡುಪಿಯಲ್ಲಿ ಎಫ್​ಐಆರ್ ದಾಖಲಾಗಿದೆ.

Advertisement
Advertisement
Advertisement

ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ 5 ಲಕ್ಷ ರೂ. ಪಡೆದು ವಂಚನೆ ಎಸಗಿದ್ದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ಸುಧೀನ್​ ಎಂಬುವರು ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್​ ದಾಖಲಿಸಿದ್ದಾರೆ.

ಹಿಂದೂ ಕಾರ್ಯಕರ್ತರೇ ಚೈತ್ರಾ ಕುಂದಾಪುರಳ ಟಾರ್ಗೆಟ್?

ಚೈತ್ರಾ ಕುಂದಾಪುರ ಹಿಂದುತ್ವ, ಕೇಸರಿಯನ್ನೇ ಬಂಡವಾಳವನ್ನಾಗಿಸಿಕೊಂಡು ಕಾರ್ಯಕರ್ತರನ್ನೇ ವಂಚಿಸುತ್ತಿದ್ದರೇ ಎಂಬ ಅನುಮಾನಕ್ಕೆ ಸದ್ಯ ದಾಖಲಾದ ಪ್ರಕರಣಗಳೇ ಪುಷ್ಠಿ ನೀಡುತ್ತವೆ. ಬೈಂದೂರಿನ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿದ ಚೈತ್ರಾ ಆ್ಯಂಡ್ ಗ್ಯಾಂಗ್ ಐದು ಕೋಟಿ ಪಡೆದು ನಂತರ ವಂಚಿಸಿದೆ.

ಈ ನಡುವೆ ಮತ್ತೊಂದು ವಂಚನೆ ಪ್ರಕರಣ ದಾಖಲಿಸಿದ ಸುಧೀನ್ ಬಿಜೆಪಿ ಕಾರ್ಯಕರ್ತ ಬಟ್ಟೆ ಅಂಗಡಿ ಉದ್ಯಮ ನಡೆಸಲು ನಿರ್ಧರಿಸಿದ್ದಾರೆ. ಆದರೆ ಇವರಿಗೂ ಚೈತ್ರಾ ಕುಂದಾಪುರ ಐದು ಲಕ್ಷ ವಂಚಿಸಿದ್ದಾರೆ ಎಂಬುದು ಇದೀಗ ಬೆಳಕಿಗೆ ಬಂದಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago