ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ ಹಾಸನ ಜಿಲ್ಲೆ ಬೇಲೂರು ಮತ್ತು ಹಳೆಬೀಡಿನಲ್ಲಿರುವ ಹಾಗೂ ಮೈಸೂರು ಜಿಲ್ಲೆ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ.
ಸೋಮನಾಥಪುರದಲ್ಲಿರುವ ಕೇಶವ ದೇವಸ್ಥಾನ, ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ.
ಈ ದೇವಾಲಯಗಳು ಕಲೆ, ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದ್ದು, ಪ್ರಸ್ತುತ ಮೂರು ಸ್ಮಾರಕಗಳು ಯುನೆಸ್ಕೋ ತಾಣವಾಗಿ ಘೋಷಣೆಯಾಗಿವೆ.
12-13 ನೇ ಶತಮಾನದಲ್ಲಿ ನಿರ್ಮಿಸಲಾದ ಹೊಯ್ಸಳರ ಶೈಲಿಯ ಶಿಲ್ಪಕಲಾ ಶೈಲಿಯ ದೇಗುಲಗಳು, ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಮೂರು ದೇವಾಲಯಗಳಿಂದ ಇಲ್ಲಿ ಪ್ರತಿನಿಧಿಸಲ್ಪಟ್ಟಿದೆ.
ಒಂದು, ಎರಡು ಮತ್ತು ನಾಲ್ಕನೇ ಮಾನದಂಡದಲ್ಲಿ ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಆಯ್ಕೆ ಮಾಡಲಾಗಿದೆ.
ರಾಜ್ಯದ ಹೊಯ್ಸಳ ಸಾಮ್ರಾಜ್ಯದ ದೇವಾಲಯಗಳನ್ನ ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಸೇರಿಸಲಾಗಿದ್ದು, ಈ ಪ್ರತಿಷ್ಠಿತ ಮಾನ್ಯತೆ ಪಡೆದ ಭಾರತದ 42ನೇ ತಾಣವಾಗಿದೆ.