ನವದೆಹಲಿ: ಕಾವೇರಿ ನೀರು ವಿಚಾರದಲ್ಲಿ ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಣಯ ದುರಂತ. ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಹೇಳಿದ್ದಾರೆ.
ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ವಿಚಾರವಾಗಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ. ಇವತ್ತಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮಹತ್ತರವಾದ ಪೆಟ್ಟು. ಬೆಂಗಳೂರಿಗೆ ಕುಡಿಯುವ ನೀರು ಬೇಕು. ಮುಂದೇನು ಆಗುತ್ತೆ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾವು ಎಲ್ಲೋ ಒಂದು ಕಡೆ ಎಡವಿದ್ದೇವೆ. ನಮ್ಮ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯಕ್ಕೆ ಮೊದಲು ಧರಣಿ ಮಾಡಿದ್ದೆ. ಧರಣಿ ಕೂತು ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಇಂದು ಸದನದಲ್ಲಿ ಕಾವೇರಿ ವಿಚಾರ ಎತ್ತಿದ್ದೇನೆ. ಕರ್ನಾಟಕ, ತಮಿಳುನಾಡಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಅಧಿಕಾರಿಗಳ ತಂಡ ಸಲ್ಲಿಸಲಿ. ನಾವು ಒಪ್ಪಿಕೊಳ್ಳುತ್ತೇವೆ, ಆದರೆ ತಮಿಳುನಾಡು ಒಪ್ಪಿಕೊಳ್ಳುತ್ತಿಲ್ಲ. ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟ್ಟು ಇದೆ. ನಮ್ಮ ರಾಜಕಾರಣಿಗಳಲ್ಲಿ ಇಲ್ಲ ಎಂದು ಹೇಳಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…