ಚಲನಚಿತ್ರ

ಹೊಸ ಬಾಳಿಗೆ ಕಾಲಿಡಲು ಸಿದ್ಧರಾದ ತೃಷಾ ಕೃಷ್ಣನ್

ಕನ್ನಡದ ‘ಪವರ್’ ಚಿತ್ರದ ನಟಿ ತೃಷಾ ಕೃಷ್ಣನ್ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಡಲು ಸಜ್ಜಾಗಿದ್ದಾರೆ. ಮಲಯಾಳಂ ಖ್ಯಾತ ನಿರ್ಮಾಪಕನ ಜೊತೆ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಈ ಸುದ್ದಿ ಕಾಲಿವುಡ್ ಗಲ್ಲಿಯಲ್ಲಿ ಗಾಸಿಪ್‌ ಪ್ರಿಯರ ಚರ್ಚೆಗೆ ಗ್ರಾಸವಾಗಿದೆ.

Advertisement
Advertisement
Advertisement

40 ವರ್ಷ ಪೂರೈಸಿರೋ ನಟಿ ಬಗ್ಗೆ ಮದುವೆ ಮ್ಯಾಟರ್ ಮತ್ತೆ ಮುನ್ನೆಲೆಗೆ ಬರುತ್ತಿದೆ. ಮಲಯಾಳಂನ ಖ್ಯಾತ ನಿರ್ಮಾಪಕನ ಜೊತೆ ತೃಷಾ ಎಂಗೇಜ್ ಆಗಿದ್ದು, ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ನಟಿ ಕಾಲಿಡಲಿದ್ದಾರೆ ಎನ್ನಲಾಗ್ತಿದೆ. ಮದುವೆಯಾಗುವ ವರನ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ.

ಇಬ್ಬರ ಮದುವೆಗೆ ಗುರುಹಿರಿಯರ ಸಮ್ಮತಿ ಕೂಡ ಸಿಕ್ಕಿದೆ. ತನ್ನನ್ನು ಇಷ್ಟಪಡುವ ವ್ಯಕ್ತಿಯ ಜೊತೆ ತೃಷಾ ಮದುವೆಯಾಗಲು ನಿರ್ಧರಿಸಿದ್ದಾರಂತೆ. ಈ ಹಿಂದೆ ಉದ್ಯಮಿ ವರುಣ್ ಜೊತೆ ಅದ್ದೂರಿಯಾಗಿ ನಿಶ್ಚಿತಾರ್ಥವಾಗಿತ್ತು. ಹಲವು ವೈಯಕ್ತಿಕ ಕಾರಣ, ಭಿನ್ನಾಭಿಪ್ರಾಯಗಳಿಂದ ವರುಣ್ ಜೊತೆಗಿನ ಸಂಬಂಧ ಮುರಿದು ಬಿತ್ತು. 2015ರಲ್ಲಿ ನಡೆದ ಈ ಕಹಿ ಘಟನೆಯಿಂದ ಹೊರಬಂದು ಈಗ ಸಿನಿಮಾಗಳಲ್ಲಿ ಪವರ್ ಚಿತ್ರದ ನಟಿ ಮತ್ತೆ ಸಿನಿಮಾದತ್ತ ಮುಖ ಮಾಡಿದ್ದಾರೆ.

ಪೊನ್ನಿಯನ್ ಸೆಲ್ವನ್’ ಚಿತ್ರದ ಸಕ್ಸಸ್ ನಂತರ ಮತ್ತೆ ಸಾಲು ಸಾಲು ಬಿಗ್ ಪ್ರಾಜೆಕ್ಟ್‌ಗಳಿಗೆ ತ್ರಿಷಾ ನಾಯಕಿಯಾಗಿದ್ದಾರೆ. ಕೆರಿಯರ್ ಸಕ್ಸಸ್ ಜೊತೆಗೆ ವೈಯಕ್ತಿಕ ಜೀವನದಲ್ಲೂ ತನ್ನ ಸಂಗಾತಿಯನ್ನ ನಟಿ ಕಂಡುಕೊಂಡಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಮಾಹಿತಿ ಸಿಗಲಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago