ವಾಣಿಜ್ಯ ಸುದ್ದಿ

ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಆಧಾರ್, ಪ್ಯಾನ್ ಲಿಂಕ್ ಮಾಡುವುದಕ್ಕೆ ಸೆಪ್ಟೆಂಬರ್ 30 ಕೊನೆಯ ದಿನ

ನವದೆಹಲಿ, ಸೆ. 20: ಪಬ್ಲಿಕ್ ಪ್ರಾವಿಡೆಂಟ್ ಫಂಡ್ (PPF), ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ (NSC), ಹಿರಿಯ ನಾಗರಿಕರ ಸೇವಿಂಗ್ಸ್ ಸ್ಕೀಮ್ (NCSS) ಇತ್ಯಾದಿ ಸಣ್ಣ ಉಳಿತಾಯ ಯೋಜನೆಗಳನ್ನು ಹೊಂದಿರುವವರ ಗಮನಕ್ಕೆ ಈ ಸುದ್ದಿ. ನೀವು ಯಾವುದಾದರೂ ಉಳಿತಾಯ ಯೋಜನೆಗಳನ್ನು ಮಾಡಿಸಿದ್ದರೆ, ಆದಷ್ಟೂ ಬೇಗ ನಿಮ್ಮ ಆಧಾರ್ ಮತ್ತು ಪ್ಯಾನ್ ನಂಬರ್ ಲಿಂಕ್ ಮಾಡಿ. ಸೆಪ್ಟೆಂಬರ್ 30ರವರೆಗೂ ಗಡುವು ಇದ್ದು ಕೇವಲ 9 ದಿನ ಮಾತ್ರ ಬಾಕಿ ಇದೆ.

ಕೇಂದ್ರ ಹಣಕಾಸು ಸಚಿವಾಲಯ 2023ರ ಮಾರ್ಚ್ 31ರಂದು ಹೊರಡಿಸಿದ ಅಧಿಸೂಚನೆ ಪ್ರಕಾರ ಪಿಪಿಎಫ್, ಎನ್​ಎಸ್​ಸಿ ಮತ್ತಿತರ ಸ್ಮಾಲ್ ಸೇವಿಂಗ್ ಸ್ಕೀಮ್​ಗಳಿಗೆ ಆಧಾರ್ ಮತ್ತು ಪ್ಯಾನ್ ಅನ್ನು ಸಲ್ಲಿಸುವುದು ಕಡ್ಡಾಯ. ಹೊಸದಾಗಿ ಸ್ಕೀಮ್ ಪಡೆಯುವವರು ಮಾತ್ರವಲ್ಲ, ಈಗಾಗಲೇ ಆ ಯೋಜನೆಗಳನ್ನು ಮಾಡಿಸಿದ್ದವರೂ ಕೂಡ ಆಧಾರ್ ಮತ್ತು ಪ್ಯಾನ್ ಅನ್ನು ಸಲ್ಲಿಸಬೇಕಾಗುತ್ತದೆ. ಸೆಪ್ಟೆಂಬರ್ 30ರೊಳಗೆ ನೀವು ಸ್ಕೀಮ್ ಪಡೆದಿರುವ ಅಂಚೆ ಕಚೇರಿ ಅಥವಾ ಬ್ಯಾಂಕ್ ಶಾಖಾ ಕಚೇರಿಗೆ ಹೋಗಿ ಆಧಾರ್ ನಂಬರ್ ಅನ್ನು ನೀಡಬೇಕಾಗುತ್ತದೆ.

ಆಧಾರ್ ಸಲ್ಲಿಸದಿದ್ದರೆ ಏನಾಗುತ್ತದೆ?

ಸಣ್ಣ ಉಳಿತಾಯ ಯೋಜನೆಗಳಿಗೆ ಆಧಾರ್ ಮತ್ತು ಪ್ಯಾನ್ ನಂಬರ್ ಅನ್ನು ನೀಡದೇ ಇದ್ದರೆ ಹೂಡಿಕೆ ಸ್ಥಗಿತಗೊಳ್ಳುತ್ತದೆ. ಅಂದರೆ ಈ ಸ್ಕೀಮ್​ಗಳಲ್ಲಿ ತೊಡಗಿಸಿರುವ ನಿಮ್ಮ ಹಣ ಫ್ರೀಜ್ ಆಗುತ್ತದೆ. ಅದನ್ನು ನೀವು ವಿತ್​ಡ್ರಾ ಮಾಡಲು ಆಗುವುದಿಲ್ಲ. ಬಡ್ಡಿ ಹಣವೂ ಜಮೆ ಆಗುವುದಿಲ್ಲ. ನೀವು ಯೋಜನೆಯಲ್ಲಿ ಹಣ ಠೇವಣಿ ಇಡುವುದಕ್ಕೂ ನಿರ್ಬಂಧ ಇರುತ್ತದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago