ಅಂತರಾಷ್ಟ್ರೀಯ

ಕೆನಡಾದಲ್ಲಿರುವ ಭಾರತೀಯರಿಗೆ ಜಾಗರೂಕರಾಗಿರುವಂತೆ ಭಾರತ ಸಲಹೆ

ನವದೆಹಲಿ, ಸೆ.20 : ಕೆನಡಾದಲ್ಲಿ ರಾಜಕೀಯ ಪ್ರೇರಿತ ಹಿಂಸಾಚಾರ, ದ್ವೇಷದ ಅಪರಾಧಗಳು ,ಹೆಚ್ಚುತ್ತಿರುವ ಭಾರತ ವಿರೋಧಿ ಚಟುವಟಿಕೆಗಳಿಂದಾಗಿ ಭಾರತೀಯ ಪ್ರಜೆಗಳಿಗೆ ಜಾಗರೂಕರಾಗಿರುವಂತೆ ಭಾರತ ಸರ್ಕಾರ ಸಲಹೆ ನೀಡಿದೆ.

Advertisement
Advertisement
Advertisement

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡ ಇದ್ದಿರುವ ಸಾಧ್ಯತೆ ಇದೆ ಎಂದು ಕೆನಡಾ ಪ್ರಧಾನಿ ಜಸ್ಟೀನ್‌ ಟ್ರುಡೋ ಆರೋಪಿಸಿದ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಕೆನಡಾ ತನ್ನ ನಾಗರಿಕರಿಗೆ ಪ್ರಯಾಣ ಸಲಹೆಯನ್ನು ನೀಡಿದ ಒಂದು ದಿನದ ನಂತರ ಭಾರತ ಸರ್ಕಾರದಿಂದ ಸಲಹೆ ಜಾರಿಗೊಳಿಸಲಾಗಿದೆ. ಭಾರತೀಯ ಪ್ರಜೆಗಳು ಭಾರತ ವಿರೋಧಿ ಚಟುವಟಿಕೆಗೆ ಗುರಿಯಾಗಿರುವ ಕೆನಡಾ ಪ್ರದೇಶಗಳಿಗೆ ಪ್ರಯಾಣಿಸದಂತೆ, ಹಾಗೂ ಅತ್ಯಂತ ಜಾಗರೂಕರಾಗಿರಿ ಎನ್ನುವ ಸಲಹೆ ನೀಡಿದೆ.

ಇತ್ತೀಚೆಗೆ ಬೆದರಿಕೆಗಳು ವಿಶೇಷವಾಗಿ ಭಾರತೀಯ ರಾಜತಾಂತ್ರಿಕರು ಮತ್ತು ಭಾರತೀಯ ವಿಭಾಗಗಳನ್ನು ಗುರಿಯಾಗಿಸಿಕೊಂಡಿವೆ.

ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಹೈಕಮಿಷನ್ ಮತ್ತು ಕಾನ್ಸುಲೇಟ್‌ಗಳು ಕೆನಡಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿ ಇರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago