ರಾಜಕೀಯ

ಜೆಡಿಎಸ್​-ಬಿಜೆಪಿ ಮೈತ್ರಿಗೆ ಪೆಟ್ಟು ನೀಡಲು ಪ್ರಮುಖ ಅಸ್ತ್ರ ಪ್ರಯೋಗಿಸಲು ಮುಂದಾದ ಕಾಂಗ್ರೆಸ್

ಬೆಂಗಳೂರು, ಸೆ. 21: ಬಿಜೆಪಿ ಹಾಗೂ ಜೆಡಿಎಸ್​ ನಡುವಿನ ಮೈತ್ರಿ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇಂದು (ಸೆ.21) ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದು, ಬಿಜೆಪಿ ಹೈಕಮಾಂಡ್​ ನಾಯಕರ ಜೊತೆ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಇಂದು ರಾತ್ರಿ ವೇಳೆ ಮೈತ್ರಿ ಮಾತುಕತೆ ಮುಗಿಯಲಿದ್ದು, ನಾಳೆ(ಸೆ.22) ದೆಹಲಿಯಲ್ಲಿ ಉಭಯ ಪಕ್ಷಗಳ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಸಹ ಮೈತ್ರಿಗೆ ಪೆಟ್ಟು ನೀಡಲು ಆಪರೇಷನ್ ಹಸ್ತ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿದ್ದು, ಇದಕ್ಕೆ ಹೈಕಮಾಂಡ್​, ರಾಜ್ಯ ಕಾಂಗ್ರೆಸ್​ ನಾಯಕರಿಗೆ ಗ್ರೀನ್​ ಸಿಗ್ನಲ್ ನೀಡಿದೆ.

Advertisement
Advertisement
Advertisement

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ನಿನ್ನೆ(ಸೆ 20) ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದು, ಲೋಕಸಭಾ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಮಹತ್ವ ಚರ್ಚೆ ನಡೆಸಿದರು. ಅಲ್ಲದೇ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್​ ಸೇರಲು ಇಚ್ಛಿಸಿರುವ 15 ನಾಯಕರ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಇನ್ನು ಇದೇ ವೇಳೆ ಮೈತ್ರಿಗೆ ಪೆಟ್ಟು ನೀಡಲು ಆಪರೇಶನ್ ಹಸ್ತಕ್ಕೆ ಹೈಕಮಾಂಡ್​ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.

ಜೆಡಿಎಸ್​ ಹಾಗೂ ಬಿಜೆಪಿಯ ನಾಯಕರು ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರುವವರಿದ್ದರೆ ಸೇರಿಸಿಕೊಳ್ಳಿ. ಲೋಕಸಭಾ ಚುನಾವಣೆಗೆ ಲಾಭ ಆಗುವ ರೀತಿ ಆಪರೇಷನ್ ಹಸ್ತ ಮಾಡಬೇಕು ಎಂದು ಹೈಕಮಾಂಡ್​, ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಇನ್ನು ಸಭೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ತಂತ್ರಗಾರಿಕೆ ಕುರಿತು ಸುದೀರ್ಘ ಮಾತುಕತೆ ನಡೆದಿದೆ. ಸಚಿವ ಚಲುವರಾಯಸ್ವಾಮಿ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮತ್ತು ಕೆಲ ಪ್ರಮುಖ ನಾಯಕರು ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಅಲ್ಲದೆ, ಒಕ್ಕಲಿಗರು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಲಾಯಿತು. ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಬಹುದು ಎಂಬ ಮಾಹಿತಿ ಸಂಗ್ರಹ ಮಾಡಲಾಯಿತು. ಅಲ್ಲದೆ, JDS, ಬಿಜೆಪಿ ಮೈತ್ರಿ ಮಣಿಸಲು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ಕೂಡ ನಡೆದಿದೆ ಎನ್ನಲಾಗುತ್ತಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago