ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ – ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

By: Ommnews

Date:

Share post:

ಮಂಗಳೂರು, ಸೆ. 21: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ 88 ಲಕ್ಷ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಂಜುನಾಥ ಖಾರ್ವಿ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement
Advertisement
Advertisement

ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಸಂಸ್ಥೆಯಿಂದ ಮಂಜುನಾಥ ಖಾರ್ವಿ ಮೀನು ಖರೀದಿ ಮಾಡಿದ್ದರು. ಅಲ್ಲದೆ ಫೆಡರೇಷನ್‌ಗೆ ಮೀನು ಮಾರಾಟವಾದ ಕಮಿಷನ್‌ ಕೂಡ ಬಾಕಿ ಇರಿಸಿದ್ದರು. ಈ ಮೊತ್ತಕ್ಕೆ ಮೂರು ಚೆಕ್‌ಗಳನ್ನು ಫೆಡರೇಷನ್‌ಗೆ ನೀಡಿದ್ದರು. ಆ ಚೆಕ್‌ಗಳನ್ನು ಬ್ಯಾಂಕ್‌ಗೆ ನೀಡಿದಾಗ ಖಾತೆಯಲ್ಲಿ ಹಣವಿಲ್ಲದೆ ಅಮಾನತುಗೊಂಡಿದ್ದವು. ಇದಕ್ಕೆ ಸಂಬಂಧಿಸಿದ ನೋಟಿಸ್‌ ನೀಡದರೂ ಬಾಕಿ ಮೊತ್ತ ನೀಡಿರಲಿಲ್ಲ. ಈ ಕುರಿತು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಲಾಗಿತ್ತು. ಅವರ ಮೇಲೆ ಮೂರು ಪ್ರಕರಣ ದಾಖಲಾಗಿತ್ತು.

ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ ಸಂದರ್ಭದಲ್ಲಿ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section