ವಿಜ್ಞಾನ

ಮರುಜೀವ ಪಡೆಯಲಿದೆಯಾ ಚಂದ್ರನ ಅಂಗಳದಲ್ಲಿ ಇರುವ ವಿಕ್ರಂ ಲ್ಯಾಂಡರ್ ಹಾಗೂ ಪ್ರಗ್ಯಾನ್ ರೋವರ್?

ನವದೆಹಲಿ: ಚಂದ್ರಯಾನ-3 ಯೋಜನೆಯ ಮಹತ್ವದ ಘಟ್ಟವೊಂದಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 22 ರಂದು ಚಂದ್ರದ ದಕ್ಷಿಣ ಧ್ರುವದಲ್ಲಿ ಸೂರ್ಯೋದಯ ಆಗಲಿದೆ. ಆಗ ಚಂದ್ರನ ಅಂಗಳದಲ್ಲಿ ಇರುವ ವಿಕ್ರಂ ಲ್ಯಾಂಡರ್ ಹಾಗೂ ಪ್ರಗ್ಯಾನ್ ರೋವರ್ ಮತ್ತೆ ಮರುಜೀವ ಪಡೆಯುತ್ತಾ ಅನ್ನೋ ಕೌತುಕವನ್ನ ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ.

Advertisement
Advertisement
Advertisement

ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಶಿವಶಕ್ತಿ ಪಾಯಿಂಟ್ ಮೇಲೆ ಸೂರ್ಯನ ಬೆಳಕು ಚೆಲ್ಲಲಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಮಿಷನ್‌ನ ಲ್ಯಾಂಡರ್ ಮತ್ತು ರೋವರ್ ಮಾಡ್ಯೂಲ್‌ಗಳಾದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್‌ಗಳನ್ನ ಪುನರುಜ್ಜೀವನಗೊಳಿಸಲು ಸಖಲ ತಯಾರಿ ನಡೆಸುತ್ತಿದೆ.

ಕಳೆದ ತಿಂಗಳು ಆಗಸ್ಟ್ 23 ರಂದು ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಆ ನಂತರ ವಿಕ್ರಂ ಲ್ಯಾಂಡರ್ ಒಳಗಿನಿಂದ ಪ್ರಗ್ಯಾನ್ ರೋವರ್ ಚಂದ್ರನ ಅಂಗಳದಲ್ಲಿ ಸಂಚಾರ ಮಾಡಿತ್ತು. ಇದಾದ 14 ಭೂಮಿಯ ದಿನಗಳ ಬಳಿಕ ಚಂದ್ರನ ದಕ್ಷಿಣ ಧ್ರುವದಲ್ಲಿ ರಾತ್ರಿ ಆರಂಭವಾಗುವುದಕ್ಕೂ ಮುನ್ನವೇ ಮತ್ತೊಂದು ಬಾರಿ ವಿಕ್ರಂ ಲ್ಯಾಂಡರ್ ಅನ್ನು ಕಿಕ್ ಸ್ಟಾರ್ಟ್ ಮಾಡಿ 40 ಸೆಂಟಿಮೀಟರ್‌ಗಳಷ್ಟು ಮೇಲಕ್ಕೆ ಎತ್ತರಿಸಿ, ಮತ್ತೆ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿತ್ತು. ನಂತರ ಎರಡೂ ಉಪಕರಣಗಳು ನಿದ್ರೆಗೆ ಜಾರಿದ್ದವು.

ಇದೀಗ ಸುಸ್ಥಿತಿಯಲ್ಲಿ ಇರುವ ವಿಕ್ರಂ ಲ್ಯಾಂಡರ್ ಹಾಗೂ ಪ್ರಗ್ಯಾನ್ ರೋವರ್, ಶುಕ್ರವಾರ ಸೂರ್ಯೋದಯ ಆದ ಬಳಿಕ ಮತ್ತೆ ನಿದ್ರೆಯಿಂದ ಎಚ್ಚರ ಆಗುವ ನಿರೀಕ್ಷೆ ಇದೆ. ಒಂದು ವೇಳೆ ಈ ಉಪಕರಣಗಳು ಕೆಲಸ ಮಾಡದೇ ಇದ್ದರೆ ಇವುಗಳು ಚಂದ್ರನ ಅಂಗಳದಲ್ಲಿ ಶಾಶ್ವತವಾಗಿ ಭಾರತದ ಬಾಹ್ಯಾಕಾಶ ಪ್ರಯೋಗದ ರಾಯಭಾರಿಗಳ ರೀತಿಯಲ್ಲಿ ಉಳಿದು ಹೋಗಲಿವೆ. ಒಂದು ವೇಳೆ ಈ ಕಾರ್ಯ ಯಶಸ್ವಿಯಾದರೆ ಇಸ್ರೋ ಬಾಹ್ಯಾಕಾಶ ಪರಿಶೋಧನೆಯಲ್ಲಿ ಮಹತ್ವದ ಮೈಲುಗಲ್ಲನ್ನು ಸಾಧಿಸಲಿದೆ. ಜೊತೆಗೆ ಮುಂದಿನ 14 ದಿನಗಳ ಕಾಲ ಚಂದ್ರನ ಅಂಗಳದಲ್ಲಿ ಇನ್ನಷ್ಟು ಮಾಹಿತಿಗಳನ್ನ ಸಂಗ್ರಹಿಸಲು ನೆರವಾಗಲಿದೆ.

ಈ ಬಾರಿ ಚಂದ್ರನ ಮೈಲ್ಮೈ ವೈಶಿಷ್ಟ್ಯಗಳು, ಉಷ್ಣ ವಾತಾವರಣದ ಗುಣಲಕ್ಷಣಗಳು ಹಾಗೂ ಮಣ್ಣಿನ ಅಂಶಗಳನ್ನ ಅಧ್ಯಯನ ನಡೆಸುವ ಉದ್ದೇಶ ಹೊಂದಲಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago