ಮಂಗಳೂರು, ಸೆ. 22. ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆದೆ. ಒಟ್ಟು 24 ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಕ್ಟೋಬರ್ 8ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಹುದ್ದೆಯ ಕುರಿತ ಮಾಹಿತಿ:-
ಸಂಸ್ಥೆ- ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ಅಸಿಸ್ಟೆಂಟ್
ಜನರಲ್ ಮ್ಯಾನೇಜರ್- 2
ಸೀನಿಯರ್ ಮ್ಯಾನೇಜರ್- 1
ಮ್ಯಾನೇಜರ್- 8
ಡೆಪ್ಯುಟಿ ಮ್ಯಾನೇಜರ್- 1
ಅಸಿಸ್ಟೆಂಟ್ ಮ್ಯಾನೇಜರ್- 12
ವಿದ್ಯಾರ್ಹತೆ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಮೆಕ್ಯಾನಿಕಲ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಪದವಿ
ಸೀನಿಯರ್ ಮ್ಯಾನೇಜರ್- ಡಿಗ್ರಿ, ಡಿಪ್ಲೊಮಾ
ಮ್ಯಾನೇಜರ್- ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ನೇವಲ್ ಆರ್ಕಿಟೆಕ್ಚರ್ ಎಂಜಿನಿಯರಿಂಗ್, ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಪದವಿ
ಡೆಪ್ಯುಟಿ ಮ್ಯಾನೇಜರ್- ಸಿಎ, ಕಾಸ್ಟ್ ಮ್ಯಾನೇಜ್ಮೆಂಟ್ ಅಕೌಂಟೆಂಟ್
ಅಸಿಸ್ಟೆಂಟ್ ಮ್ಯಾನೇಜರ್- ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ನೇವಲ್ ಆರ್ಕಿಟೆಕ್ಚರ್/ ಮಾರಿನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಪದವಿ
ವಯೋಮಿತಿ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 45 ವರ್ಷ ಸೀನಿಯರ್ ಮ್ಯಾನೇಜರ್- 40 ವರ್ಷ ಮ್ಯಾನೇಜರ್- 40 ವರ್ಷ ಡೆಪ್ಯುಟಿ ಮ್ಯಾನೇಜರ್- 35 ವರ್ಷ ಅಸಿಸ್ಟೆಂಟ್ ಮ್ಯಾನೇಜರ್- 30 ವರ್ಷ
ವಯೋಮಿತಿ ಸಡಿಲಿಕೆ:
SC ಅಭ್ಯರ್ಥಿಗಳು- 5 ವರ್ಷ OBC (NCL) ಅಭ್ಯರ್ಥಿಗಳು- 3 ವರ್ಷ PwBD ಅಭ್ಯರ್ಥಿಗಳು- 10 ವರ್ಷ
ವೇತನ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಮಾಸಿಕ ₹1,46,560 ಸೀನಿಯರ್ ಮ್ಯಾನೇಜರ್- ಮಾಸಿಕ ₹1,28,240 ಮ್ಯಾನೇಜರ್- ಮಾಸಿಕ ₹ 1,09,920 ಡೆಪ್ಯುಟಿ ಮ್ಯಾನೇಜರ್- ಮಾಸಿಕ ₹ 91,600 ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 73,280
ಆಯ್ಕೆ ಪ್ರಕ್ರಿಯೆ:
ಪವರ್ ಪಾಯಿಂಟ್ ಪ್ರೆಸೆಂಟೇಶನ್ ವಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಉದ್ಯೋಗದ ಸ್ಥಳ:
ಮಲ್ಪೆ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಲು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/09/2023 ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 8, 2023.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…